Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

8ನೇ ವೇತನ ಆಯೋಗವು ನೌಕರರ ‘ವೇತನ, ಪಿಂಚಣಿ’ಯನ್ನ ಶೇ.30–34ರಷ್ಟು ಹೆಚ್ಚಿಸಬಹುದು : ವರದಿ

10/07/2025 2:43 PM

BREAKING : ಕಲಬುರ್ಗಿಯಲ್ಲಿ ಘೋರ ಘಟನೆ : ವಸತಿ ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿ!

10/07/2025 2:14 PM

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ಬೆಚ್ಚಿ ಬೀಳಿಸುತ್ತೆ ತಜ್ಞರ ವರದಿ!

10/07/2025 2:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎರಡು ರೀತಿ ಮಾತನಾಡುವ ಪ್ರಧಾನಿ ಮೋದಿಗೆ ಎರಡು ನಾಲಿಗೆ ಇದೆಯೇ? : ಸಿಎಂ ವ್ಯಂಗ್ಯ
KARNATAKA

ಎರಡು ರೀತಿ ಮಾತನಾಡುವ ಪ್ರಧಾನಿ ಮೋದಿಗೆ ಎರಡು ನಾಲಿಗೆ ಇದೆಯೇ? : ಸಿಎಂ ವ್ಯಂಗ್ಯ

By kannadanewsnow0709/02/2024 7:22 AM

ಬೆಂಗಳೂರು: ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ , ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ , ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು ರೀತಿಯ ಧೋರಣೆ ಹೊಂದಿರುವ ಪ್ರಧಾನಿ ಮೋದಿಯವರ ಮಾತಿಗೆ ಕಿಮ್ಮತ್ತಿರಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಅವರು ಅವರು ಗುರುವಾ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತೆರಿಗೆ ವಿಷಯ ಹುಟ್ಟು ಹಾಕಿ ಹೊಸ ನೆರೇಟಿವ್ ನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ. 2017-18 ರಿಂದ ಇಲ್ಲಿಯವರೆಗೆ 1,87 ಲಕ್ಷ ಕೋಟಿ ತೆರಿಗೆ ಹಂಚಿಕೆ ರಾಜ್ಯದ ಪಾಲಿಗೆ ಬರದೇ ಅನ್ಯಾಯವಾಗಿದೆ. ರಾಜ್ಯಕ್ಕೆ ಈ ಮಟ್ಟದ ನಷ್ಟವಾಗಿರುವುದನ್ನು ಸರಿಯೆಂದು ಬಿಜೆಪಿಯವರು ಹೇಳುತ್ತಾರೆಯೇ? ನಿನ್ನೆಯ ದಿನ ಪ್ರಧಾನಿ ಮೋದಿಯವರು ಅಧಿವೇಶನದಲ್ಲಿ ಮಾತನಾಡುತ್ತಾ, ರಾಜ್ಯ ತನ್ನ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದನ್ನು ದೇಶ ವಿಭಜನೆ ಮಾಡುವ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ ಎಂದರು.

ಗುಜರಾತ್ ಸಿಎಂ ಆಗಿದ್ದಾಗ ‘ನಾವು ಭಿಕ್ಷುಕರೇ’ ಎಂದಿದ್ದ ಮೋದಿ

ಪ್ರತಿಭಟನೆ ಮಾಡಿದ ರಾಜ್ಯದ ನಡೆಯನ್ನು ಟೀಕಿಸಿದ ಮೋದಿಯವರು, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ, ಗುಜರಾತ್ ರಾಜ್ಯಿಕ್ಕೆ ಸಾಕಷ್ಟು ಅನುದಾನ ಹಂಚಿಕೆಯಾಗುತ್ತಿಲ್ಲವೆಂದೂ ಅಂದಿನ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಾ, ‘60 ಸಾವಿರ ಕೋಟಿ ತೆರಿಗೆ ನೀಡುವ ಗುಜರಾತ್ ರಾಜ್ಯಕ್ಕೆ ಅನುದಾನ ಮರಳಿ ಬರುತ್ತಿಲ್ಲ, ಗುಜರಾತ್ ಭಿಕ್ಷೆ ಬೇಡುವ ರಾಜ್ಯವೇ? ಅಥವಾ ನಾವು ಭಿಕ್ಷುಕರೇ, ನಾವು ದೆಹಲಿಯಲ್ಲಿರುವವರ ಕರುಣೆಯ ಮೇಲೆ ಬದುಕಬೇಕೇ?’ಎಂದು ಟ್ವೀಟ್ ಮಾಡಿದ್ದರು. ಅಲ್ಲದೇ, 2008 ರಲ್ಲಿ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ,’ ಗುಜರಾತ್ ರಾಜ್ಯ 40 ಸಾವಿರ ಕೋಟಿ ತೆರಿಗೆ ನೀಡಿದರೂ, ಕೇಂದ್ರದಿಂದ ಕೇವಲ 2.5 ರಷ್ಟು ಅನುದಾನ ಬರುತ್ತಿದೆ. ಇಂತಹ ಕನಿಷ್ಟ ಪ್ರಮಾಣದ ಅನುದಾನ ನೀಡುವ ಬದಲು ಒಂದು ವರ್ಷಗಳ ವರೆಗೆ ಗುಜರಾತ್ ನಿಂದ ತೆರಿಗೆ ಪಡೆಯುವುದನ್ನು ಬಿಟ್ಟುಕೊಡಲಿ’ ಎಂದು ಹೇಳಿದ್ದರು. ಈ ರೀತಿ ಮಾತನಾಡಿದ ಮೋದಿಯವರು, ನಾವು ಪ್ರತಿಭಟನೆ ಮಾಡಿದರೆ ಭಾರತವನ್ನು ಒಡೆಯಲಾಗುತ್ತಿದ್ದೆ ಎಂದು ಟೀಕಿಸುತ್ತಿದ್ದಾರೆ ಎಂದು ತಿಳಿಸಿದರು.

ಕನ್ನಡಿಗರ ಹಿತರಕ್ಷಣೆಗಾಗಿ ಪ್ರತಿಭಟನೆ

ನಾವು ರಾಜ್ಯದ ಹಾಗೂ ಕನ್ನಡಿಗರ ಹಿತರಕ್ಷಣೆ ಮಾಡಲು ನಮ್ಮ ಉದ್ದೇಶವಾಗಿದೆ. ಕರ್ನಾಟಕದಿಂದ 4,30,000 ಲಕ್ಷ ಕೋಟಿ ತೆರಿಗೆ ಕೇಂದ್ರಕ್ಕೆ ಹೋಗಿದೆ. ಆದರೆ ನಮಗೆ 52,257 ಕೋಟಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತದೆ. ಅಂದರೆ 100 ರೂ. ರಲ್ಲಿ ಕೇವಲ 13 ರೂ. ರಾಜ್ಯಕ್ಕೆ ಬರುತ್ತಿದೆ. ಈ ಅನ್ಯಾಯವನ್ನು ನಾವು ಪ್ರಶ್ನಿಸುತ್ತಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ ಹಾಗೂ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಹೇಳಿದ್ದರು.ಆದರೆ ಹೇಳಿದ್ದ ಅನುದಾನ ಇನ್ನೂ ನೀಡಿಲ್ಲ. ರಾಜ್ಯಕ್ಕೆ 11495 ಕೋಟಿ ವಿಶೇಷ ಅನುದಾನ ರಾಜ್ಯಕ್ಕೆ ನೀಡಿಲ್ಲ. 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲವೆಂದ ಕೇಂದ್ರ ವಿತ್ತಸಚಿವೆ, ಆಯೋಗದ ಶಿಫಾರಸ್ಸನ್ನು ಅಲ್ಲಗೆಳೆದು ರಾಜ್ಯಕ್ಕೆ ನೀಡುವ ಈ ಮೊತ್ತವನ್ನು ನೀಡಲು ನಿರಾಕರಿಸಿದ್ದೇಕೆ? ಎಂದು ಸಿಎಂ ಪ್ರಶ್ನಿಸಿದರು.

ರಾಜ್ಯದ ಹಿತಕಾಯುವಲ್ಲಿ ಬಿಜೆಪಿ ಸಂಸದರು ಸಂಪೂರ್ಣ ವಿಫಲ:

ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯಕ್ಕೆ ನೀಡುವ ಅನುದಾನದ ಗಾತ್ರವೂ ಹೆಚ್ಚಾಗಬೇಕಾಗಿತ್ತು. ಇದು ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ವಿಷಯದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಕರ್ನಾಟಕದ ಬಿಜೆಪಿ ಸಂಸದರು , ರಾಜ್ಯದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದರು.

Does PM Modi have two tongues? : CM's sarcasm who speaks in two ways
Share. Facebook Twitter LinkedIn WhatsApp Email

Related Posts

BREAKING : ಕಲಬುರ್ಗಿಯಲ್ಲಿ ಘೋರ ಘಟನೆ : ವಸತಿ ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿ!

10/07/2025 2:14 PM1 Min Read

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ಬೆಚ್ಚಿ ಬೀಳಿಸುತ್ತೆ ತಜ್ಞರ ವರದಿ!

10/07/2025 2:09 PM1 Min Read

GOOD NEWS: ಒಳ ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣ ನೇಮಕಾತಿ ಪ್ರಾರಂಭ: ಗೃಹ ಸಚಿವ ಡಾ.ಜಿ ಪರಮೇಶ್ವರ್

10/07/2025 1:58 PM2 Mins Read
Recent News

8ನೇ ವೇತನ ಆಯೋಗವು ನೌಕರರ ‘ವೇತನ, ಪಿಂಚಣಿ’ಯನ್ನ ಶೇ.30–34ರಷ್ಟು ಹೆಚ್ಚಿಸಬಹುದು : ವರದಿ

10/07/2025 2:43 PM

BREAKING : ಕಲಬುರ್ಗಿಯಲ್ಲಿ ಘೋರ ಘಟನೆ : ವಸತಿ ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿ!

10/07/2025 2:14 PM

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ಬೆಚ್ಚಿ ಬೀಳಿಸುತ್ತೆ ತಜ್ಞರ ವರದಿ!

10/07/2025 2:09 PM

BREAKING: ‘ಆಧಾರ್ ಕಾರ್ಡ್’ ಪೌರತ್ವದ ಪುರಾವೆಯಲ್ಲ: ‘ಸುಪ್ರೀಂ ಕೋರ್ಟ್‌’ಗೆ ಚುನಾವಣಾ ಆಯೋಗ ಮಾಹಿತಿ | Aadhaar card

10/07/2025 2:08 PM
State News
KARNATAKA

BREAKING : ಕಲಬುರ್ಗಿಯಲ್ಲಿ ಘೋರ ಘಟನೆ : ವಸತಿ ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿ!

By kannadanewsnow0510/07/2025 2:14 PM KARNATAKA 1 Min Read

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿ ಒಬ್ಬ ವಸತಿ ಶಾಲೆಯ ಕೊಠಡಿಯಲ್ಲೆ ಫ್ಯಾನ್…

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ಬೆಚ್ಚಿ ಬೀಳಿಸುತ್ತೆ ತಜ್ಞರ ವರದಿ!

10/07/2025 2:09 PM

GOOD NEWS: ಒಳ ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣ ನೇಮಕಾತಿ ಪ್ರಾರಂಭ: ಗೃಹ ಸಚಿವ ಡಾ.ಜಿ ಪರಮೇಶ್ವರ್

10/07/2025 1:58 PM

BREAKING : ‘ಮುಡಾ’ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿಗೆ ನೋಟಿಸ್ ಜಾರಿ ಮಾಡಿ ಹೈಕೋರ್ಟ್ ಆದೇಶ!

10/07/2025 1:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.