ಬೆಳಗಾವಿ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ. ಮತ್ತೆ ಇಂತಹದ್ದೇ ಘಟನೆ ಮರುಕಳಿಸಿದೆ. ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ ಹನುಮಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧ್ವಜಕ್ಕೆ ಅವಕಾಶ ಇಲ್ಲ ಎಂದು ಎಸ್ಪಿ ಭೀಮಾಶಂಕರ ಗುಳೇದ ಈ ಕುರಿತು ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ ಕೆ ಹುಬ್ಬಳ್ಳಿ ಪಟ್ಟದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಾಗೂ ಅಧಿಕಾರಿಗಳ ತೀರ್ಮಾನದಂತೆ ನಾವು ನಡೆಯುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದೆ ಗಲಾಟೆಗೆ ಕಾರಣವಾಗಿದೆ ಸಾಮಾಜಿಕ ಜಾಲತಾಣ ಮೇಲೆ ನಿಗಾ ಇಟ್ಟಿದ್ದೇವೆ.
ಯಾರೇ ತಪ್ಪು ಮಾಡಿದರೂ ಕೂಡ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ ನಮ್ಮ ಗ್ರಾಮದಲ್ಲಿ ಎಲ್ಲರೂ ಒಂದೇ ಎಂದು ಗ್ರಾಮಸ್ಥರು ಹೇಳಿದ್ದಾರೆ. ಹೊರಗಿನ ಜನರು ಬರುವುದು ಬೇಡ ಅಂತ ಗ್ರಾಮಸ್ಥರು ಆಗ್ರಹಿಸಿದ್ದಾರೆ ಎಂದು ಎಂ ಕೆ ಹುಬ್ಬಳ್ಳಿಯಲ್ಲಿ ಎಸ್ಪಿ ಭೀಮಾಶಂಕರ್ ಗುಳೇದ್ ತಿಳಿಸಿದರು.
ಇದೆ ವಿಷಯವಾಗಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರವಿ ಬಾಗಲಕೋಟೆ ಮಾತನಾಡಿ, ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ ಹನುಮಧ್ವಜ ತರುವ ಪ್ರಕರಣಕೆ ಸಂಬಂಧಿಸಿದಂತೆ , ಆದರೆ ಸಾರ್ವಜನಿಕ ಸ್ಥಳದಲ್ಲಿ ಈ ಧ್ವಜ ಇರುವುದು ಗೊತ್ತಾಗಿದೆ.ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರವಿ ಬಾಗಲಕೋಟೆ ಹೇಳಿಕೆ ನೀಡಿದರು.
ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುತ್ತೇವೆ.ಈ ಹಿಂದೆ ಇಲ್ಲಿ ಧ್ವಜ ಇರುವುದು ನನ್ನ ಗಮನಕ್ಕೆ ಬಂದಿಲ್ಲ ಕಾನೂನು ರೀತಿ ಮೇಲಾಧಿಕಾರಿ ಗಮನಕ್ಕೆ ಬಂದು ತೀರ್ಮಾನಿಸಲಾಗುತ್ತದೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರವಿ ಬಾಗಲಕೋಟೆ ಹೇಳಿಕೆ ನೀಡಿದ್ದಾರೆ.