ಬೆಂಗಳೂರು : ಬೆಂಗಳೂರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಯಿಂದ ಗುಜರಿ ಅಂಗಡಿಯೊಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ಗಂಗೊಂಡನ ಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಗುಜರಿ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಬೆಳಿಗ್ಗೆ 5:30ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ.
ಘಟನೆಯಲ್ಲಿ ಯಾವುದೇ ರೀತಿಯಾಗಿ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು ಸ್ಥಳಕ್ಕೆ ಅಗ್ನಿಶಾಮಖದಳ ಆಗಮಿಸಿ ಬೆಂಕಿ ನಂದಿಸಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಘಟನೆಗೆ ಏನು ಕಾರಣ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ