ಬೆಂಗಳೂರು: ನಾಳೆಯಿಂದ ರಾಜ್ಯ ಸರ್ಕಾರದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಉಭಸದನಗಳನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ ಮಾಡಲಿದ್ದಾರೆ.
ರಾಜ್ಯಪಾಲರ ಮಾತಿನ ಬಳಿಕ ಅಗಲಿದ ಗಣ್ಯರಿಗೆ ಸಂತಾಪವನ್ನು ಸೂಚನೆ ಮಾಡಲಾಗುವುದು.
ವಿಧಾನಸಭೆಯ ಮಾಜಿ ಸದಸ್ಯರಾಗಿದ್ದ ನಾಗನಗೌಡ ಕಂದಕೂರ ಮತ್ತು ಹಿರಿಯ ಸಾಹಿತಿ ಹಾಗೂ ವಿಮರ್ಶಕರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿರುವುದನ್ನು ಈ ಸದನಕ್ಕೆ ಅತ್ಯಂತ ವಿಷಾದದಿಂದ ತಿಳಿಸಬಯಸುತ್ತೇನೆ.
1. ನಾಗನಗೌಡ ಕಂದಕೂರ : ರಾಜ್ಯದ ಮಾಜಿ ಸದಸ್ಯರಾಗಿದ್ದ ನಾಗನಗೌಡ ಕಂದಕೂರು ಅವರು ದಿನಾಂಕ:01.06.1945 ರಂದು ಯಾದಗಿರಿ ಜಿಲ್ಲೆಯ ಗುರುಮಿಠಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಜನಿಸಿದ್ದು, ವೃತ್ತಿಯಲ್ಲಿ ಕೃಷಿಕರಾಗಿದ್ದರು. 15ನೇ ವಿಧಾನಸಭೆಗೆ ಆಯ್ಕೆಯಾಗಿದ್ದ ಶ್ರೀಯುತರು 2019 ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಹಿರಿಯ ರಾಜಕಾರಣಿ ನಾಗನಗೌಡ ಕಂದಕೂರು ರವರು ದಿನಾಂಕ:28.01.2024 ರಂದು ನಿಧನ ಹೊಂದಿರುತ್ತಾರೆ.
2. ಪ್ರೊ. ಅಮೃತ ಸೋಮೇಶ್ವರ : ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಅನನ್ಯ ಸಾಧಕರಾಗಿದ್ದ ಪ್ರೊ. ಅಮೃತ ಸೋಮೇಶ್ವರ ಅವರು ಕನ್ನಡ ಮತ್ತು ತುಳು ಭಾಷೆಯ ಉನ್ನತಿಗಾಗಿ ಸಮರ್ಪಿಸಿಕೊಂಡಿದ್ದು, ಕರಾವಳಿ ಕರ್ನಾಟಕದ ಯಕ್ಷಗಾನ, ಜಾನಪದ, ಭೂತಾರಾಧನೆ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆಸಿ 100ಕ್ಕೂ ಹೆಚ್ಚು ಕೃತಿಗಳನ್ನು ಹೊರತಂದಿದ್ದಾರೆ. ಅಲ್ಲದೇ ‘ತಂಬಿಲ’ ಮತ್ತು ‘ರಂಗೀತಾ’ ಸೇರಿದಂತೆ ಏಳು ತುಳು ನಾಟಕಗಳನ್ನು ಸಹ ರಚಿಸಿದ್ದಾರೆ.
ತುಳು ಭಾಷೆ ಮತ್ತು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್ ಪ್ರಶಸ್ತಿಯೂ ಸೇರಿದಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ‘ಗೌರವಶ್ರೀ’ ಪ್ರಶಸ್ತಿ ಸಹಿತ ನೂರಾರು ಪ್ರಶಸ್ತಿಗಳು ಇವರಿಗೆ ಲಭಿಸಿವೆ. ಮಂಗಳೂರು ವಿಶ್ವವಿದ್ಯಾಲಯವು ಇವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಪ್ರೊ. ಅಮೃತ ಸೋಮೇಶ್ವರ ರವರು ದಿನಾಂಕ:06.01.2024 ಹೊಂದಿರುತ್ತಾರೆ. ರಂದು ನಿಧನ