Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯ: ಗ್ರಾಮ ಸಹಾಯಕನ ಭೀಕರ ಹತ್ಯೆಯ ಆರೋಪಿಗಳ ಬಂಧನಕ್ಕೆ ಒತ್ತಾಯ

18/08/2025 6:23 PM

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಹಣ್ಣು ನೀಡಿ ಕುಶಲೋಪರಿ ವಿಚಾರಣೆ

18/08/2025 6:21 PM

ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

18/08/2025 6:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದೇ ಮೊದಲು: KSRTC ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ 10 ಲಕ್ಷ ಪರಿಹಾರ ವಿತರಣೆ
KARNATAKA

ಇದೇ ಮೊದಲು: KSRTC ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ 10 ಲಕ್ಷ ಪರಿಹಾರ ವಿತರಣೆ

By kannadanewsnow0919/02/2024 4:55 PM

ಬೆಂಗಳೂರು: ಕೆಎಸ್ ಆರ್ ಟಿ ಸಿ ಬಸ್ಸಿನ ಅಪಘಾತದಲ್ಲಿ‌ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ಮೊದಲ ಬಾರಿಗೆ ರೂ.10 ಲಕ್ಷ ಅಪಘಾತ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ನಿಗಮವು, ಇಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ  ಅವರು ಹಾಗೂ ಅಧ್ಯಕ್ಷರು ಕ ರಾ ರ ಸಾ ನಿಗಮ ಎಸ್ ಆರ್ ಶ್ರೀನಿವಾಸ್(ವಾಸು) ಅವರು, ನಿಗಮದ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕರು ಅಪಘಾತದಲ್ಲಿ ಮೃತಪಟ್ಟ ಹಿನ್ನಲೆಯಲ್ಲಿ ಮೃತರ ಅವಲಂಬಿತರಿಗೆ ರೂ 10 ಲಕ್ಷ ಅಪಘಾತ ಪರಿಹಾರದ ಚೆಕ್ ಅನ್ನು ವಿತರಿಸಿದರು ಎಂದು ತಿಳಿಸಿದೆ.

ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬಸ್ಸಿನ ಅಪಘಾತದಲ್ಲಿ ಮೃತಪಟ್ಟಲ್ಲಿ ಪ್ರಯಾಣಿಕರ ಅವಲಂಬಿತರಿಗೆ ಈ ಹಿಂದೆ ರೂ. 3 ಲಕ್ಷ ಪರಿಹಾರ ಚೆಕ್ ಅನ್ನು ನೀಡಲಾಗುತ್ತಿತ್ತು. ಅವಲಂಭಿತರಿಗೆ ಹೆಚ್ಚಿನ ಆರ್ಥಿಕ ಸೌಲಭ್ಯವನ್ನು ಒದಗಿಸುವ ದೃಷ್ಟಿಯಿಂದ ದಿನಾಂಕ 01/01/2024 ರಿಂದ ಜಾರಿಗೆ ಬರುವಂತೆ ಈ ಪರಿಹಾರ ಮೊತ್ತವನ್ನು ರೂ. 10 ಲಕ್ಷಗಳಿಗೆ ಹೆಚ್ಚಿಸಲಾಗಿರುತ್ತದೆ ಎಂದು ಹೇಳಿದೆ.

ಅದರಂತೆ, ದಿನಾಂಕ: 04/02/2024 ರಂದು ಹಾಸನ ವಿಭಾಗದ,ಚನ್ನರಾಯಪಟ್ಟಣ ಘಟಕದ ವಾಹನ ಸಂಖ್ಯೆ ಕೆಎ-13-ಎಫ್-2261 ಬೆಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವಾಗ ಸಕಲೇಶಪುರದ ಸಮೀಪ ಬಾಗೆ ಎಂಬ ಸ್ಥಳದ ತಿರುವಿನಲ್ಲಿ ಅಪಘಾತಕ್ಕೆ ಒಳಪಟ್ಟು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಜಿ.ಎನ್ ಅಮೃತ್, 34 ವರ್ಷರವರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಮೃತರ ತಂದೆಯಾದ ಜಿ.ಡಿ ನಾಗರಾಜುರವರಿಗೆ ಇಂದು ರೂ 10 ಲಕ್ಷಗಳ ಅಪಘಾತ ಪರಿಹಾರದ ಚೆಕ್ ಅನ್ನು ವಿತರಿಸಿ ಸಾಂತ್ವನ ಹೇಳಲಾಯಿತು.

ಈ ವೇಳೆ ಮಾತನಾಡಿದಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಅಪಘಾತಗಳು ಆಕಸ್ಮಿಕವೇ ಆದರೂ ಅದರಿಂದಾಗುವ ಪ್ರಾಣ ಹಾನಿ ಮತ್ತು ಕುಟುಂಬಕ್ಕೆ ಉಂಟಾಗುವ ನಷ್ಟವನ್ನು ಭರಿಸಲು ಅಸಾಧ್ಯ. ಆದರೂ ನಿಗಮವು ಪ್ರಯಾಣಿಕರೆಡೆಗಿನ ತನ್ನ ಜವಾಬ್ದಾರಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ಅಪಘಾತಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ರಾತ್ರಿ ಪಾಳಿಯ ಬಸ್ಸುಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರಿಗೆ ಫ್ಲಾಸ್ಕ್ ( ಕಾಪಿ/ಟೀ/ಬಿಸಿನೀರು ಕುಡಿಯಲು ಅನುವಾಗುವಂತೆ) ನೀಡಲಾಗಿದೆ ಎಂದು ತಿಳಿಸಿ ಆ ದೇವರು ತಮ್ಮ‌ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.

KSRTC ಅಧ್ಯಕ್ಷರಾದಂತ ಎಸ್ ಆರ್ ಶ್ರೀನಿವಾಸ್(ವಾಸು) ಮಾತನಾಡಿ, ಅಪಘಾತಗಳನ್ನು ತಡೆಗಟ್ಟಲು ಸಂಸ್ಥೆಯು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ವಿ.ಅನ್ಬುಕುಮಾರ್, ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು, ಕ ರಾ ರ ಸಾ ನಿಗಮ, ಡಾ. ನಂದಿನಿ ದೇವಿ. ಕೆ, ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತೆ), ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಟಾಟಾ ಸಮೂಹದ ಮಾರುಕಟ್ಟೆ ಮೌಲ್ಯವು ಈಗ ಪಾಕಿಸ್ತಾನದ ‘ಸಂಪೂರ್ಣ ಆರ್ಥಿಕತೆಗಿಂತ’ ಹೆಚ್ಚು

BIGG NEWS: ನಾಮಫಲಕ ವಿವಾದ: ಐಎಎಸ್ ಅಧಿಕಾರಿ ಪಿ. ಮಣಿವಣ್ಣನ್ ವರ್ಗಾವಣೆ!?

Share. Facebook Twitter LinkedIn WhatsApp Email

Related Posts

ಮಂಡ್ಯ: ಗ್ರಾಮ ಸಹಾಯಕನ ಭೀಕರ ಹತ್ಯೆಯ ಆರೋಪಿಗಳ ಬಂಧನಕ್ಕೆ ಒತ್ತಾಯ

18/08/2025 6:23 PM1 Min Read

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಹಣ್ಣು ನೀಡಿ ಕುಶಲೋಪರಿ ವಿಚಾರಣೆ

18/08/2025 6:21 PM1 Min Read

ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

18/08/2025 6:16 PM1 Min Read
Recent News

ಮಂಡ್ಯ: ಗ್ರಾಮ ಸಹಾಯಕನ ಭೀಕರ ಹತ್ಯೆಯ ಆರೋಪಿಗಳ ಬಂಧನಕ್ಕೆ ಒತ್ತಾಯ

18/08/2025 6:23 PM

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಹಣ್ಣು ನೀಡಿ ಕುಶಲೋಪರಿ ವಿಚಾರಣೆ

18/08/2025 6:21 PM

ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

18/08/2025 6:16 PM

ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ

18/08/2025 6:12 PM
State News
KARNATAKA

ಮಂಡ್ಯ: ಗ್ರಾಮ ಸಹಾಯಕನ ಭೀಕರ ಹತ್ಯೆಯ ಆರೋಪಿಗಳ ಬಂಧನಕ್ಕೆ ಒತ್ತಾಯ

By kannadanewsnow0918/08/2025 6:23 PM KARNATAKA 1 Min Read

ಮಂಡ್ಯ : ಅಕ್ರಮವಾಗಿ ಮರಳು ದಂಧೆ ತಡೆಯಲು ಹೋದ ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ಸಹಾಯಕನನ್ನು ಭೀಕರವಾಗಿ ಹತ್ಯೆಗೈದಿರುವ ಆರೋಪಿಗಳ…

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಹಣ್ಣು ನೀಡಿ ಕುಶಲೋಪರಿ ವಿಚಾರಣೆ

18/08/2025 6:21 PM

ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

18/08/2025 6:16 PM

ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ

18/08/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.