ಶಿವಮೊಗ್ಗ: : ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ವಿಜಯ್ಕುಮಾರ್ ಹೆಚ್ ಬಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಕುವೆಂಪು ವಿವಿಗೆ ಹೊಸ ಕುಲಸಚಿವರನ್ನು ನಿಯುಕ್ತಿಗೊಳಿಸಿ ಫೆ. 02ರಂದು ಸರ್ಕಾರ ಆದೇಶ ಹೊರಡಿಸಿತ್ತು. ಸೋಮವಾರ ಬೆಳಿಗ್ಗೆ ಹೊಸ ಕುಲಸಚಿವರಾದ ಕೆಎಎಸ್ ಅಧಿಕಾರಿ ವಿಜಯ್ಕುಮಾರ್ ಹೆಚ್ ಬಿ ಕರ್ತವ್ಯ ಆರಂಭಿಸಿದ್ದಾರೆ. ಇವರು ಈ ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದು, 2014ರ ಬ್ಯಾಚ್ನಲ್ಲಿ ಕೆಎಎಸ್ಗೆ ಆಯ್ಕೆಯಾಗಿದ್ದಾರೆ.
ಮೂಲತಃ ಚನ್ನಗಿರಿ ತಾಲೂಕಿನವರಾದ ವಿಜಯ್ಕುಮಾರ್ 2018ರ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದಾರೆ. ಕುವೆಂಪು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿರುವ ಅವರು ಪ್ರಸ್ತುತ ಕುವೆಂಪು ವಿವಿಗೆ ಆಡಳಿತ ಕುಲಸಚಿವರಾಗಿ ಸೇವೆ ಸಲ್ಲಿಸಲು ನಿಯುಕ್ತಿಗೊಂಡು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ. ಎಸ್ ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ಎಸ್ ಗೋಪಿನಾಥ್, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಸತ್ಯಪ್ರಕಾಶ್ ಎಂ ಆರ್ ಸೇರಿಂದತೆ ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.
BIG NEWS: ಬಿಜೆಪಿ ಸಂಸದರೆಲ್ಲ ‘ಶೋ ಪೀಸ್’ಗಳು, ಈಗಿರುವ ‘MP’ಗಳು ಯಾರು ಗಂಡಸರಲ್ಲ – ಶಾಸಕ ಹೆಚ್.ಸಿ ಬಾಲಕೃಷ್ಣ
ರಾಜ್ಯ ಸರ್ಕಾರದಿಂದ ‘ರೈತ’ರಿಗೆ ಗುಡ್ ನ್ಯೂಸ್: ‘ಪಹಣಿ ಸಮಸ್ಯೆ’ಗೆ ಮುಕ್ತಿ, ಎಲ್ಲಾ ದಾಖಲೆಗಳು ‘ಡಿಜಟಲೀಕರಣ’