ಬೆಂಗಳೂರು:ಪರಿಷತ್ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಎ ಪಿ ರಂಗನಾಥ್ ಪರ ಮತ ಯಾಚಿಸುವುದಿಲ್ಲ ಎಂದು ಬಿಜೆಪಿ ಬಂಡಾಯ ಶಾಸಕ ಎಸ್ ಟಿ ಸೋಮಶೇಖರ್ ಮಂಗಳವಾರ ಪ್ರತಿಪಾದಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ರಂಗನಾಥ್ ಅವರನ್ನು ಬೆಂಬಲಿಸುತ್ತಿದೆ. ಕೇಸರಿ ಪಕ್ಷದ ಕಾರ್ಯಕರ್ತರು ಈಗಾಗಲೇ ಕ್ಷೇತ್ರದಲ್ಲಿ ಅವರ ಪರ ಮತ ಚಲಾವಣೆ ಮಾಡುತ್ತಿದ್ದಾರೆ.
ವಿಧಾನಸಭಾ ಚುನಾವಣೆ ವೇಳೆ ರಂಗನಾಥ್ ನನ್ನ ವಿರುದ್ಧ ಅಪಪ್ರಚಾರ ನಡೆಸಿದ್ದರು ಎಂದು ಆರೋಪಿಸಿರುವ ಸೋಮಶೇಖರ್, ಈ ಆರೋಪಗಳನ್ನು ಸಾಬೀತುಪಡಿಸಲು ತಮ್ಮ ಬಳಿ 10ಕ್ಕೂ ಹೆಚ್ಚು ವಿಡಿಯೋ ತುಣುಕುಗಳಿವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
“ಇದಲ್ಲದೆ, ಅವರಿಗೆ ಮತ ಕೇಳುವ ವಿಚಾರದಲ್ಲಿ ಬಿಜೆಪಿ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಸೇರಿದಂತೆ ಬಿಜೆಪಿ ನಾಯಕರು ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದಾರೆ. ಆದರೆ ಅವರು ಈ ಬಗ್ಗೆ ನನ್ನೊಂದಿಗೆ ಮಾತನಾಡಲಿಲ್ಲ. ನಾನು ರಂಗನಾಥ್ಗಾಗಿ ಕೆಲಸ ಮಾಡಬೇಕೆಂದು ಪಕ್ಷ ಏಕೆ ನಿರೀಕ್ಷಿಸಬೇಕು? ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ ಎಂದು ಹೇಳಿದರು.