ಬೆಂಗಳೂರು : ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ಪರ ಮತಯಾಚಿಸಿದ್ದಕ್ಕೆ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಇದೀಗ ಸಮರ್ಥನೆ ಮಾಡಿಕೊಂಡಿದ್ದು, ನನ್ನ ಕಚೇರಿಗೆ ಅವರು ಬಂದು ಮನವಿ ಮಾಡಿದ್ದರಲ್ಲಿ ತಪ್ಪೇನಿಲ್ಲ ಬಿಜೆಪಿಗರು ಪಕ್ಷ ವಿರೋಧಿ ಅಂತ ಪರಿಗಣಿಸಿದರೆ ಪರಿಗಣಿಸಲಿ.ನನ್ನನ್ನು ಸಸ್ಪೆಂಡ್ ಮಾಡುತ್ತಾರೆ ಅಂದರೆ ಮಾಡಲಿ ಡೋಂಟ್ ಕೇರ್ ಎಂದು ಅಸಮಾಧಾನ ಹೊರಹಾಕಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನನ್ನ ಕ್ಷೇತ್ರದಲ್ಲಿ ಕಾರ್ಯಕರ್ತರೊಂದಿಗೆ ಸಭೆ ಮಾಡುತ್ತಿದೆ ಆಗ ಪುಟ್ಟಣ್ಣ ಅವರು ಬಂದು ಮಣಿಯು ಮಾಡಿದರು ಅದರಲ್ಲಿ ತಪ್ಪೇನಿದೆ? ಬಿಜೆಪಿಗರು ಪಕ್ಷ ವಿರೋಧಿ ಅಂತ ಪರಿಗಣಿಸಿದರೆ ಪರಿಗಣಿಸಲಿ.ನನ್ನನ್ನು ಸಸ್ಪೆಂಡ್ ಮಾಡುತ್ತಾರೆ ಅಂದರೆ ಮಾಡಲಿ ಡೋಂಟ್ ಕೇರ್ ಎಂದು ತಿಳಿಸಿದರು.
ಪಕ್ಷಕ್ಕೆ ದ್ರೋಹ ಮಾಡಿದವರನ್ನೇ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ರಾಜ್ಯ ಮರ್ಯಾದೆ ಕೊಟ್ಟು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ.ನನ್ನ ಪಕ್ಷದಿಂದ ಸಸ್ಪೆಂಡ್ ಮಾಡುತ್ತಾರೆ ಅಂತಾದರೆ ಮಾಡಲಿ ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಹಿರಂಗವಾಗಿ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಕಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಪರ ನಾನು ಯಾವ ಕಾರಣಕ್ಕೂ ಮತ ಕೇಳುವುದಿಲ್ಲ. ನಾನು ಬಿಜೆಪಿ ಅಭ್ಯರ್ಥಿ ಪರಮಾತ್ರ ಮತ ಕೇಳುತ್ತೇನೆ ಈ ಹಿನ್ನೆಲೆಯಲ್ಲಿ ನನ್ನ ಕ್ಷೇತ್ರದಲ್ಲಿ ಸಭೆ ನಡೆಸುತ್ತಿದೆ ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪುಟ್ಟಣ್ಣ ಅವರು ಬಂದು ಮನವಿ ಮಾಡಿದರು. ಅದನ್ನು ಬೇರೆ ಬೇರೆ ಅರ್ಥದಲ್ಲಿ ಕಲ್ಪಿಸಿಕೊಂಡು ಪಕ್ಷದಿಂದ ನನ್ನನ್ನು ಸಸ್ಪೆಂಡ್ ಮಾಡಿದರೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.