ಗದಗ : ರಾಜ್ಯದಲ್ಲಿ ಅಕ್ರಮ ಮರಳು ಸಾಗಾಟ ಹಾಗೂ ದಂಧೆ ನಿರಂತರವಾಗಿ ನಡೆಯುತ್ತಿದ್ದು ಇದೀಗ ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ್ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಮರಳು ದಂಧೆ ವಿಚಾರದಲ್ಲಿ ನೇಣು ಬಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮರಳು ದಂಧೆಗೆ ಕಾಂಗ್ರೆಸ್ ಮುಖಂಡರೊಬ್ಬರು ಬಲಿಯಾಗಿದ್ದು ಡೆತ್ ನೋಟ್ ಬರೆದಿಟ್ಟುಕೊಂಡು ಡಾ. ಶಶಿಧರ್ ಎನ್ನುವ ಕಾಂಗ್ರೆಸ್ ಮುಖಂಡರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಶಶಿಧರ್ ಪಂಚೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಡೆತ್ ನೋಟ್ ಅಲ್ಲಿ ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರನ್ನು ಬರೆದು ಶಶಿಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮರಳು ದಂಧೆಕೋರ ಶರಣಗೌಡ ಪಾಟೀಲ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದು ಎಲ್ಲಾ ಲೆಕ್ಕ ಕೊಟ್ಟರು ನೀಡಲಾಗುತ್ತಿದೆ ಎಂದು ಡೆತ್ ನೋಟ್ ಅಲ್ಲಿ ಶಶಿಧರ್ ಆರೋಪಿಸಿದ್ದಾರೆ.
ಹೀಗಾಗಿ ಆತನ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಶರಣಗೌಡ ಗೆ ಕಠಿಣ ಶಿಕ್ಷೆ ಕೊಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಗೆ ಹೇಳಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಕುರಿತಂತೆ ರೋಣ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.