Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಲಿಯಲ್ಲಿ 65 ಜನರನ್ನು ಹೊತ್ತ ದೋಣಿ ಮುಳುಗಿ 43 ಮಂದಿ ನಾಪತ್ತೆ , ನಾಲ್ವರು ಸಾವು

03/07/2025 7:42 AM

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

03/07/2025 7:40 AM

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಷ್ಟ ಕಾಲದಲ್ಲಿ’ ಕೇಂದ್ರ ಸರ್ಕಾರ ನಮ್ಮ ‘ಪಾಲಿನ ಹಣ’ ನಮಗೆ ನೀಡಲಿಲ್ಲ : ಡಿಸಿಎಂ ಡಿಕೆಶಿ ವಾಗ್ದಾಳಿ
KARNATAKA

‘ಕಷ್ಟ ಕಾಲದಲ್ಲಿ’ ಕೇಂದ್ರ ಸರ್ಕಾರ ನಮ್ಮ ‘ಪಾಲಿನ ಹಣ’ ನಮಗೆ ನೀಡಲಿಲ್ಲ : ಡಿಸಿಎಂ ಡಿಕೆಶಿ ವಾಗ್ದಾಳಿ

By kannadanewsnow0513/03/2024 2:42 PM

ಕಲಬುರ್ಗಿ : ಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ನಮ್ಮ ಪಾಲಿನ ಹಣ ನಮಗೆ ನೀಡಲಿಲ್ಲ ಅಲ್ಲದೆ ಕೇಂದ್ರದ ಬಳಿ ಅಕ್ಕಿ ಇದ್ದರೂ ಕೂಡ ನಮಗೆ ಪೂರಕ ಮಾಡಲಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕಲ್ಬುರ್ಗಿಯಲ್ಲಿ ಇಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದ್ದೇವೆ. ಚುನಾವಣೆಗೆ ಮುನ್ನ ಮನೆ ಮನೆಗೆ ಗ್ಯಾರಂಟಿ ಕಾರ್ಡ್ಗಳನ್ನು ನೀಡಿದ್ದೆವು. ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಯನ್ನು ಜಾರಿಗೆ ಮಾಡಿದ್ದೇವೆ.ಕೇಂದ್ರ ಸರ್ಕಾರದ ಬಳಿ ಅಕ್ಕಿ ಇದ್ದರು ರಾಜ್ಯಕ್ಕೆ ಪೂರೈಕೆ ಮಾಡಲಿಲ್ಲ ಎಂದು ಕೇಂದ್ರ ವಿರುದ್ಧ ಕಿಡಿ ಕಾರಿದರು.

ಶಕ್ತಿ ಯೋಜನೆಯಡಿ ಕೋಟ್ಯಾಂತರ ಮಹಿಳೆಯರು ಲಾಭ ಪಡೆದಿದ್ದಾರೆ.ಕಷ್ಟಕಾಲದಲ್ಲಿ ಕೇಂದ್ರ ಸರ್ಕಾರ ನಮ್ಮ ಪಾಲಿನ ಹಣ ನಮಗೆ ನೀಡಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಎಲ್ಲಾ ವರ್ಗದವರಿಗೆ ನ್ಯಾಯ ಒದಗಿಸಿದೆ ಎಂದು ಗ್ಯಾರೆಂಟಿ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

BREAKING : ವಿಧಾನಸಭೆಯಲ್ಲಿ ‘ವಿಶ್ವಾಸಮತ’ ಗೆದ್ದ ಹರಿಯಾಣ ನೂತನ ಸಿಎಂ ‘ನಯಾಬ್ ಸೈನಿ’

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದೂ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣ ಅನುಷ್ಠಾನಗೊಳಿಸಿ ಬಹಳ ಆತ್ಮವಿಶ್ವಾಸದಿಂದ ಇಲ್ಲಿಗೆ ಬಂದಿದ್ದೇನೆ. ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ. ಮಾರ್ಚ್ 10ಕ್ಕೆ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾಲ್ಕು ವರ್ಷ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ ಪ್ರಜಾಧ್ವನಿ ಪ್ರಾರಂಭಿಸಿದ ನಂತರ ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬಜೆಟ್ ನಲ್ಲಿ ಇದಕ್ಕಾಗಿ 52 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ.

ನಮ್ಮ ಗ್ಯಾರಂಟಿ ಯೋಜನೆಗಳನ್ನು ದೇಶದಲ್ಲಿ ಜನ ಮೆಚ್ಚಿದ್ದಾರೆ. ಬಿಜೆಪಿಯವರು ಒಪ್ಪಿ ಮೋದಿ ಗ್ಯಾರಂಟಿ ಯೋಜನೆ ಎಂದು ಪ್ರಚಾರ ಪಡೆಯುತ್ತಿದ್ದಾರೆ.ಮತದಾರರು ಹಾಗೂ ಕಾಂಗ್ರೆಸ್ ನಾಯಕರು ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದು, ನಾವು ನಾಯಕರು ನೆಪ ಮಾತ್ರ. ನಾವು ಪ್ರತಿ ತಾಲೂಕು, ಜಿಲ್ಲೆಗಳಲ್ಲಿ 15 ಕಾರ್ಯಕರ್ತರನ್ನು ಒಳಗೊಂಡಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಲಾಗಿದೆ.

ಯಾವುದೇ ಕಾರಣಕ್ಕೂ ನಾನು ‘ಪಕ್ಷೇತರ’ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ : ಪ್ರತಾಪ್ ಸಿಂಹ ಸ್ಪಷ್ಟನೆ

ತಾಲೂಕು ಮಟ್ಟದ ಸಮಿತಿ ಅಧ್ಯಕ್ಷರಿಗೆ ತಾಲೂಕು ಮಟ್ಟದಲ್ಲಿ ಕಚೇರಿ ಹಾಗೂ 25 ಸಾವಿರ ಗೌರವಧನ, ಜಿಲ್ಲಾ ಸಮಿತಿ ಅಧ್ಯಕ್ಷರಿಗೆ ಜಿಲ್ಲಾ ಮಟ್ಟದಲ್ಲಿ ಕಚೇರಿ ಹಾಗೂ 50 ಸಾವಿರ ಗೌರವಧನ ನೀಡಲಾಗುವುದು. ರಾಜ್ಯ ಮಟ್ಟದ ಸಮಿತಿಯಲ್ಲಿ ಓರ್ವ ಅಧ್ಯಕ್ಷರು ಹಾಗೂ ಐವರು ಉಪಾಧ್ಯಕ್ಷರನ್ನು ಒಳಗೊಂಡಿದೆ. ಅಧ್ಯಕ್ಷರಿಗೆ ಸಚಿವ ಸಂಪುಟ ಸ್ಥಾನಮಾನ ನೀಡಲಾಗುವುದು. ಆಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಇದರ ಜತೆಗೆ ಕಾರ್ಯಕರ್ತರುಗಳಿಗೆ ಸ್ಥಳೀಯ ಮಟ್ಟದ ಆಸ್ಪತ್ರೆ, ಶಾಲಾ ಹಾಗೂ ಇತರೆ ಸಮಿತಿ ಸಮಿತಿಯಲ್ಲಿ ಸ್ಥಾನಮಾನ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇವರು ಸಾರ್ವಜನಿಕರ ಸೇವೆ ಮಾಡಬೇಕು, ಅವರಿಗೆ ಗೌರವ ನೀಡಲು ತೀರ್ಮಾನಿಸಿದ್ದೇವೆ.

ನಾವು ಚುನಾವಣೆಗಾಗಿ ಗ್ಯಾರಂಟಿ ಯೋಜನೆ ನೀಡುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕಿನಲ್ಲಿ ನೆರವು ನೀಡಲು ಜಾರಿ ಮಾಡಿದ್ದೇವೆ.ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ ಕಾರ್ಮಿಕರಿಂದ ಬಸ್ ಪ್ರಯಾಣಕ್ಕೆ ಮೂರು ಪಟ್ಟು ಹಣ ಕೀಳಲು ಮುಂದಾದರು. ಆಗ ನಾನು ಸಿದ್ದರಾಮಯ್ಯ ಅವರು ಚರ್ಚೆ ಮಾಡಿ ಸರ್ಕಾರಕ್ಕೆ 1 ಕೋಟಿ ರೂಪಾಯಿ ಚೆಕ್ ನೀಡಿ ಆ ಕಾರ್ಮಿಕರನ್ನು ಉಚಿತವಾಗಿ ಅವರ ಊರಿಗೆ ತಲುಪಿಸಲು ಆಗ್ರಹಿಸಿದೆವು. ನಂತರ ಸರ್ಕಾರ ವಿಧಿ ಇಲ್ಲದೆ ಒಂದು ವಾರ ಉಚಿತ ಬಸ್ ಪ್ರಯಾಣ ಕಲ್ಪಿಸಿತು. ಕೇಂದ್ರ ಸರ್ಕಾರ ಉಚಿತ ರೈಲು ಸೇವೆ ಆರಂಭಿಸಿತು.

ಈ ರೀತಿ ಜನರ ಕಷ್ಟಗಳಿಗೆ ಸ್ಪಂದಿಸುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ. ನಮಗೆ ಮತ ಮುಖ್ಯ ಅಲ್ಲ. ನಾವು ಬ್ಯಾಂಕುಗಳ ರಾಷ್ಟ್ರೀಕರಣ, ಅನ್ನಭಾಗ್ಯ, ಉಳುವವನಿಗೆ ಭೂಮಿ, ಬಡವರಿಗೆ ಮನೆ, ನಿವೇಶನ ನೀಡಿದ್ದೇವೆ. ನಮ್ಮ ಯೋಜನೆಗಳು ಯಾವುದೇ ಒಂದು ಜಾತಿ, ಧರ್ಮ, ಪಕ್ಷಕ್ಕೆ ಸೀಮಿತವಾಗಿಲ್ಲ. ಎಲ್ಲಾ ವರ್ಗದ ಜನರಿಗೆ ನೀಡಲಾಗುವುದು.

ಅಭಿವೃದ್ಧಿಗೆ 1.26 ಲಕ್ಷ ಕೋಟಿ ಅನುದಾನ:

ಇನ್ನು ನಮ್ಮ ಸರ್ಕಾರ ಮಂಡಿಸಿರುವ 3.74 ಲಕ್ಷ ಕೋಟಿ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊರತಾಗಿ ಅಭಿವೃದ್ಧಿ ಯೋಜನೆಗಳಿಗೆ 1.26 ಲಕ್ಷ ಕೋಟಿ ಅನುದಾನವನ್ನು ಮೀಸಲಿಡಲಾಗಿದೆ.ಕನ್ನಡದ ಸ್ವಾಭಿಮಾನ ಹಾಗೂ ಗೌರವ ಉಳಿಸಲು ಎಲ್ಲಾ ವ್ಯಾಪಾರ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡ ಭಾಷೆ ಬಳಕೆ ಮಾಡುವ ಬಗ್ಗೆ ಪ್ರತ್ಯೇಕ ಕಾನೂನು ಜಾರಿಗೆ ತರಲಾಗಿದೆ.

ನೀರಿನ ಅಭಾವ ನೀಗಿಸುತ್ತೇವೆ

ಬರ ಪರಿಸ್ಥಿತಿಯಲ್ಲಿ ಬೆಂಗಳೂರಿನಲ್ಲಿ 7 ಸಾವಿರ ಕೊಳವೆ ಬಾವಿಗಳು ಬತ್ತಿದ್ದು ಇದರಿಂದ ಕೆಲವು ಕಡೆ ನೀರಿನ ಅಭಾವ ಎದುರಾಗಿದೆ. ಉಳಿದ ಕಡೆ ಕಾವೇರಿ ನೀರನ್ನು ಸಮರ್ಪಕವಾಗಿ ಪೂರೈಸಲಾಗುತ್ತಿದೆ.ರಾಜ್ಯದ ಇತರೆ ಭಾಗಗಳಲ್ಲಿ ನೀರಿನ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಅವರಿಗೆ ಹಣ ನೀಡಲಾಗಿದೆ. ನೀರಿನ ಅಭಾವದ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಇದ್ದು, ಮುಖ್ಯಮಂತ್ರಿಗಳು ಹಾಗೂ ಸಚಿವರು ಸಭೆ ಮಾಡಿ ಚರ್ಚಿಸುತ್ತಿದ್ದಾರೆ.ಮುಂದಿನ ಎರಡು ಮೂರು ತಿಂಗಳು ನೀರಿನ ಅಭಾವ ಸೃಷ್ಟಿಯಾಗಿದ್ದು, ಎಲ್ಲೆಲ್ಲಿಂದ ನೀರನ್ನು ಪೂರೈಸಬಹುದು ಎಂದು ಗುರುತಿಸಿ ಟ್ಯಾಂಕರ್ ಗಳ ಮೂಲಕ ಪೂರೈಸಲಾಗುವುದು.

ಮೌನದಿಂದಲೇ ಅನಂತ ಕುಮಾರ್ ಹೆಗಡೆ ಮಾತು ಒಪ್ಪಿದ ಬಿಜೆಪಿ ಹಾಗೂ ಪ್ರಧಾನಿ:

ಬಿಜೆಪಿ ಸಂಸದರೊಬ್ಬರು ನಾವು ಸಂವಿಧಾನ ಬದಲಾವಣೆ ಮಾಡಬೇಕಾದರೆ ನಮಗೆ 400 ಕ್ಷೇತ್ರಗಳನ್ನು ಗೆಲ್ಲಿಸಿ ಎಂಬ ಹೇಳಿಕೆ ಖಂಡನೀಯ. ಮೌನಂ ಸಮ್ಮತಿ ಲಕ್ಷಣಂ ಎಂಬ ಮಾತಿನಂತೆ ಸಂಸದರ ಹೇಳಿಕೆ ಬಗ್ಗೆ ಪ್ರಧಾನ ಮಂತ್ರಿಗಳು, ಬಿಜೆಪಿ ಹೈಕಮಾಂಡ್ ನಾಯಕರ ಮೌನದಿಂದ ಇದನ್ನು ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ.

ಸಂಸದರ ಹೇಳಿಕೆಯನ್ನು ಖಂಡಿಸುವುದಾಗಿದ್ದರೆ ಬಿಜೆಪಿ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕಿತ್ತು. ನಮ್ಮ ಪಕ್ಷ ಆಗಿದ್ದರೆ ಇಷ್ಟು ಹೊತ್ತಿಗೆ ಇಂತಹ ಹೇಳಿಕೆ ಕೊಟ್ಟವರನ್ನು ಉಚ್ಚಾಟಿಸಲಾಗುತ್ತಿತ್ತು.ಬಿಜೆಪಿಯ ಭಾವನೆ ಹಾಗೂ ಆಂತರಿಕ ಧ್ವನಿಯನ್ನು ಸಂಸದರು ಬಹಿರಂಗವಾಗಿ ಹೇಳಿದ್ದಾರೆ. ಇದರ ವಿರುದ್ಧ ಹೋರಾಟ ಮಾಡಬೇಕು, ನಮ್ಮ ಸಂವಿಧಾನ ರಕ್ಷಣೆ ಮಾಡಬೇಕು ಎಂದು ತಿಳಿಸಲಾಗಿದೆ.

20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ:

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ಕೇಳಿದಾಗ, “ನಾವು 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿ ಪಕ್ಷದಿಂದ 10ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡುತ್ತಿದ್ದಾರೆ. ಕಾರಣ ಆ ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಇದೆ. ಕೆಲಸ ಮಾಡಿಲ್ಲ, ಜನರಿಗೆ ಸ್ಪಂದನೆ ನೀಡುತ್ತಿಲ್ಲ ಎಂದು ಜನ ಬೇಸರವಾಗಿದ್ದಾರೆ ಎಂದು ಬೇರೆಯವರನ್ನು ನಿಲ್ಲಿಸುತ್ತಿದ್ದಾರೆ” ಎಂದು ತಿಳಿಸಿದರು.

ಮಂಜುನಾಥ್ ಅವರ ಬಗ್ಗೆ ಗೌರವವಿದೆ, ಅವರ ಸ್ಪರ್ಧೆ ಸ್ವಾಗತಿಸುತ್ತೇವೆ:

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಕೇಳಿದಾಗ, “ನನಗೆ ಡಾ. ಮಂಜುನಾಥ್, ಕುಮಾರಸ್ವಾಮಿ, ದೇವೇಗೌಡರ ಮೇಲೆ ಗೌರವವಿದೆ. ನಾವು ದೇವೇಗೌಡರ ವಿರುದ್ಧ ನಾನು ನಿಂತಿದ್ದೆ, ಒಬ್ಬ ಹೆಣ್ಣು ಮಗಳನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧೆ ಮಾಡಿ ಗೆದ್ದಿದ್ದೇನೆ, ಅವರ ಧರ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರ ವಿರುದ್ಧ ನನ್ನ ಸಹೋದರನನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ಮಂಜುನಾಥ್ ಅವರ ಅಧಿಕಾರ ಅವಧಿಯನ್ನು ನಮ್ಮ ಸರ್ಕಾರವೂ ವಿಸ್ತರಣೆ ಮಾಡಿಕೊಂಡು ಬಂದಿದೆ.

ನಮಗೆ ಅವರ ಮೇಲೆ ಯಾವುದೇ ಬೇಸರ ಇಲ್ಲ. ನಾವು ನೀತಿ ಮೇಲೆ ಚುನಾವಣೆ ಮಾಡುತ್ತೇವೆ. ಡಿ.ಕೆ ಸುರೇಶ್ ಸಂಸದನಾಗಿ ಕೆಲಸ ಮಾಡುವುದಕ್ಕಿಂತ ಪಂಚಾಯಿತಿ ಸದಸ್ಯನ ರೀತಿಯಲ್ಲಿ ಹಳ್ಳಿ ಹಳ್ಳಿಯಲ್ಲಿ ತಿರುಗಿ ಜನರ ಮಧ್ಯೆ ಕೆಲಸ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಯಾರೇ ನಿಂತರೂ ನಾವು ಸ್ವಾಗತಿಸುತ್ತೇವೆ. ಅವರ ಸಹೋದರಿ ಮಂಜುನಾಥ್ ಅವರ ಸ್ಪರ್ಧೆಗೆ ಒಲವಿಲ್ಲದೆ ಕಣ್ಣೀರು ಹಾಕಿದ್ದಾರೆ ಎಂದು ಕುಮಾರಸ್ವಾಮಿ ಅವರೇ ಹೇಳಿಕೆ ನೀಡಿದ್ದಾರೆ. ಅವರ ಮನೆ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಕುಮಾರಸ್ವಾಮಿ ಅವರ ಮಗ ಹಾಗೂ ತಂದೆ ಇಬ್ಬರ ಚುನಾವಣೆಯನ್ನು ನೋಡಿದ್ದೇವೆ” ಎಂದು ತಿಳಿಸಿದರು.

ಮಾ.16ರಂದು ಪ್ರಧಾನಿಮಂತ್ರಿ ನರೇಂದ್ರ ಮೋದಿ ‘ರಾಜ್ಯಕ್ಕೆ’ ಭೇಟಿ : ಕಲಬುರ್ಗಿ, ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿ

ನಾನು, ಸಿಎಂ ಚರ್ಚೆ ಮಾಡಿ ರಾಜ್ಯ ಪ್ರವಾಸ:

ಗ್ಯಾರಂಟಿ ಸಮಾವೇಶಕ್ಕೆ ಮುಖ್ಯಮಂತ್ರಿಗಳು ಬಾರದೆ ಇರುವ ಬಗ್ಗೆ ಕೇಳಿದಾಗ, “ಸದ್ಯದಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿ ಆಗಲಿದ್ದು, ನಾನು ಸಿದ್ದರಾಮಯ್ಯ ಅವರು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ, ಇಬ್ಬರೂ ಬೇರೆ ಬೇರೆ ಕಡೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರು ನಿನ್ನೆ ಚಾಮರಾಜನಗರದಲ್ಲಿ ಕಾರ್ಯಕ್ರಮ ಮಾಡಿದ್ದರು. ನಾನು ಕಲಬುರ್ಗಿಗೆ ಬಂದಿದ್ದೇನೆ.

ಇನ್ನು ಜತೆಯಾಗಿ ಮಂಡ್ಯ, ದೊಡ್ಡಬಳ್ಳಾಪುರ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ಇಂದು ಉಡುಪಿಗೆ ತೆರಳಿ, ಕೋಲಾರಕ್ಕೆ ಹೋಗಲಿದ್ದಾರೆ. ನಾಳೆ ಕೊನೆಯ ಸಚಿವ ಸಂಪುಟ ಸಭೆ ಇರುವ ಕಾರಣ ಅವರು ರಾಯಚೂರಿನ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಕಲಬುರ್ಗಿ ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರ. ಅವರನ್ನು ಕರೆದುಕೊಂಡು ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಅವರ ಹೆಸರಲ್ಲಿ ಅಷ್ಟಪಥ ಕಾರಿಡಾರ್ ಉದ್ಧಾಟನೆ ಮಾಡಲಿದ್ದೇವೆ. ಹೀಗೆ ನಾವು ಕಾರ್ಯಕ್ರಮಗಳನ್ನು ಹಂಚಿಕೊಂಡು ರಾಜ್ಯ ಪ್ರವಾಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಹಾಲಿ ಸಂಸದರು ಶಾಸಕರು ಪಕ್ಷ ಸೇರಲು ಬಯಸಿದ್ದಾರೆ:

ಬೇರೆ ಪಕ್ಷದ ನಾಯಕರಿಗೆ ಆಹ್ವಾನ ನೀಡಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಹಳ ನಾಯಕರು ಮುಂದಾಗಿದ್ದಾರೆ. ನಿನ್ನೆ ಕೂಡ ಬಿಜೆಪಿ ಹಾಗೂ ಜೆಡಿಎಸ್ ನಿಂದ ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇನ್ನು ಮೂವರು ಹಾಲಿ ಸಂಸದರು, ಅನೇಕ ಹಾಲಿ ಶಾಸಕರು ಪಕ್ಷಕ್ಕೆ ಸೇರಲು ಮುಂದಾಗಿದ್ದು ನಾನು ಅವರ ಹೆಸರು ಬಹಿರಂಗಪಡಿಸಲು ಬಯಸುವುದಿಲ್ಲ” ಎಂದು ತಿಳಿಸಿದರು.

ಜೇವರ್ಗಿ ಭಾಗದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಾಯ ಮಾಡಿ ಭೀಮಾ ನದಿ ನೀರು ಬಿಡುವಂತೆ ಮಾಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರ ಈಗಾಗಲೇ ಪತ್ರ ಬರೆದಿದ್ದು, ತೆಲಂಗಾಣದವರೂ ಕೇಳುತ್ತಿದ್ದಾರೆ. ಇಲ್ಲಿ ಸ್ವಲ್ಪ ಪ್ರಮಾಣದ ನೀರು ಮಾತ್ರ ಇದೆ. ನಮ್ಮ ರಾಜ್ಯ ಕಾಪಾಡಿಕೊಂಡು ಬೇರೆ ರಾಜ್ಯಕ್ಕೆ ಸಹಕಾರ ನೀಡಲು ನಾವು ಸಿದ್ಧವಿದ್ದೇವೆ. ಬೇರೆ ರಾಜ್ಯಗಳು ನಮಗೆ ಸಹಕಾರ ನೀಡಬೇಕು” ಎಂದು ತಿಳಿಸಿದರು.

'ಕಷ್ಟ ಕಾಲದಲ್ಲಿ' ಕೇಂದ್ರ ಸರ್ಕಾರ ನಮ್ಮ 'ಪಾಲಿನ ಹಣ' ನಮಗೆ ನೀಡಲಿಲ್ಲ : ಡಿಸಿಎಂ ಡಿಕೆಶಿ ವಾಗ್ದಾಳಿ Centre didn't give us our 'share of money' in 'difficult times': DK Shivakumar
Share. Facebook Twitter LinkedIn WhatsApp Email

Related Posts

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

03/07/2025 7:40 AM1 Min Read

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM3 Mins Read

BIG NEWS : ಜುಲೈ 5ರಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

03/07/2025 7:27 AM1 Min Read
Recent News

ಬಾಲಿಯಲ್ಲಿ 65 ಜನರನ್ನು ಹೊತ್ತ ದೋಣಿ ಮುಳುಗಿ 43 ಮಂದಿ ನಾಪತ್ತೆ , ನಾಲ್ವರು ಸಾವು

03/07/2025 7:42 AM

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

03/07/2025 7:40 AM

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM

BIG NEWS : ಜುಲೈ 5ರಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

03/07/2025 7:27 AM
State News
KARNATAKA

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

By kannadanewsnow5703/07/2025 7:40 AM KARNATAKA 1 Min Read

ತುಮಕೂರು : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಕೊಡುವ ಪೋಷಕರೇ ಎಚ್ಚರ,ಅಪ್ರಾಪ್ತ ಮಗನಿಗೆ ವಾಹನವನ್ನು ಚಲಾಯಿಸಲು ನೀಡಿದ್ದಕ್ಕೆ ತಂದೆಗೆ ತುಮಕೂರು…

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM

BIG NEWS : ಜುಲೈ 5ರಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

03/07/2025 7:27 AM

BIG NEWS : ರಾಜ್ಯದ ಎಲ್ಲಾ ಶಾಲಾಗಳಲ್ಲಿ `ಪ್ರತಿಭಾಕಾರಂಜಿ/ಕಲೋತ್ಸವ’ ಕಾರ್ಯಕ್ರಮ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

03/07/2025 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.