ಮಂಡ್ಯ: ಜಿಲ್ಲೆಯ ಕೆರಗೋಡಿನಲ್ಲಿನ ಹನುಮಧ್ವಜ ವಿವಾದದ ಬಳಿಕ, ಜಿಲ್ಲಾಡಳಿತದಿಂದ ಮತ್ತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗ ಎಚ್ಚರಿಕೆ ವಹಿಸಿದೆ. ಅದರ ಸಲುವಾಗಿ ಮಹತ್ವದ ಕ್ರಮವನ್ನು ಕೈಗೊಂಡಿದೆ. ಒಂದು ವೇಳೆ ನೀವು ಮಂಡ್ಯ ಹನುಮಧ್ವಜ ವಿವಾದದ ಸಂಬಂಧ ಏನಾದ್ರೂ ಹೀಗೆ ಮಾಡಿದ್ರೇ, ನಿಮ್ಮ ವಿರುದ್ಧ ಕೇಸ್ ಫಿಕ್ಸ್ ಆಗಲಿದೆ.
ಈ ಕುರಿತಂತೆ ಮಂಡ್ಯ ಜಿಲ್ಲಾಡಳಿತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ಸೂಕ್ಷ್ಮ ವಿಚಾರವಾಗಿದೆ ಎಂದಿದೆ.
ಈ ಸಂಬಂಧ ಯಾರಾ ಆಗಲಿ ಸಾಮಾಜಿಕ ಜಾಲತಾಣಗಳಾದ ಎಕ್ಸ್, ಫೇಸ್ ಬುಕ್, ವಾಟ್ಸ್ ಆಪ್, ಇನ್ ಸ್ಟಾಗ್ರಾಂ, ಯೂಟ್ಯೂಬ್ ಇತ್ಯಾದಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಸ್ಥ್ಯಕ್ಕೆ ಭಂಗತರುವ ಚಿತ್ರಗಳು, ವೀಡಿಯೋಗಳು, ಪ್ರಚೋದನಕಾರಿ ಹೇಳಿಕೆಗಳು, ಪೋಸ್ಟರ್ ಗಳು ಹಾಗೂ ಉದ್ರೇಕಕಾರಿ ಭಾಷಣಗಳುವಂತಿಲ್ಲ.
ಒಂದು ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಉದ್ರೇಕಕಾರಿ ಭಾಷಣ, ಪೋಸ್ಟರ್ ಕಳುಹಿಸಿದ್ರೇ, ಇದಕ್ಕೆ ಪ್ರಚೋದನೆ ನೀಡಿದ್ರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಸಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ಮಂಡ್ಯ ಜಿಲ್ಲಾಡಳಿತವು ತೀವ್ರತರವಾದ ನಿಗಾ ಇಟ್ಟಿರುತ್ತದೆ. ಇದನ್ನು ಸೋಷಿಯಲ್ ಮೀಡಿಯಾ ಬಳಸೋರು ಗಮನಿಸಿ ಅಂತ ತಿಳಿಸಿದೆ.
ಕುಮಾರಸ್ವಾಮಿ ‘ಕೇಸರಿ ಶಾಲು’ ಹಾಕಬಾರದಿತ್ತು – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ
BREAKING : ಜಾರ್ಖಂಡ್ ಮಾಜಿ ಸಿಎಂ ‘ಹೇಮಂತ್ ಸೊರೆನ್’ 5 ದಿನ ‘ED ಕಸ್ಟಡಿ’ಗೆ ನೀಡಿದ ಕೋರ್ಟ್