ಉತ್ತರಪ್ರದೇಶ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಓಂ ಪ್ರಕಾಶ್ ರಾಜ್ಭರ್ ಅವರ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ನಾಯಕಿ ನಂದಿನಿ ರಾಜ್ಭರ್ ಹತ್ಯೆ ಮಾಡಲಾಗಿದೆ.ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
BREAKING: ‘ಚುನಾವಣಾ ಬಾಂಡ್’ ವಿವರ ನೀಡದ SBI ವಿರುದ್ಧ ಸುಪ್ರೀಂ ಕೋರ್ಟ್ ಗರಂ !
ಮಾಹಿತಿ ಪ್ರಕಾರ ನಂದಿನಿ ರಾಜ್ಭರ್ ಅವರ ಪತಿಯ ಚಿಕ್ಕಪ್ಪ ಬಾಲಕೃಷ್ಣ ಎಂಬುವರಿಗೆ ಸೇರಿದ ಜಾಗವನ್ನು ಸ್ಥಳೀಯ ಭೂಮಾಫಿಯಾ ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಅದರ ಸಂಪೂರ್ಣ ಹಣವನ್ನು ಪಾವತಿಸದೆ ಅದನ್ನು ನೋಂದಾಯಿಸಿದ್ದರು. ಇದರಿಂದಾಗಿ ಫೆ.29ರಂದು ಬಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.
‘ಚುನಾವಣಾ ಬಾಂಡ್’: ಇಂದು ಸುಪ್ರೀಂ ಕೋರ್ಟ್ ನಲ್ಲಿ SBI ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪ್ರಾರಂಭ
ಓಂ ಪ್ರಕಾಶ್ ರಾಜ್ಭರ್ ಅವರ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಸ್ಥಳೀಯ ನಾಯಕಿ ನಂದಿನಿ ರಾಜ್ಭರ್ ಅವರನ್ನು ಭಾನುವಾರ ಅವರ ಮನೆಯಲ್ಲೇ ಕೊಲೆ ನಡೆದಿದೆ.ಕೊಲೆ ಪ್ರಕರಣದಲ್ಲಿ ಪೊಲೀಸರು ಐವರನ್ನು ಆರೋಪಿಗಳೆಂದು ಹೆಸರಿಸಿದ್ದು, ಈ ಪೈಕಿ ಮೂವರು – ಆನಂದ್ ಯಾದವ್, ಧ್ರುವ ಚಂದ್ರ ಯಾದವ್ ಮತ್ತು ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ.
‘ಹಳೆಯ ತಂತ್ರ, ಎಂದಿಗೂ ರಹಸ್ಯವಲ್ಲ’: ಬಿಜೆಪಿ ಸಂಸದರ ‘ಸಂವಿಧಾನ ಬದಲಾವಣೆ’ ಹೇಳಿಕೆಗೆ ಚಿದಂಬರಂ ತಿರುಗೇಟು