Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳ್ಳಂಬೆಳಗ್ಗೆ ಪಾಕಿಸ್ತಾನದಲ್ಲಿ 5.2 ತೀವ್ರತೆಯ ಪ್ರಬಲ ಭೂಕಂಪ | Earthquake in Pakistan

29/06/2025 6:09 AM

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | POWER CUT

29/06/2025 6:03 AM

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಾಳೆಯೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್.!

29/06/2025 6:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್ – ಸಚಿವ ಶಿವರಾಜ್ ತಂಗಡಗಿ
KARNATAKA

ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್ – ಸಚಿವ ಶಿವರಾಜ್ ತಂಗಡಗಿ

By kannadanewsnow0916/02/2024 2:33 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕ ಬಜೆಟ್ ಆಗಿದೆ. ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು.

ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷ ಉಚಿತ ಜೆಇಇ/ಎನ್ಇಇಟಿ ತರಬೇತಿ ನೀಡುವ ಯೋಜ ಘೋಷಣೆ ಮಾಡಿರುವುದು ಸ್ವಾಗತರ್ಹ.

ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ‘ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗ ರಚನೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಲ್ಎಟಿ, ಎಂಎಟಿ ಮತ್ತು ಚಾರ್ಟೆಡ್‌ ಅಕೌಂಟೆಂಟ್ ಫೌಂಡೇಶನ್ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀಕ್ಷಾ ಪೂರ್ವ ತರಬೇತಿ ನೀಡುವ ಯೋಜನೆ ಉಪಯುಕ್ತವಾಗಿದೆ ಎಂದಿದ್ದಾರೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 100 ಸಂಖ್ಯಾಬಲದ ಮೆಟ್ರಿಕ್‌ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸುವುದು.‌ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಒದಗಿಸುವುದು.‌ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ವಿದ್ಯಾರ್ಥಿನಿಲಯಗಳಿಗೆ ನಾಲ್ಕು ಕೋಟಿ ರೂ. ಗಳ ಘಟಕ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡುವುದು.‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳನ್ನು ಡಿ.ದೇವರಾಜು ಅರಸು ವಸತಿ ಶಾಲೆಗಳೆಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಹೇಳಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ.

ಬಸವಣ್ಣನವರ ಜನ್ಮಸ್ಥಳ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ, ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಮಂಟಪ ಕಲ್ಬುರ್ಗಿಯಲ್ಲಿ ಸ್ಥಾಪನೆ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯದವರ ಕಲೆ ಮತ್ತು ಸಂಸ್ಕೃತಿಯನ್ನು ಗುರುತಿಸಿ, ಉಳಿಸಿ, ಪ್ರೊತ್ಸಾಹಿಸುವ ನಿಟ್ಟಿನಲ್ಲಿ‌ ಅಲೆಮಾರಿ ಸಂಸ್ಕೃತಿ ಉತ್ಸವದಂತಹ ಯೋಜನೆಯನ್ನು ಘೋಷಣೆ ಮಾಡಿರುವುದು ಸಂತಸದ ವಿಚಾರ. ಹಿರೇಕೆರೂರಿನಲ್ಲಿ ಸರ್ವಜ್ಞನ ಸ್ಮಾರಕ ಅಭಿವೃದ್ಧಿ ಹಾಗೂ ರಾಜ್ಯ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಚಿವರು ಅಭಿನಂದನೆ ತಿಳಿಸಿದ್ದಾರೆ.

ಒಟ್ಟಾರೆ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ನಲ್ಲಿ ರೈತ ಪರ, ಕೃಷಿ ವಲಯ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಉದ್ಯೋಗ ಸೃಷ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ, ಬಂಡವಾಳ ಹೂಡಿಕೆ, ಮೂಲಸೌಲಭ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ, ಯುವಜನರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ.

ಇನ್ನು ಗ್ಯಾರಂಟಿಗಳು ಬಹುಕಾಲ ಇರುವುದಿಲ್ಲ ಎಂದು ಟೀಕೆ ಮಾಡುತ್ತಿದ್ದ ಬಿಜೆಪಿಗರಿಗೆ ನಮ್ಮ‌ ಸರ್ಕಾರದ ಅಭಿವೃದ್ಧಿ ಪರ ಬಜೆಟ್ ನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರದ ರಾಜ್ಯ ಪಾಲಿನ ತೆರಿಗೆ ಹಣ ಕೊಡದೆ ಅನ್ಯಾಯವೆಸಗುತ್ತಿರುವುದನ್ನೆಲ್ಲ ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಡುತ್ತಿದ್ದೇವೆ. ಇದನ್ನು ಸಹಿಸಲು ಸಾಧ್ಯವಾಗದ ರಾಜ್ಯ ಬಿಜೆಪಿ ನಾಯಕರು ಇಲ್ಲದ ನಾಟಕವಾಡುತ್ತಿದ್ದಾರೆ ಎಂದು ಸಚಿವ‌ ಶಿವರಾಜ್ ತಂಗಡಗಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಹೀಗಿದೆ ಇಂದು ‘ಸಿಎಂ ಸಿದ್ಧರಾಮಯ್ಯ’ ಮಂಡಿಸಿದ ‘ರಾಜ್ಯ ಬಜೆಟ್ 2024-25’ರ ಇಲಾಖೆ, ಕ್ಷೇತ್ರವಾರು ಹೈಲೈಟ್ಸ್ | Karnataka Budget 2024-25 Highlights

‘ಫಾಸ್ಟ್ ಟ್ಯಾಗ್’ ಖರೀದಿಸುವ ’32 ಬ್ಯಾಂಕ್’ಗಳ ಪಟ್ಟಿಯಿಂದ ‘ಪೇಟಿಎಂ ಪೇಮೆಂಟ್ಸ್ ಬ್ಯಾಂಕ್’ ಔಟ್ | Paytm Payments Bank

Share. Facebook Twitter LinkedIn WhatsApp Email

Related Posts

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | POWER CUT

29/06/2025 6:03 AM3 Mins Read

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಾಳೆಯೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್.!

29/06/2025 6:01 AM2 Mins Read

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

29/06/2025 5:57 AM1 Min Read
Recent News

BREAKING : ಬೆಳ್ಳಂಬೆಳಗ್ಗೆ ಪಾಕಿಸ್ತಾನದಲ್ಲಿ 5.2 ತೀವ್ರತೆಯ ಪ್ರಬಲ ಭೂಕಂಪ | Earthquake in Pakistan

29/06/2025 6:09 AM

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | POWER CUT

29/06/2025 6:03 AM

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಾಳೆಯೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್.!

29/06/2025 6:01 AM

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

29/06/2025 5:57 AM
State News
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | POWER CUT

By kannadanewsnow5729/06/2025 6:03 AM KARNATAKA 3 Mins Read

ಬೆಂಗಳೂರು: ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ, ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 4:00 ಗಂಟೆಯವರೆಗೆ “66/11…

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಾಳೆಯೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್.!

29/06/2025 6:01 AM

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

29/06/2025 5:57 AM

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಹಂತ ಹಂತದ ಮಾಹಿತಿ

29/06/2025 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.