ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವಂತ ಜನಸ್ಪಂದನ ಕಾರ್ಯಕ್ರಮದಲ್ಲಿ, ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರವನ್ನು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದರು.
ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಈ ಕೆಳಕಂಡ ಮೂವರಿಗೆ ಸಮಸ್ಯೆ ಹೇಳಿಕೊಂಡು ಬಂದ ಕಾರಣ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡಿರೋದಾಗಿ ತಿಳಿಸಿದೆ.
1. ರಾಮನಗರ ಜಿಲ್ಲೆಯ ವಿಜಯಕುಮಾರ್ ಬಿನ್ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು.
2. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್ ಬೋನ್ ಮ್ಯಾರೋ ಕಸಿಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು.
3. ತುಮಕೂರು ಜಿಲ್ಲೆಯ ೮ ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ ೫೦ ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು.
BREAKING: ಸಿಎಂ ಜನಸ್ಪಂದನ: ರಾಜ್ಯ ಸರ್ಕಾರಕ್ಕೆ ‘ದಯಾಮರಣ’ ಕೋರಿದ ‘ಅಂಗವಿಕಲ ಮಹಿಳೆ’
Janaspanda: ಸಿಎಂ ‘ಜನಸ್ಪಂದನ’: ವಿಶೇಷ ಚೇತನ ವ್ಯಕ್ತಿಗೆ ‘ಸಿದ್ಧರಾಮಯ್ಯ ಮಾನವೀಯ ನೆರವು’