ನವದೆಹಲಿ: ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. ಇದರಿಂದ ನಮಗೆ ಅನ್ಯಾಯ ಆಗ್ತಾ ಇದೆ. ಹೀಗಾಗಿ ನಮಗೆ ಪ್ರತ್ಯೇಕ ರಾಷ್ಟ್ರದ ಕೂಗು ಅವಶ್ಯಕತೆ ಇದೆ ಎಂಬ ಸಂಸದ ಡಿ.ಕೆ ಸುರೇಶ್ ಹೇಳಿಕೆ ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿತು.
ಸಂಸದ ಡಿ.ಕೆ ಸುರೇಶ್ ಅವರು ನೀಡಿದಂತ ಪ್ರತ್ಯೇಕ ರಾಷ್ಟ್ರದ ಹೇಳಿಕೆ ಇಂದು ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಸಂಸದ ಡಿ.ಕೆ ಸುರೇಶ್ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.
ಇದಷ್ಟೇ ಅಲ್ಲದೇ ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆಯ ವಿಚಾರವನ್ನು ನೈತಿಕ ಸಮಿತಿಗೆ ಒಪ್ಪಿಸಬೇಕು ಎಂಬುದಾಗಿಯೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಒತ್ತಾಯಿಸಿದರು.
ರಾಜ್ಯ ಸಭೆಯಲ್ಲೂ ಇದೇ ವಿಷಯ ಪ್ರಸ್ತಾಪಿಸಿದಾಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶ ಒಡೆಯುವ ಮಾತನ್ನು ನಾನು ಕೂಡ ಒಪ್ಪೋದಿಲ್ಲ ಎಂಬುದಾಗಿ ತಿಳಿಸಿದರು.
BREAKING: ಬೆಂಗಳೂರಲ್ಲಿ ‘ED ಅಧಿಕಾರಿ’ಗಳ ವಿರುದ್ಧದ ‘FIR’: ಪೊಲೀಸರ ತನಿಖೆಗೆ ‘ಹೈಕೋರ್ಟ್’ ತಡೆ