ಬೆಂಗಳೂರು : ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಫೆ.6 ರಂದು ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯ ಸೇರಿ ಕೆಲ ಕೈ ನಾಯಕರಿಗೆ ಕರ್ನಾಟಕ ಹೈಕೋರ್ಟ್ 10,000 ದಂಡ ವಿಧಿಸಿತ್ತು. ಅಲ್ಲದೆ ಮಾರ್ಚ್ 6 ರಂದು ಖುದ್ದು ಹಾಜರಾಗುವಂತೆ ಹೈಕೋರ್ಟ್ ಸೂಚಿಸಿತ್ತು.
2022ರ ಏಪ್ರಿಲ್ ನಲ್ಲಿ ರಸ್ತೆ ತಡೆದು ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆದಿತ್ತು.ಕಾಂಗ್ರೆಸ್ ನಾಯಕರು. ವಿಧಾನಸೌಧದ ಚಲೋ ಕೈಗೊಂಡಿದ್ದರು.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್ ಸೇರಿದಂತೆ ಕಾಂಗ್ರೆಸ್ನ ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದರು.
ಈ ವೇಳೆ ರಸ್ತೆ ತಡೆ ಉಂಟಾಗಿ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನಸಾಮಾನ್ಯರ ಸಂಚಾರಕ್ಕೆ ತೊಂದರೆಯುಂಟಾಗಿತ್ತು. ಹೀಗಾಗಿ ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ ಆಗಿನ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಅಂದಿನ ಬಿಜೆಪಿ ಸರ್ಕಾರ ಕೈ ನಾಯಕರ ವಿರುದ್ಧ ದೂರು ನೀಡಿತು. ಕೆಲವು ಕಾಂಗ್ರೆಸ್ ನಾಯಕರು ವಿರುದ್ಧ ಕೂಡ ಬಿಜೆಪಿ ಸರ್ಕಾರ ದೂರ ನಡೆಯಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕರ್ನಾಟಕ ಹೈಕೋರ್ಟ್ ಕೆಲ ನಾಯಕರಿಗೆ ದಂಡ ವಿಧಿಸಿತ್ತು ಪ್ರತಿಭಟನೆ ಕಾನೂನು ಬದ್ಧವಾಗಿದೆ ಎಂದು ಸುಪ್ರೀಂ ಗೆ ಇದೀಗ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದಾರೆ.