ಬಾಗಲಕೋಟೆ : ಜಿಲ್ಲೆಯ ಜಮಖಂಡಿಯಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿವೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಮಖಂಡಿ ತಾಲೂಕಿನನಲ್ಲಿ ನಾಲ್ಕು ವರ್ಷದ ಉಮರ್ ಯಾಸಿನ್ ಪಠಾಣಗೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ.ಬಾಲಕನ ಮೂಗು,ಬಾಯಿ, ತೊಡೆಗೆ ಕಚ್ಚಿದ ಬೀದಿ ನಾಯಿಗಳು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಜನರು ಆಗ್ರಹಿಸುತ್ತಿದ್ದಾರೆ.
ಅಲ್ಲದೆ ಇತ್ತೀಚಿಗೆ ಬೆಂಗಳೂರಿನಲ್ಲಿ ಕೂಡ ಬೆಳಿಗ್ಗೆ ವಾಯುಹಾರಕ್ಕೆ ತೆರಳಿದ್ದ ವೃದ್ಧಾರೊಬ್ಬರ ಮೇಲೆ ಬೀದಿ ನಾಯಿ ಒಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿತ್ತು. ಘಟನೆಯನ್ನು ಖಂಡಿಸಿದ ಸ್ಥಳೀಯರು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಬಿಬಿಎಂಪಿಗೆ ಆಗ್ರಹಿಸಿದ್ದರು.