ನವದೆಹಲಿ: ಇಂದು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದಂತ ಕೇಂದ್ರ ಹಣಕಾಸೂ ಮಸೂದೆ ಅಂಗೀಕಾರಗೊಂಡಿದೆ. ಈ ಬಳಿಕ ಕಲಾಪ ನಾಳೆಗೆ ಮುಂದೂಡಿಕೆಯಾಗಿದೆ.
ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ಕೇಂದ್ರ ಮಧ್ಯಂತರ ಬಜೆಟ್ 2024-25 ಅನ್ನು ಮಂಡಿಸಿದರು. ತಮ್ಮ ಭಾಷಣದ ಬಳಿಕ ಲೋಕಸಭೆಯನ್ನು ಕೇಂದ್ರ ಹಣಕಾಸು ಮಸೂದೆ ಅಂಗೀಕಾರಕ್ಕೆ ಕೋರಿದರು.
ಸ್ಪೀಕರ್ ಅವರು ನಿರ್ಮಲಾ ಸೀತಾರಾಮ್ ಅವರು ಮಂಡಿಸಿದಂತ ಕೇಂದ್ರ ಹಣಕಾಸು ಮಸೂದೆಯನ್ನು ಮತಕ್ಕೆ ಹಾಕಿದರು. ಆಗ ಸರ್ವಾನುಮತದಿಂದ ಮಸೂದೆ ಅಂಗೀಕಾರವನ್ನು ಪಡೆದಿದೆ. ಈ ಬಳಿಕ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ.
ದೇಶದ ‘ತೆರಿಗೆದಾರ’ರಿಗೆ ಬಿಗ್ ರಿಲೀಫ್: ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ- ನಿರ್ಮಲಾ ಸೀತಾರಾಮನ್
ನವದೆಹಲಿ: ದೇಶದ ತೆರಿಗೆದಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಈ ಬಾರಿ ಕೇಂದ್ರ ಬಜೆಟ್ ನಲ್ಲಿ ಯಾವುದೇ ತೆರಿಗೆಯನ್ನು ಹೆಚ್ಚಳ ಮಾಡುತ್ತಿಲ್ಲ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, 2024 ರ ಮಧ್ಯಂತರ ಬಜೆಟ್ನಲ್ಲಿ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
7 ಲಕ್ಷದವರೆಗೆ ಆದಾಯ ಗಳಿಸೋರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತಿದೆ. ಅದಕ್ಕಿಂತ ಹೆಚ್ಚು ಆದಾಯ ಗಳಿಸುತ್ತಾ ಇರೋರಿಗೆ ಈ ಹಿಂದಿನ ತೆರಿಗೆಯಂತೆ ತೆರಿಗೆ ಮುಂದುವರೆಯಲಿದೆ. ಅದರ ಬದಲಾಗಿ ಯಾವುದೇ ತೆರಿಗೆ ಹೆಚ್ಚಳವಿಲ್ಲ ಎಂಬುದಾಗಿ ಹೇಳಿದ್ದಾರೆ.
Good News: ‘ಕೇಂದ್ರ ಸರ್ಕಾರ’ದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲು ‘ಲಖ್ ಪತಿ ದೀದಿ ಯೋಜನೆ’ ಜಾರಿ
ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ನಿರ್ಮಲಾ ಸೀತಾರಾಮನ್ ಅವರು, 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.
ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ: ‘ಆಯುಷ್ಮಾನ್ ಆರೋಗ್ಯ ಯೋಜನೆ’ ಜಾರಿ
ನವದೆಹಲಿ: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡುತ್ತಿರುವಂತ ಅವರು, ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ ಎಂಬುದಾಗಿ ಹೇಳಿದರು.
ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂಬುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು