Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ತಿಂಗಳು ಭಾರತಕ್ಕೆ ಮೊದಲ ಬ್ಯಾಚ್ ‘ಅಪಾಚೆ ಯುದ್ಧ ಹೆಲಿಕಾಪ್ಟರ್‌’ ಆಗಮನ: ಪಾಕ್ ಗಡಿಯಲ್ಲಿ ನಿಯೋಜನೆ | Apache Choppers

02/07/2025 8:57 PM

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM

BREAKING: ಜುಲೈ.4ರಂದು CUET UG 2025 ಫಲಿತಾಂಶ ಪ್ರಕಟ: NTA ಮಾಹಿತಿ | CUET UG 2025 Result

02/07/2025 8:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮೋದಿ’ ಬಗ್ಗೆ ಮಾತನಾಡಲು ನೀವು ಯಾರು?: ಸಿದ್ದರಾಮಯ್ಯ ವಿರುದ್ಧ ‘HD ದೇವೇಗೌಡ’ ಗುಡುಗು
KARNATAKA

‘ಮೋದಿ’ ಬಗ್ಗೆ ಮಾತನಾಡಲು ನೀವು ಯಾರು?: ಸಿದ್ದರಾಮಯ್ಯ ವಿರುದ್ಧ ‘HD ದೇವೇಗೌಡ’ ಗುಡುಗು

By kannadanewsnow0905/03/2024 6:06 PM

ಬೆಂಗಳೂರು: ಶೂನ್ಯ ಸಾಧನೆ ಭಯಕ್ಕೆ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂದು ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಮುಂದಿನ ಚುನಾವಣೆಯಲ್ಲಿ ಅವರಿಗೆ ಉತ್ತರ ಸಿಗುತ್ತದೆ ಎಂದು ಗುಡುಗಿದರು.

ಪಕ್ಷದ ರಾಜ್ಯ ಕಾವೇರಿ ಜೆ ಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಮಂಡ್ಯ ಕಾರ್ಯಕ್ರಮದಲ್ಲಿ ಮಾತಾಡಿದ್ದರು ಸಿದ್ದರಾಮಯ್ಯ ಅವರು. ಮುಂದಿನ ಜನ್ಮವಿದ್ದರೆ ಮುಸ್ಲಿಂಮರಲ್ಲಿ ಹುಟ್ಟುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಈಗ ಬಿಜೆಪಿ ಜತೆ ಸೇರಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, ಕುಮಾರಸ್ವಾಮಿ ಅವರ ಸರಕಾರವನ್ನು ತೆಗೆದಿದ್ದು ಯಾರು? ಯಾವ ಕಾರಣಕ್ಕೆ ತೆಗೆದಿರಿಸಿ? ಎಂದು ಅಬ್ಬರಿಸಿದರು.

ಬಿಜೆಪಿ ಜತೆ ಜೆಡಿಎಸ್ ವಿಲೀನ ಅಂತ ಸಿದ್ದರಾಮಯ್ಯನವರೇ ತೀರ್ಮಾನ ಮಾಡಿಬಿಟ್ಟರು. ಮೋದಿಗೆ ಪೈಪೋಟಿ ನೀಡುವ ಸಮರ್ಥ ನಾಯಕ ಸಿದ್ದರಾಮಯ್ಯ ಎಂದಿದ್ದ ಮಂಡ್ಯದ ನಾಯಕರೊಬ್ಬರು ಹೇಳಿದ್ದರು. ಜಾತ್ಯತೀತ ಎಂಬ ಪದ ಬಳಕೆ ಮಾಡುವ ನೈತಿಕತೆ ಜೆಡಿಎಸ್ ಗೆ ಇಲ್ಲ ಎಂದು ಕಾಂಗ್ರೆಸ್ ನವರು ಹೇಳಿದ್ದರು. ಹಾಗಾದರೆ, ಮುಸ್ಲಿಮರಿಗೆ ನಾನು ಕೊಟ್ಟಿದ್ದ 4% ಮೀಸಲಾತಿಯನ್ನು ಇವರು ಮತ್ತೆ ಕೊಡಲಿ ನೋಡೋಣ ಎಂದು ಸವಾಲು ಹಾಕಿದರು.

ಬಿಜೆಪಿ ಜತೆ ಕುಮಾರಸ್ವಾಮಿ ಸರಕಾರ ಮಾಡಿದಾಗ ಈ ಮಂಡ್ಯದ ನಾಯಕ ಸಾರಿಗೆ ಮಂತ್ರಿ ಆಗಿದ್ದರು. ಅದು ಮರೆತು ಹೋಯ್ತಾ ಇವರಿಗೆ? ಎಂದು ಮಾಜಿ ಪ್ರಧಾನಿಗಳು ಕೆಂಡಾಮಂಡಲರಾದರು.

ಸಿದ್ದರಾಮಯ್ಯ ಆಡಳಿತ ವೈಖರಿಗೆ ಕಿಡಿ

ಸಿದ್ದರಾಮಯ್ಯ ಅವರೇ ನನ್ನ ಜತೆ ಹಣಕಾಸು ಮಂತ್ರಿ ಅಗಿದ್ದರು. ಒಂದೂವರೆ ವರ್ಷದಲ್ಲಿ ಒಂದು ನಿಗಮ ಮಂಡಳಿಗೂ ನಾನು ಅಧ್ಯಕ್ಷರನ್ನು ನೇಮಕ ಮಾಡಲಿಲ್ಲ. ಆಗ ನಮಗೆ 113 ಸ್ಥಾನ ಇತ್ತು. ಈಗ ನಿಮಗೆ 136 ಸ್ಥಾನ ಕೊಟ್ಟು ಜನ ತೀರ್ಪು ನೀಡಿದ್ದಾರೆ. 5 ಗ್ಯಾರಂಟಿ ಜನರಿಗೆ ತಲುಪಿದೆಯಾ ಇಲ್ಲವೇ ಎಂದು ನೋಡುವುದಕ್ಕೆ 5 ಮಾಜಿ ಮಂತ್ರಿಗಳನ್ನು ನೇಮಕ ಮಾಡಿದ್ದೀರಿ. ಜಿಲ್ಲಾ ಮಟ್ಟದಲ್ಲೂ ಸಮಿತಿ ನೇಮಕ ಮಾಡುತ್ತಿದ್ದೀರಿ. 136 ಶಾಸಕರು, 20-25 ಎಂಎಲ್ಸಿಗಳು, 95 ಜನ ಬೋರ್ಡ್ ಅಧ್ಯಕ್ಷರು, ಅವರಿಗೆ ಸಂಪುಟ ದರ್ಜೆ, ಸಲಹೆಗಾರರಿಗೂ ಸಂಪುಟ ದರ್ಜೆ. ಈಗ ಪಕ್ಷದ ಕಾರ್ಯಕರ್ತರು, ಮುಖಂಡರ ನೇಮಕ ಆಗಿದೆ. ಇದು ಇವರ ಅಡಳಿತದ ವೈಖರಿ ಎಂದು ನೇರವಾಗಿ ಸಿದ್ದರಾಮಯ್ಯ ಅವರನ್ನೇ ತರಾಟೆಗೆ ತೆಗೆದುಕೊಂಡರು ಮಾಜಿ ಪ್ರಧಾನಿಗಳು.

ಕೇಂದ್ರದಿಂದ ನಮಗೆ ಹಣ ಬಂದಿಲ್ಲ ಅಂತಾರೆ ಇವರು. ಈ ದೇವೇಗೌಡ ಸಿಎಂ ಆಗಿದ್ದಾಗ ಕೇಂದ್ರದವರು ರೈತರ ಸಾಲಮನ್ನಾ ನಾವೇ ಮಾಡುತ್ತೇವೆ ಅಂದರು. ಕೊನೆಪಕ್ಷ ನಾವು ಬಡ್ಡಿ ಮನ್ನಾ ಮಾಡುತ್ತೇವೆ, ಒಪ್ಪಿಗೆ ಕೊಡಿ ಎಂದರೂ ಅವರು ಒಪ್ಪಿಗೆ ಕೊಡಲಿಲ್ಲ. ಅವತ್ತು ಸಿದ್ದರಾಮಯ್ಯ ನನ್ನ ಸಂಪುಟದಲ್ಲಿ ಹಣಕಾಸು ಮಂತ್ರಿ ಆಗಿದ್ದರು. ನಿಮಗೆ ಪ್ರಾಮಾಣಿಕತೆ ಇದ್ದರೆ ಅವತ್ತು ಏನ್ ನಡೀತು ಹೇಳಿ. ಈಗ ಯಾಕೆ ಮೋದಿ ಬಗ್ಗೆ ಮಾತಾಡ್ತೀರಾ? ಎಂದು ಮಾಜಿ ಪ್ರಧಾನಿಗಳು ಸಿದ್ದರಾಮಯ್ಯ ಅವರನ್ನು ಖಾರವಾಗಿ ಪ್ರಶ್ನಿಸಿದರು.

ಮೋದಿ ಬಗ್ಗೆ ಮಾತನಾಡಲು ನೀವು ಯಾರು?

ಬೆಳಗ್ಗೆ ಎದ್ದರೆ ಮೋದಿ ಮೋದಿ ಅಂತಾರೆ. ಹಿಂದೆ ಮನಮೋಹನ್ ಸಿಂಗ್ ಅವರು ಏನು ಕೊಟ್ಟಿದ್ದರು? ಅದನ್ನು ಇವರು ಹೇಳಬೇಕು. ಅದಕ್ಕೂ ಮೊದಲು ವಾಜಪೇಯಿ ಅವರು ಏನು ಕೊಟ್ಡಿದ್ದಾರೆ ಹೇಳಿ. ಸಿದ್ದರಾಮಯ್ಯನವರೇ ಸತ್ಯ ಹೇಳಿ. ಮೋದಿ ಈ ದೇಶದಲ್ಲಿರುವ ಸಮರ್ಥ ನಾಯಕ ಅನ್ನುವುದನ್ನು ಇಲ್ಲ ಎನ್ನುವುದಕ್ಕೆ ಇವರು ಯಾರು? WHO IS HE? ಮೋದಿ ಅವರನ್ನು ಇಡೀ ವಿಶ್ವ ಒಪ್ಪಿದೆ. ಮಾತಾಡೋಕು ಇತಿಮಿತಿ ಇರಬೇಕು ಎಂದು ಕಿಡಿಕಿಡಿಯಾದರು ಮಾಜಿ ಪ್ರಧಾನಿಗಳು.

ಕಿರಿಯ ಅಧಿಕಾರಿ ನೇಮಕ ಪ್ರಸ್ತಾಪಿಸಿದ ಮಾಜಿ ಪ್ರಧಾನಿಗಳು

ನಾನು ಯಾವುದೇ ಕಾಮಗಾರಿಯ ಎಲ್ ಒಸಿ ನೀಡಬೇಕಾದರೆ ಐದು ಪೈಸೆ ಪಡೆದಿದ್ದೇನೆ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 5 ಪೈಸೆ ತಗೊಳ್ಳೋದು ಎಲ್ಲಾದರೂ ಉಂಟೆ? ಅದು ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತರುತ್ತಾ? ಅವರು ಒಬ್ಬರು ನೀರಾವರಿ ಕಾರ್ಯದರ್ಶಿಯನ್ನು ನೇಮಕ ಮಾಡಿದ್ದಾರೆ. ನಾನು ಫೊನ್ ಮಾಡಿದೆ ಫೋಲ್ ರಿಸೀವ್ ಮಾಡಿಲ್ಲ. ನಾನು ಒಂದು ದೇಶದ ಸಣ್ಣ ರಾಜಕಾರಣಿ. ಪಾಪ ಅವರ ಕಾರ್ಯದರ್ಶಿ ಫೋನ್ ತೆಗೆದುಕೊಂಡಿಲ್ಲ. ಅವರು ಯಾರು ಅಂತ ಕೇಳಿದರೆ ಸಿದ್ದರಾಮಯ್ಯ ಅವರ ಸಂಬಂಧಿ ಅಂತ ಹೇಳೊದಿಲ್ಲ, ಅವರು ಸಿದ್ದರಾಮಯ್ಯ ಅವರ ಸಮಾಜದವರು. ಆ ಹಿರಿಯ ಹುದ್ದೆಗೆ ಅತ್ಯಂತ ಕಿರಿಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಏಕೆ? ಎಂದು ಪ್ರಶ್ನಿಸಿದರು ಮಾಜಿ ಪ್ರಧಾನಿಗಳು.

ಜನಪರ ಕಳಕಳಿಯ ಸರಕಾರ ನನ್ನದು ಅಂತಾರೆ ಸಿದ್ದರಾಮಯ್ಯ. ಕುಮಾರಸ್ವಾಮಿ ಅವರ ಪಂಚರತ್ನ, ಜಲಧಾರೆ ಕಾರ್ಯಕ್ರಮ ಮಾಡಿದ್ದರಲ್ಲವೇ? ಅವರಿಗೆ ಜನಪರ ಕಳಕಳಿ ಇರಲಿಲ್ಲವಾ? ಅವರ ಸರಕಾರ ತೆಗೆದಿದ್ದು ಯಾರು ಹಾಗಾದರೆ? ನೀವು ಮಾಡಿದ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಮಾಡಿದ್ದು ಕುಮಾರಸ್ವಾಮಿ. ಇಂಥ ನೀವು ಜೆಡಿಎಸ್ ಪಕ್ಷ ಉಳಿಯೊಲ್ಲ ಅಂತೀರಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಮುದುಕಪ್ಪನಿಗೆ ಸ್ವಾಭಿಮಾನ ಇದೆ

ಮಂಡ್ಯದ ನಾಯಕರೊಬ್ಬರು ತುಂಬಾ ಎತ್ತರಕ್ಕೆ ಬೆಳೆದಿದ್ದಾರೆ. ತುಂಬಾ ತುಂಬಾ ಎತ್ತರಕ್ಕೆ ಬೆಳೆದಿದ್ದಾರೆ. ಅ ಮುದುಕಪ್ಪನನ್ನ ಕಟ್ಟಿಕೊಂಡು ಏನೇನೋ ಮಾಡೋಕೆ ಹೋಗ್ತಿದ್ದಾರೆ ಅಂತಾರೆ. ಅ ಮುದುಕಪ್ಪನಿಗೆ ಸ್ವಾಭಿಮಾನ ಇದೆ. ಈ ಪಕ್ಷ ಉಳಿಸೋದು ಕಾವೇರಿ ನೀರಿಗಾಗಿ, ನಿಮಗೆ ಮಾತಾಡೋ ಯೋಗ್ಯತೆ ಇಲ್ಲ. ಹೇಮಾವತಿ ಕಟ್ಟಿವನು, ಹಾರಂಗಿ ಕಟ್ಟಿರೋನು ನಿಮ್ಮ ಮುಂದೆ ಇದ್ದೇನೆ ಎಂದು ಮಾಜಿ ಪ್ರಧಾನಿಗಳು ಸಚಿವ ಚೆಲುವರಾಯಸ್ವಾಮಿ ವಿರುದ್ದ ಗುಡುಗಿದರು.

ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರು ಹಾಜರಿದ್ದರು.

Watch Video: ‘ಬರಗಾಲ’ದಲ್ಲೂ ಖುಲಾಯಿಸಿದ ‘ರೈತ’ನ ಅದೃಷ್ಠ: ‘ಬೇಸಿಗೆ’ಯಲ್ಲೂ ಬೋರಲ್ಲಿ 45 ಅಡಿಗೆ ‘2.5 ಇಂಚು’ ನೀರು

BREAKING : ಸಂದೇಶ್ಖಾಲಿ ಪ್ರಕರಣ ; ‘CBI ತನಿಖೆಗೆ ಹಸ್ತಾಂತರ’ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಂಗಾಳ ಸರ್ಕಾರ

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM3 Mins Read

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM2 Mins Read

ಬಿವೈ ರಾಘವೇಂದ್ರ, ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ಹಿಗ್ಗಾಮುಗ್ಗಾ ವಾಗ್ಧಾಳಿ

02/07/2025 7:51 PM2 Mins Read
Recent News

ಈ ತಿಂಗಳು ಭಾರತಕ್ಕೆ ಮೊದಲ ಬ್ಯಾಚ್ ‘ಅಪಾಚೆ ಯುದ್ಧ ಹೆಲಿಕಾಪ್ಟರ್‌’ ಆಗಮನ: ಪಾಕ್ ಗಡಿಯಲ್ಲಿ ನಿಯೋಜನೆ | Apache Choppers

02/07/2025 8:57 PM

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM

BREAKING: ಜುಲೈ.4ರಂದು CUET UG 2025 ಫಲಿತಾಂಶ ಪ್ರಕಟ: NTA ಮಾಹಿತಿ | CUET UG 2025 Result

02/07/2025 8:22 PM

BREAKING : ಜುಲೈ 4ರಂದು ‘CUET UG ಫಲಿತಾಂಶ’ ಬಿಡುಗಡೆ |CUET UG Result 2025

02/07/2025 8:17 PM
State News
KARNATAKA

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

By kannadanewsnow0902/07/2025 8:36 PM KARNATAKA 3 Mins Read

ಬೆಂಗಳೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾಗಿರುವಂತ ಅವ್ಯವಹಾರದ ಬಗ್ಗೆ ವಿಚಾರಣಾಧಿಕಾರಿಯನ್ನು ನೇಮಿಸಿ ತನಿಖೆಗೆ ಸಹಕಾರ ಇಲಾಖೆ ಆದೇಶಿಸಿದೆ.…

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM

ಬಿವೈ ರಾಘವೇಂದ್ರ, ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ಹಿಗ್ಗಾಮುಗ್ಗಾ ವಾಗ್ಧಾಳಿ

02/07/2025 7:51 PM

ಸಾಗರ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಸಂಸದ ಹಸ್ತಕ್ಷೇಪ ಸಹಿಸುವುದಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

02/07/2025 7:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.