ದಾವಣಗೆರೆ : ಸಂಸದ ಡಿ.ಕೆ ಸುರೇಶ್ರನ್ನು ಗುಂಡಿಕ್ಕಿ ಕೊಲ್ಲಬೇಕು ಅಂತ ಮಾಜಿ ಶಾಸಕ ಕೆ.ಎಸ್ ಈಶ್ವರಪ್ಪನಮವರು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಅವರು ಇಂದು ದಾವಣಗೆರೆ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಸಂಸದ ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ ಇಬ್ಬರು ರಾಷ್ಟ್ರದ್ರೋಹಿಗಳು. ದೇಶ ವಿಭಜನೆ ಮಾತು ಹೇಳುವ ಡಿ.ಕೆ ಸುರೇಶ್, ವಿನಯ್ ಕುಲಕರ್ಣಿ ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಇದೇ ವೇಳೆ ಅವರು ಮಾತನಾಡುತ್ತ, ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತೇವೆ. ದೇಶ ಛಿದ್ರ ಮಾಡುವವರಿಗೆ, ಇಂತವರಿಗೆ ತಕ್ಕ ಪಾಠ ಕಲಿಸಿ. ದೇಶ ವಿಭಜನೆ ಮಾತು ಆಡುವವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ. ದೇಶ ತುಂಡು ಮಾಡುವ ಮಾತು ನೆಹರು ಕಾಲದಿಂದಲೂ ಬಂದಿದೆ. ಜಿನ್ನಾ ಸಂಸ್ಕೃತಿ ಡಿ.ಕೆ ಸುರೇಶ್ ಅವರಿಗೆ ಬಂದಿದೆ ಎಂದು ಕೆ.ಎಸ್. ಈಶ್ವರಪ್ಪ ಅವರು ಕಿಡಿಕಾರಿದರು.