Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ

15/08/2025 5:13 PM

ಆಪರೇಷನ್‌ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ- ಹೆಚ್.‌ಎಂ. ರಮೇಶ್‌ ಗೌಡ

15/08/2025 5:09 PM

ರೈತರು & ವಿತರಕರಿಗಾಗಿ ಸಹಾಯವಾಣಿಗೆ ಆರಂಭಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

15/08/2025 5:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOBS ALRART: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗೆ ಕ್ರಮ – ಕೃಷಿ ಸಚಿವ ಎನ್.ಚಲುವರಾಯಸ್ವಾಮಿ!
KARNATAKA

JOBS ALRART: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗೆ ಕ್ರಮ – ಕೃಷಿ ಸಚಿವ ಎನ್.ಚಲುವರಾಯಸ್ವಾಮಿ!

By kannadanewsnow0703/03/2024 4:35 AM

ಬೆಂಗಳೂರು: ಸರ್ಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಕೃಷಿ ಇಲಾಖೆಯ ಕಾರ್ಯಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳನ್ನು ಜೂನ್ ಮಾಹೆಯೊಳಗೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಇಲಾಖೆಯ 2023-24ನೇ ಸಾಲಿನಲ್ಲಿ ಇದುವರೆಗಿನ ಸಾಧನೆ ಕುರಿತು ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಖಾಲಿ ಹುದ್ದೆಯ ಭರ್ತಿಗೆ ಆರ್ಥಿಕ ಇಲಾಖೆಯು ಅಧಿಕೃತವಾಗಿ ಮಂಜೂರಾತಿ ನೀಡಿದೆ. 750 ಹುದ್ದೆಗಳಲ್ಲಿ 100 ಕೃಷಿ ಅಧಿಕಾರಿಗಳು ಮತ್ತು 650 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದರು.

ಕಳೆದ 20 ವರ್ಷಗಳಿಂದ ಆಗದ ಮುಂಬಡ್ತಿಯನ್ನು ನಾವು ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ 04 ಉಪ ಕೃಷಿ ನಿರ್ದೇಶಕರು, 292 ಸಹಾಯಕ ಕೃಷಿ ನಿರ್ದೇಶಕರು, 253 ಕೃಷಿ ಅಧಿಕಾರಿಗಳು, 33 ಸಿಬ್ಬಂದಿಗಳು ಸೇರಿದಂತೆ ಒಟ್ಟು 582 ಹುದ್ದೆಗಳಿಗೆ ಮುಂಬಡ್ತಿ ನೀಡಲಾಗಿದೆ. ಇನ್ನೂ ಎರಡು-ಮೂರು ವರ್ಷದೊಳಗೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಬರಗಾಲವಿದ್ದು ರೈತರಿಗೆ ಅನೂಕೂಲ ಕಲ್ಪಿಸಿಕೊಡಬೇಕಾಗಿರುವುದರಿಂದ, ಯಾವ ಯಾವ ಇಲಾಖೆಯಲ್ಲಿ ರೈತರಿಗೆ ಅನೂಕೂಲ ಕಲ್ಪಿಸುವ ಯೋಜನೆಗಳಿದ್ದರೆ, ಅವುಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಅದರಂತೆ ಕೃಷಿ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಮೂರು ಬಾರಿ ಸಭೆ ನಡೆಸಲಾಗಿದೆ. ಈಗಲೂ ಸಭೆ ನಡೆಸಿ ಮಾರ್ಚ್ ಅಂತ್ಯದೊಳಗೆ ಕೃಷಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎಲ್ಲಾ ಕೃಷಿ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದರು.

ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿ ಮಳೆಯಾಶ್ರಿತ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕಿಗಳಲ್ಲಿ 100 ಕೋಟಿ ರೂ.ಗಳ ಅನುದಾನದಲ್ಲಿ ಸುಮಾರು 10 ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಕೃಷಿಯಲ್ಲಿ ಯಾಂತ್ರಿಕತೆಯನ್ನು ಪ್ರೋತ್ಸಾಹಿಸಲು 63,783 ಫಲಾನುಭವಿಗಳಿಗೆ 370 ಟ್ರ್ಯಾಕ್ಟರ್, 5,946 ಪವರ್ ಟಿಲ್ಲರ್, 12.060 ಸ್ವಯಂಚಾಲಿತ ಕೃಷಿ ಯಂತ್ರೋಪಕರಣಗಳು ಹಾಗೂ ಟ್ರ್ಯಾಕ್ಟರ್, ಎಂಜಿನ್, ಮೋಟಾರ್ ಚಾಲಿತ ಯಂತ್ರೋಪಕರಣಗಳು 36,907 ಮತ್ತು ಕೃಷಿ ಸಂಸ್ಕರಣಾ ಘಟಕಗಳಿಗೆ ರೂ.284.92 ಕೋಟಿ ಸಹಾಯ ಧನ ನೀಡಲಾಗಿದೆ.

ಬರಗಾಲದ ಹಿನ್ನೆಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ 24.51 ಲಕ್ಷ ರೈತರ ಪ್ರಸ್ತಾವನೆಗಳು ಬಂದಿದ್ದು, 20.10 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದೆ. ಬಿತ್ತನೆ ವೈಫಲ್ಯ, ಮಧ್ಯಂತರ ಬೆಳೆ ವಿಮೆ ಪರಿಹಾರ, ಸ್ಥಳ ನಿರ್ಧಿಷ್ಟ ಪ್ರಕೃತಿ ವಿಕೋಪ ಹಾಗೂ ಕೊಯ್ಲೋತ್ತರ ಬೆಳೆ ನಷ್ಟದಡಿ 8.09 ಲಕ್ಷ ರೈತ ಫಲಾನುಭವಿಗಳಿಗೆ ರೂ. 574.52 ಕೋಟಿಗಳ ಬೆಳೆ ವಿಮೆ ಪರಿಹಾರ ವಿಮಾ ಸಂಸ್ಥೆಗಳಿಂದ ಇತ್ಯರ್ಥಪಡಿಸಲಾಗುತ್ತಿದೆ. ಇನ್ನುಳಿದ ರೈತರಿಗೆ ಮಾರ್ಚ್ ಅಂತ್ಯದೊಳಗೆಬೆಳೆ ವಿಮಾ ಪರಿಹಾರ ಪಾವತಿ ಮಾಡಲಾಗುವುದು. ಇದರಲ್ಲಿ ರೈತರ ಪಾಲಿನ ಬೆಳೆ ವಿಮಾ ಕಂತು ರೂ.184.78 ಕೋಟಿಗಳು ಪಾವತಿಯಾಗಿರುತ್ತದೆ ಎಂದರು.

100 ಹೈಟೆಕ್ ಹಾರ್ವೆಸ್ಟರ್ ಹಬ್‍ಗಳನ್ನು ಸ್ಥಾಪಿಸಲಾಗುತ್ತಿದ್ದು, 50 ಕೋಟಿ ರೂ.ಗಳ ಅನುದಾನ ಒದಿಸಲಾಗಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ 2.34 ಲಕ್ಷ ಫಲಾನುಭವಿಗಳಿಗೆ ಸುಮಾರು 2.74ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ರೂ.484.00 ಕೋಟಿ ಸಹಾಧನ ನೀಡಲಾಗಿದೆ. ವಿಶೇಷ ಘಟಕ ಯೋಜನೆಯಡಿ ಎಲ್ಲಾ ಪರಿಶಿಷ್ಟ ಜಾತಿ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಸಹಾಯಧನವನ್ನು ನೀಡಲಾಗವುದು. ಅರ್ಜಿ ಹಾಕಿದ ಎಲ್ಲಾ ರೈತರಿಗೆ 48 ಗಂಟೆಯೊಳಗೆ ಕಾರ್ಯಾದೇಶ ನೀಡಲಾಗುವುದು.

ರೈತ ಸಿರಿಧಾನ್ಯ ಯೋಜನೆಯಡಿ ಸಿರಿಧಾನ್ಯಗಳ ಉತ್ಪಾದನೆ, ಉತ್ಪದಕತೆ ಮತ್ತು ಬಳಕೆಯನ್ನು ಹೆಚ್ಚಿಸಲು ಸಿರಿಧಾನ್ಯ ಬೆಳೆಗಾರರಿಹೆ ಪ್ರತಿ ಹೆಕ್ಟೇರ್‍ಗೆ ರೂ. 10 ಸಾವಿರದಂತೆ ಗರಿಷ್ಠ 2 ಹೆಕ್ಟೇರ್‍ಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತಿದ್ದು, ಇಲ್ಲಿಯವರೆಗೆ 8,521 ರೈತರಿಗೆ ರೂ.8.56 ಕೋಟಿಗಳನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ.

ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಕೃಷಿ ನವೋದ್ಯಮಗಳಿಗೆ ಉತ್ತೇನ ನೀಡಲು 10.00 ಕೋಟಿಗಳ ಅನುದಾನ ಒದಗಿಸಲಾಗಿದ್ದು, 48 ನವೋದ್ಯಮಗಳನ್ನು ಸ್ಥಾಪಿಸಲಾಗುತ್ತಿದೆ. ಹೊಸ ಕೃಷಿ ನವೋದ್ಯಮಗಳಿಗೆ ರೂ. 5 ಲಕ್ಷ ದಿಂದ 20 ಲಕ್ಷದವರೆಗೆ ಮತ್ತು ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆಗೆ ರೂ. 20.00 ಲಕ್ಷ ದಿಂದ ರೂ 50. ಲಕ್ಷಗಳ ವರೆಗೆ ಆರ್ಥಿಕ ನೆರವನ್ನು ನೀಡಲಾಗಿದೆ.

2024ನೇ ಜನವರಿ 05 ರಿಂದ ಜನವರಿ 07 ವರೆಗೆ ಬೆಂಗಳೂರಿನ ಅರಮನೆ ಮೈದಾನ “ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024”ನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಮೇಳದಲ್ಲಿ 16 ವಿವಿಧ ರಾಜ್ಯಗಳು ಹಾಗೂ 2 ಲಕ್ಷಕ್ಕೂ ಅಧಿಕ ಸಾರ್ವಜನಿಕರು ಭಾಗವಹಿಸಿದ್ದರು. ಮೇಳದಲ್ಲಿ ಸುಮಾರು 150 ಕೋಟಿ ರೂ. ಮೌಲ್ಯದ 41 ಒಪ್ಪಂದಗಳಾಗಿವೆ.

ರೈತ ಸಮುದಾಯದ ಕಲ್ಯಾಣಕ್ಕಾಗಿ ಕೃಷಿ ಇಲಾಖೆ ವತಿಯಿಂದ ವಿವಿಧ ಯೋಜನೆ, ಕಾರ್ಯಕ್ರಮಗಳನ್ನು ಅನುಷ್ಟಾನÀÀ ಮಾಡುತ್ತಿದ್ದು, ಈ ಯೋಜನೆಗಳ ಕುರಿತು ರೈತರು ಮಾಹಿತಿ ಪಡೆಯಲು ಅನುಕೂಲವಾಗುವಂತೆ ನೂತನವಾಗಿ “ರೈತ ಕರೆ ಕೇಂದ್ರ” ವನ್ನು 1800-425-3553 ಏಕರೂಪ ಸಂಖ್ಯೆಯೊಂದಿಗೆ ಸ್ಥಾಪಿಸಲಾಗಿರುತ್ತದೆ.

ನೆಟೆ ರೋಗ ಪರಿಹಾರ ಯೋಜನೆಯಲ್ಲಿ 2022-23ನೇ ಸಾಲಿನಲ್ಲಿ ತೊಗರಿ ಬೆಳೆ ನೆಟೆ ರೋಗದಿಂದ ಹಾನಿಗೊಳಗಾದ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ 2,98,338 ರೈತರಿಗೆ ಇಲ್ಲಿಯವರೆಗೆ ರೂ. 223.00 ಕೋಟಿ ಪರಿಹಾರವನ್ನು ನೇರ ನಗದು ಮೂಲಕ ವರ್ಗಾಯಿಸಲಾಗಿದೆ. ಪರಿಕರಗಳ ವಿತರಣೆಯಲ್ಲಿ ಸುಗಮವಾಗಿ ಹಾಗೂ ಪಾರದರ್ಶಕತೆಯನ್ನು ನಿರ್ವಹಿಸಲು ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಿಸಲಾಗುತ್ತಿರುವ ಎಲ್ಲಾ ಪರಿಕರಗಳಿಗೆ ಕೆ-ಕಿಸಾನ್ ತಂತ್ರಾಂಶದಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗಿದೆ. ಇದರಿಂದ ರೈತರು ವಂಚನೆಗೊಳಗಾಗುವುದನ್ನು ತಪ್ಪಿಸಲಾಗಿದೆ ಎಂದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳಲ್ಲಿ ರಾಷ್ಟ್ರೀಯ ಆಹಾರ ಮತ್ತು ಸುರಕ್ಷತಾ ಅಭಿಯಾನ ಯೋಜನೆ, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ನ್ಯಾಷÀನಲ್ ರೂರಲ್ ಲೈವ್‍ಲಿಹುಡ್ ಮಿಷನ್ ಯೋಜನೆ, ಕೌಶಲ್ಯಾಭಿವೃದ್ಧಿ ಮತ್ತು ಇತ್ಯಾದಿ ಯೋಜನೆಗಳನ್ನು ಒಗ್ಗೂಡಿಸಿ 697 ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಆಯೋಜಿಸಿರುವ ವಿವಿಧ ತರಬೇತಿ ಕಾರ್ಯಕ್ರಮಗಳಡಿ ಒಂದು ಲಕ್ಷಕ್ಕಿಂತ ಹೆಚ್ಚು ರೈತರಿಗೆ ಮತ್ತು ವಿಸ್ತರಣಾ ಅಧಿಕಾರಿಗಳಿಗೆ ವಿವಿಧ ತಾಂತ್ರಿಕತೆ ಮತ್ತು ಕೌಶಲ್ಯಗಳ ಕುರಿತು ತರಬೇತಿ ನೀಡಲಾಗಿದೆ.

2023-24ನೇ ಸಾಲಿನಲ್ಲಿ 6.12 ಲಕ್ಷ ಕ್ವಿಂಟಾಲ್ ವಿವಿಧ ಬಿತ್ತನೆ ಬೀಜಗಳನ್ನು 13.09 ಲಕ್ಷ ರೈತರಿಗೆ ರೂ.155.36ಕೋಟಿ ಸಹಾಯಧನದಲ್ಲಿ ವಿತರಣೆ ಮಾಡಲಾಗಿದೆ. 42.27 ಲಕ್ಷ ಮೆಟ್ರಿಕ್ ಟನ್ ವಿವಿಧ ರಾಸಾಯನಿಕ ರಸಗೊಬ್ಬರಗಳ ಬೇಡಿಕೆ ಅಂದಾಜಿಸಿ ಸಕಾಲದಲ್ಲಿ ಪೂರೈಕೆಗಾಗಿ ಜಿಲ್ಲಾವಾರು, ಮಾಹೆವಾರು ಮತ್ತು ಸಂಸ್ಥೆವಾರು ಸರಬರಾಜು ಮಾಡುವ ಸಿದ್ಧತೆ ಮಾಡಲಾಗಿದೆ. 50.28 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜಾಗಿದ್ದು, 38.42 ಲಕ್ಷ ಮೆಟ್ರಿಕ್ ಟನ್ ಮಾರಾಟವಾಗಿದೆ ಹಾಗೂ 11.86 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಲಭ್ಯವಿರುತ್ತದೆ. ಯಾವುದೇ ರಸಗೊಬರದ ಕೊರತೆ ಇರುವುದಿಲ್ಲ.

ಮುಂದಿನ ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ತೊಂದರೆಯಾಗದಂತೆ ಈಗಿನಿಂದಲೇ ರಸಗೊಬ್ಬರ, ಬಿತ್ತನೆ ಬೀಜ ವಿತರಿಸಲು ತಯಾರು ನಡೆಸಲಾಗುತ್ತಿದೆ ಎಂದರು.ಕೃಷಿ ಇಲಾಖೆಯ ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ದೂರದರ್ಶನದ ಚಂದನ ವಾಹಿನಿಯಲ್ಲಿ 12 ನೇರ ಫೆÇೀನ್ ಇನ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಗಳನ್ನು 10ಲಕ್ಷಕ್ಕಿಂತ ಹೆಚ್ಚು ಜನರು ವೀಕ್ಷಿಸಿರುತ್ತಾರೆ. ಇದಲ್ಲದೆ, ಆಕಾಶವಾಣಿ ಮೂಲಕ 11 ರೇಡಿಯೋ ಪೆÇೀನ್ ಇನ್ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿರುತ್ತದೆ ಎಂದರು.

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ಮೂಲಕ ರೂ.167.19 ಕೋಟಿ ಮೌಲ್ಯದ 2.40 ಲಕ್ಷ ಕ್ವಿಂಟಾಲ್ ವಿವಿಧ ಬೆಳೆ, ತಳಿಗಳ ಪ್ರಮಾಣಿತ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ. ಇದಲ್ಲದೆ, ನಿಗಮದ ಮೂಲಕ ರಸಗೊಬ್ಬರ ವಿವಿಧ ಗ್ರೇಡ್ ಗಳ ಒಟ್ಟು 1.18 ಲಕ್ಷ ಮೆಟ್ರಿಕ್ ಟನ್‍ಗಳ ಕಾಪು ದಾಸ್ತಾನು ಮಾಡಿ ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಾಗದಂತೆ ಕ್ರಮವಹಿಸಲಾಗಿದೆ.

ಜಲಾನಯನ ಅಭಿವೃದ್ಧಿ ಯೋಜನೆಗಳಡಿ 4,222 ನೀರು ಸಂಗ್ರಹಣಾ ವಿನ್ಯಾಸಗಳ ನಿರ್ಮಾಣ ಮಾಡಲಾಗಿದೆ. 62,475 ಹೆಕ್ಟೇರ್ ಪ್ರದೇಶವನ್ನು ಉಪಚರಿಸಿ, ರೂ. 282.97 ಕೋಟಿ ವೆಚ್ಚ ಭರಿಸಲಾಗಿದೆ. ವಿಶ್ವಬ್ಯಾಂಕ್ ನೆರವಿನ REWARD ಯೋಜನೆಯಡಿ ರೂ. 60.78 ಕೋಟಿ ವೆಚ್ಚ ಭರಿಸಿ 1,399 ಕಿರು ಜಲಾನಯನಗಳ 10.24 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಎಲ್.ಆರ್.ಐ ಪೂರ್ಣಗೊಳಿಸಲಾಗಿದೆ.

ಮಳೆ ಆಧಾರಿತ ಪ್ರದೇಶ ಅಭಿವೃದ್ಧಿ ಕಾರ್ಯಕ್ರಮಗಳಡಿ ರೂ. 12.83 ಕೋಟಿ ವೆಚ್ಚ ಭರಿಸಿ 4,276 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಕೃಷಿ ಪದ್ಧತಿ ಚಟುವಟಿಕೆಗಳ ಸೌಲಭ್ಯವನ್ನು 4,296 ಫಲಾನುಭವಿಗಳಿಗೆ ಒದಗಿಸಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ, 44,584 ಹೆಕ್ಟೇರ್ ಬದು ನಿರ್ಮಾಣ ಮತ್ತು ಕೃಷಿ ಹೊಂಡ ಸೇರಿದಂತೆ 5,176 ವಿವಿಧ ಮಣ್ಣು ಮತ್ತು ನೀರು ಸಂರಕ್ಷಣಾ ಚಟುವಟಿಕೆಗಳನ್ನು ಅನುಷ್ಟಾನ ಮಾಡಿ, 81.69 ಲಕ್ಷ ಮಾನವ ದಿನಗಳ ಸೃಜನೆ ಮಾಡಲಾಗಿದೆ.

ಪ್ರಧಾನಮಂತ್ರಿ ಕಿರು ಆಹಾರ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PMFME) ಯೋಜನೆಯಡಿ ಸಾಮಾನ್ಯ ಮೂಲಭೂತ ಸೌಕರ್ಯ ಸ್ಥಾಪನೆಗೆ, ಬ್ರಾಂಡಿಂಗ್, ಮಾರ್ಕೆಟಿಂಗ್ ಮತ್ತು ಸ್ವಸಹಾಯ ಸಂಘಗಳ ಸದಸ್ಯರುಗಳಿಗೆ ಪ್ರಾಥಮಿಕ ಬಂಡವಾಳದ ಸಹಾಯವನ್ನು ಸೇರಿದಂತೆ 1,416 ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲಾಗಿದ್ದು ರೂ 421.27 ಕೋಟಿಯಷ್ಟು ಬಂಡವಾಳವು ಈ ಕ್ಷೇತ್ರದಲ್ಲಿ ಹೂಡಿಕೆಯಾಗುತ್ತಿದೆ. ಕೇಂದ್ರ ಪುರಸ್ಕøತ ಯೋಜನೆಗಳಾದ ಕೃಷಿ ವಿಸ್ತರಣೆ ಅಭಿಯಾನ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಸೂಕ್ಷ್ಮ ನೀರಾವರಿ ಯೋಜನೆಗಳಡಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಕಂತುಗಳಲ್ಲಿ ಅನುದಾನ ಪಡೆಯಲಾಗಿದೆ ಹಾಗೂ ಎಲ್ಲಾ ಕೇಂದ್ರ ಪುರಸ್ಕøತ ಯೋಜನೆಗಳಡಿ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅನುದಾನ ಪಡೆಯಲು ಕ್ರಮ ವಹಿಸಲಾಗಿದೆ ಎಂದರು.

ಪ್ರಥಮ ಬಾರಿಗೆ ಕೃಷಿ ಯಾಂತ್ರೀಕರಣ ಉಪ ಅಭಿಯಾನ ಅನುದಾನ ರೂ.200 ಕೋಟಿ ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಡಿ.ಪಿ.ಆರ್ ರೂ.77.76 ಕೋಟಿಅಡಿಯಲ್ಲಿ ಅನುಮೋದಿತ ಕ್ರಿಯಾ ಯೋಜನೆಗಿಂತ ಹೆಚ್ಚುವರಿ ಅನುದಾನವನ್ನು ಕೇಂದ್ರ ಸರ್ಕಾರದಿಂದ ಪಡೆಯಲಾಗಿರುತ್ತದೆ. ಕೇಂದ್ರ ಪುರಸ್ಕøತ ಯೋಜನೆಗಳಡಿ ಮೊದಲ ಮೂರು ಕಂತುಗಳಲ್ಲಿ ರೂ.783.56 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಹೆಚ್ಚುವರಿಯಾಗಿ ರೂ.277.76 ಕೋಟಿ ಸೇರಿದಂತೆ ಒಟ್ಟು ಅಂದಾಜು ಅನುದಾನ ರೂ.1061.32 ಕೋಟಿಗಳಾಗಿರುತ್ತದೆ ಎಂದರು.
2024-25ನೇ ಸಾಲಿನ ಆಯವ್ಯಯದ ಕೃಷಿ ಇಲಾಖೆಯ ಯೋಜನೆಗಳು: ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿ ಮಾಡಲಾಗುವುದು. ಇದರಡಿ ಕೃಷಿ, ಪಶುಸಂಗೋಪನೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು. ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆಯನ್ನು ಬೆಳೆಯಬೇಕೆಂಬುದರ ಕುರಿತು ರೈತರಿಗೆ ಮಾರ್ಗದರ್ಶನ ನೀಡಲಾಗುವುದು. ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡಲಾಗುವುದು. ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ ಬೆಂಬಲ ನೀಡಲಾಗುವುದು.

ರೈತರಿಗೆ ಸಂಗ್ರಹಣೆ ಹಾಗೂ ಮೌಲ್ಯವರ್ಧನೆ ಕುರಿತು ಅರಿವು ಮೂಡಿಸುವುದು. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು. ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಟಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಂಪರ್ಕ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ “ಕೃಷಿ ಅಭಿವೃದ್ಧಿ” ಪ್ರಾಧಿಕಾರದ ರಚನೆ ಮಾಡಲಾಗುವುದು.
ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಹಾಗೂ ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್‍ನ್ನು ಸ್ಥಾಪಿಸಲಾಗುವುದು. ಪ್ರಗತಿಪರ ರೈತರು, ರೈತ ಉತ್ಪಾದಕ ಸಂಸ್ಥೆಗಳು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು ಹಾಗು ರಾಜ್ಯ ಕೃಷಿ ವಿಶ್ವವಿದ್ಯಾಲಯಗಳ ಮೂಲಕ ಉತ್ತಮ ದೇಸಿ ತಳಿಗಳ ಬಿಡುಗಡೆಗೆ ಕ್ರಮ ವಹಿಸಲಾಗುವುದು.

“ನಮ್ಮ ಮಿಲ್ಲೆಟ್” ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿ, ಇದರಡಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಹಾಗೂ ರಿಟೇಲ್ ಚೈನ್‍ಗಳ ಸಹಭಾಗಿತ್ವದಲ್ಲಿ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು. ಇದರಿಂದಾಗಿ ರಾಜ್ಯದ 15 ಸಾವಯವ ಪ್ರಾಂತೀಯ ಒಕ್ಕೂಟಗಳು ಹೆಚ್ಚಿನ ಲಾಭಗಳಿಸುವಲ್ಲಿ ಉಪಯುಕ್ತವಾಗುತ್ತದೆ. ಮುಂದಿನ ದಿನಗಳಲ್ಲಿ ಮಕ್ಕಳ ಬಿಸಿಯೂಟ ಇತ್ಯಾದಿ ಕಾರ್ಯಕ್ರಮಗಳಡಿ ಒಳಪಡಿಸುವಲ್ಲಿ ಯೋಜಿಸಲಾಗಿದೆ.
ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ “ಜ್ಞಾನ ಕೇಂದ್ರ”ವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದರಲ್ಲಿ ಸಾವಯವ ಕೃಷಿ, ಬೀಜೋತ್ಪಾದನೆ ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳುವುದರ ಮೂಲಕ ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಿ, ವಿಶೇಷವಾಗಿ ಯುವಕರು ಮತ್ತು ಶಾಲಾ ಮಕ್ಕಳಿಗೆ “ಕಲಿಕಾ ಕೇಂದ್ರ”ವನ್ನಾಗಿ ರೂಪಿಸಲಾಗುವುದು.

ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆಗಳನ್ನು ನೀಡಲು ಕೃಷಿ ವಿಶ್ವವಿದ್ಯಾಲಯ, ರಾಯಚೂರು ಇವರು ಅಭಿವೃದ್ಧಿ ಪಡಿಸಿರುವ ಇ-ಸ್ಯಾಫ್‍ಅನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಇದರಿಂದಾಗಿ ಕೀಟ-ರೋಗಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡುವುದರ ಮೂಲಕ ಉತ್ಪಾಕತೆ ಮತ್ತು ರೈತರ ಆದಾಯ ಹೆಚ್ಚಿಸಬಹುದಾಗಿದೆ. ಮುಂದುವರೆದು, ಆಡಳಿತದಲ್ಲಿ ಡಿಸಿಷನ್ ಸಪೋರ್ಟ್ ಸಿಸ್ಟಮ್‍ಆಗಿ ಕಾರ್ಯ ನಿರ್ವಹಿಸುತ್ತದೆ.

ಕೃಷಿ ನಾವಿನ್ಯತೆಯ ಯುಗದಲ್ಲಿ ಪ್ರಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಯಾಗಿದ್ದು, ಉಪಗ್ರಹ ಚಿತ್ರ ಸೆನ್ಸ್‍ರ್‍ಗಳ ಬಳಕೆ ಮತ್ತು ಮೆಷಿನ್ ಲನಿರ್ಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು.

ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ “ಆಹಾರ ಸಂಸ್ಕರಣಾ ಆಯುಕ್ತಾಲಯ” ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ ಒಂದು ಸಾವಿರಂತೆ ಒಟ್ಟು 5 ಸಾವಿರ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು.

ರೈತ ಉತ್ಪಾದಕ ಸಂಸ್ಥೆಗಳನ್ನು (ಎಫ್.ಪಿ.ಓ) ಇನ್ನಷ್ಟು ಸದೃಢ ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ ತರಬೇತಿ, ಮಾರ್ಗದರ್ಶನ ಹಾಗೂ we Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‍ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.

ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವ ವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು. ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾಗೊಳಿಸಲಾಗುವುದು ಎಂದರು.

JOBS ALRART: Agriculture Minister N Chaluvarayaswamy to fill up 750 vacancies in agriculture department JOBS ALRART: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗೆ ಕ್ರಮ - ಕೃಷಿ ಸಚಿವ ಎನ್.ಚಲುವರಾಯಸ್ವಾಮಿ!
Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ

15/08/2025 5:13 PM1 Min Read

ಆಪರೇಷನ್‌ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ- ಹೆಚ್.‌ಎಂ. ರಮೇಶ್‌ ಗೌಡ

15/08/2025 5:09 PM2 Mins Read

ರೈತರು & ವಿತರಕರಿಗಾಗಿ ಸಹಾಯವಾಣಿಗೆ ಆರಂಭಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

15/08/2025 5:04 PM1 Min Read
Recent News

BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ

15/08/2025 5:13 PM

ಆಪರೇಷನ್‌ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ- ಹೆಚ್.‌ಎಂ. ರಮೇಶ್‌ ಗೌಡ

15/08/2025 5:09 PM

ರೈತರು & ವಿತರಕರಿಗಾಗಿ ಸಹಾಯವಾಣಿಗೆ ಆರಂಭಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

15/08/2025 5:04 PM

BIG NEWS : ಸಿಲಿಂಡರ್ ಸ್ಫೋಟ ಪ್ರಕರಣ : ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

15/08/2025 5:02 PM
State News
KARNATAKA

BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ

By kannadanewsnow0515/08/2025 5:13 PM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಬ್ಯೂಟಿ ಪಾರ್ಲರ್ಗಳ ಮೇಲೆ ಆರೋಗ್ಯ ಅಧಿಕಾರಿಗಳು ಇಂದು ಏಕಾಏಕಿ ದಾಳಿ ಮಾಡಿದರು.…

ಆಪರೇಷನ್‌ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ- ಹೆಚ್.‌ಎಂ. ರಮೇಶ್‌ ಗೌಡ

15/08/2025 5:09 PM

ರೈತರು & ವಿತರಕರಿಗಾಗಿ ಸಹಾಯವಾಣಿಗೆ ಆರಂಭಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

15/08/2025 5:04 PM

BIG NEWS : ಸಿಲಿಂಡರ್ ಸ್ಫೋಟ ಪ್ರಕರಣ : ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

15/08/2025 5:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.