Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪತ್ರಿಕಾಗೋಷ್ಠಿಯಲ್ಲಿ ಇಂಗ್ಲಿಷ್ ಮಾತನಾಡಲು ಪರದಾಡಿದ ಪಾಕ್ ವಾಯುಪಡೆ ಅಧಿಕಾರಿ : ವಿಡಿಯೋ ವೈರಲ್ | WATCH VIDEO

13/05/2025 9:35 AM

BREAKING : ಪಂಜಾಬ್ ನಲ್ಲಿ ಘೋರ ಘಟನೆ : ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು, 6 ಜನರ ಸ್ಥಿತಿ ಗಂಭೀರ | spurious liquor

13/05/2025 9:24 AM

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

13/05/2025 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ 2024: ‘ಸ್ಟಾರ್ ಕ್ಯಾಂಪೇನರ್’ ಈ ನಿಯಮಗಳ ಪಾಲನೆ ಕಡ್ಡಾಯ- ಚುನಾವಣಾ ಆಯೋಗ
INDIA

ಲೋಕಸಭಾ ಚುನಾವಣೆ 2024: ‘ಸ್ಟಾರ್ ಕ್ಯಾಂಪೇನರ್’ ಈ ನಿಯಮಗಳ ಪಾಲನೆ ಕಡ್ಡಾಯ- ಚುನಾವಣಾ ಆಯೋಗ

By kannadanewsnow0916/03/2024 4:29 PM

ನವದೆಹಲಿ : ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಏಪ್ರಿಲ್ 19ರಿಂದ ಲೋಕಸಭಾ ಚುನಾವಣೆ ಆರಂಭವಾಗಲಿದೆ. ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಈ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸ್ಟಾರ್ ಕ್ಯಾಂಪೇನರ್ ಗಳಿಗೆ ಮಹತ್ವದ ಎಚ್ಚರಿಕೆಯನ್ನು ಚುನಾವಣಾ ಆಯೋಗ ನೀಡಿದೆ. ಅವುಗಳನ್ನು ಪಾಲಿಸುವಂತೆಯೂ ಖಡಕ್ ಸೂಚನೆ ನೀಡಿದೆ. ಆ ಬಗ್ಗೆ ಮುಂದೆ ಓದಿ.

ದೆಹಲಿಯ ವಿಜ್ಞಾನ ಭವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯ ಚುನಾವಣಾ ಆಯುಗ್ತ ರಾಜೀವ್ ಕುಮಾರ್ ಅವರು, ನಾವು ಲೋಕಸಭಾ ಚುನಾವಣೆ ಸಂಪೂರ್ಣ ತಯಾರಿ ನಡೆಸಲಾಗಿದೆ. ಚುನಾವಣೆ ಒಂದು ಯುದ್ಧವಿದ್ದಂತೆ. ಜಮ್ಮು ಕಾಶ್ಮೀರ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಬಾಕಿಯಿದೆ. 800 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಲೋಕಸಭಾ ಚುನಾವಣೆಗಾಗಿ ಚರ್ಚೆ ನಡೆಸಲಾಗಿದೆ. ಪೊಲೀಸ್, ರಾಜಕೀಯ ಪಕ್ಷಗಳು ಸೇರಿದಂತೆ ಎಲ್ಲರೊಂದಿಗೂ ಸಮೀಕ್ಷೆ ನಡೆಸಿ, ಚರ್ಚಿಸಲಾಗಿದೆ ಎಂದರು.

ನಾವು ಸ್ವತಂತ್ರ್ಯ, ನಿಷ್ಪಕ್ಷ ಪಾತ ಚುನಾವಣೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಭೌಗೋಳಿಕ, ಸಾಂಸ್ಕೃತಿಕ ವೈವಿದ್ಯತೆ ಹೊಂದಿರುವಂತ ಭಾರತದಲ್ಲಿ ಚುನಾವಣೆ ಒಂದು ಸವಾಲಿನ ಸಂಗತಿಯಾಗಿದೆ. 97 ಕೋಟಿ ಜನರು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುತ್ತಿದ್ದಾರೆ. 10.5 ಲಕ್ಷ ಪೋಲಿಂಗ್ ಭೂತ್ ಗಳನ್ನು ನಿರ್ಮಿಸಲಾಗುತ್ತಿದೆ. 1.5 ಕೋಟಿ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದರು.

ಕಳೆದ ಕೆಲ ದಿನಗಳ ಹಿಂದೆ 11 ರಾಜ್ಯಗಳ ಚುನಾವಣೆ ನಡೆಸಾಯಿತು. ಶಾಂತಿಯುತವಾಗಿ ಚುನಾವಣೆ ನಡೆಸಲಾಯಿತು. ಈ ಬಾರಿಯ ಲೋಕಸಭಾ ಚುನಾವಣೆಯನ್ನು ಸಕಲ ಸಿದ್ಧತೆಯೊಂದಿಗೆ ನಡೆಸೋದಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ಎಲ್ಲಾ ಸಿದ್ಧತೆ ಮುಕ್ತಾಯಗೊಂಡಿದೆ ಎಂದರು.

7 ಹಂತವಾರು ವಿವರ

  • ಮೊದಲ ಹಂತದ ಮತದಾನ – ಏಪ್ರಿಲ್ 19
  • ಎರಡನೇ ಹಂತದ ಮತದಾನ – ಏಪ್ರಿಲ್ 26
  • 3ನೇ ಹಂತದ ಮತದಾನ- ಮೇ 7
  • ನಾಲ್ಕನೇ ಹಂತದ ಮತದಾನ- ಮೇ 13
  • 5ನೇ ಹಂತದ ಮತದಾನ- ಮೇ 20
  • 6ನೇ ಹಂತದ ಮತದಾನ- ಮೇ 27
  • 7ನೇ ಹಂತದ ಮತದಾನ- ಜೂನ್ 1

2024ರ ಲೋಕಸಭಾ ಚುನಾವಣೆ ದೇಶಾದ್ಯಂತ ಏಳು ಹಂತಗಳಲ್ಲಿ ನಡೆಯಲಿದೆ. ವಿಶೇಷವೆಂದರೆ, ಪ್ರಸ್ತುತ ಲೋಕಸಭೆಯ ಅವಧಿ ಜೂನ್ 16 ರಂದು ಕೊನೆಗೊಳ್ಳುತ್ತದೆ ಮತ್ತು ಅದಕ್ಕೂ ಮೊದಲು ಹೊಸ ಸದನವನ್ನು ರಚಿಸಬೇಕಾಗಿದೆ.

ದೇಶದಲ್ಲಿ 49.7 ಕೋಟಿ ಪುರುಷರು, 47.1 ಕೋಟಿ ಮಹಿಳೆಯರು, 1.8 ಕೋಟಿ ಮೊದಲ ಬಾರಿಗೆ ಮತಚಲಾಯಿಸುತ್ತಿರುವವರು, 88.4 ಲಕ್ಷ ಅಂಗವಿಕಲರು, 19.1 ಲಕ್ಷ ಸೇವಾ ನಿರತ ಮತದಾರರು, 82 ಲಕ್ಷ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು, 48000 ಲಿಂಕತ್ವ ಅಲ್ಪ ಸಂಖ್ಯಾತರು, 19.74 ಕೋಟಿ ಯುವ ಮತದಾರರು ಇದ್ದಾರೆ ಎಂಬುದಾಗಿ ತಿಳಿಸಿದರು.

1.8 ಕೋಟಿ ಮೊದಲ ಬಾರಿಗೆ 18-19 ವರ್ಷದ ಯುವಕರು ಮತ ಚಲಾಯಿಸುತ್ತಿದ್ದಾರೆ. 19.74 ಕೋಟಿ ಮತದಾರರು 20-29 ವರ್ಷದೊಳಗಿನವರು ಆಗಿದ್ದಾರೆ. 13.4 ಲಕ್ಷ ಮತದಾರರು 17 ವರ್ಷಕ್ಕೆ ಮತಚಲಾಯಿಸಲು ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮತಕೇಂದ್ರದ ಬಳಿಯಲ್ಲಿ ಕುಡಿಯುವ ನೀರು, ಶೌಚಾಲಯ, ವೀಲ್ ಚೇರ್, ಮಾಹಿತಿ ಕೇಂದ್ರ ರಚಿಸಲಾಗಿದೆ. ಮತದಾರರಿಗೆ ಮತದಾನ ಮಾಡೋದಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದರು.

ಮೊಬೈಲ್ ನಲ್ಲಿಯೇ ಎಲ್ಲಾ ಮಾಹಿತಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ನೌ ಯುವರ್ ಕ್ಯಾಂಡಿಡೇಟ್ ಅಪ್ಲಿಕೇಷನ್ ನಲ್ಲಿ ಲೋಕಸಭಾ ಕ್ಷೇತ್ರವಾರು ಮಾಹಿತಿ ಲಭ್ಯವಿದೆ. ಮತದಾರರು ಯಾವ ಬೂತ್ ನಲ್ಲಿ ಮತ ಚಲಾಯಿಸೋದಕ್ಕೆ ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಕೂಡ ಲಭ್ಯವಾಗಲಿದೆ. ಸುವಿಧ ಪೋರ್ಟಲ್ ನಲ್ಲಿ ಲೋಕಸಭಾ ಚುನಾವಣೆಯ ಕಣದಲ್ಲಿರುವಂತ ಅಭ್ಯರ್ಥಿಗಳ ಮಾಹಿತಿಯನ್ನು ನೀಡಲಾಗಿದೆ. ಅದನ್ನು ಮತದಾರರು ನೋಡಬಹುದಾಗಿದೆ ಎಂದರು.

ನಮ್ಮ ಎದುರು ಮೂರು ಸವಾಲುಗಳಿದ್ದಾವೆ. ಮಿಸ್ ಲೀಡಿಂಗ್, ಮಿಸ್ ಇನ್ಫರ್ಮೇಷನ್, ಹಣ, ವಯೋಲೇನ್ಸ್ ಗಳನ್ನು ಹೇಗೆ ತಡೆಗಟ್ಟ ಬೇಕು ಎನ್ನುವ ಬಗ್ಗೆ ಕ್ರಮವಹಿಸಲಾಗುತ್ತಿದೆ. ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಲೋಕಸಭಾ ಚುನಾವಣೆ ನಡೆಸೋದಾಗಿ ತಿಳಿಸಿದರು.

ಚುನಾವಣಾ ಅಕ್ರಮ ತಡೆಯಲು ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಲಾಗುತ್ತದೆ. ಸಿಆರ್ ಪಿಎಫ್ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಕ ಮಾಡಲಾಗುತ್ತದೆ. ಸೂಕ್ಷ್ಮ ಮತಗಟ್ಟೆಯ ಮಾಹಿತಿಯನ್ನು ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಪ್ರತಿ ರಾಜ್ಯದಲ್ಲೂ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗುತ್ತಿದೆ. ಡ್ರೋನ್ ಮೂಲಕ ಕಣ್ಗಾವಲು ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.

ಅಕ್ರಮ ಹಣ ವರ್ಗಾವಣೆ ತಡೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರತಿ ಜಿಲ್ಲೆಯಲ್ಲೂ ನಿಗಾ ವಹಿಸಲಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಮತದಾರರನ್ನು ಸೆಳೆಯೋದಕ್ಕೆ ನೀಡಲಾಗುವಂತ ಎಲ್ಲಾ ವಸ್ತುಗಳ ಬಗ್ಗೆಯೂ ಹದ್ದಿನ ಕಣ್ಣನಿಡಲಿದ್ದಾರೆ. ಎಲ್ಲಾ ವಿದದ ಪೊಲೀಸ್ ಅಧಿಕಾರಿಗಳು ಚುನಾವಣಾ ಹಣ ವರ್ಗಾವಣೆಯ ಅಕ್ರಮ ತಡೆಗೆ ಕ್ರಮವಹಿಸಲಿದ್ದಾರೆ ಎಂದು ಹೇಳಿದರು.

ಬ್ಯಾಂಕ್ ಗಳಿಗೂ ಅನುಮಾನಾಸ್ಪದ ಹಣ ವರ್ಗಾವಣೆಯ ಬಗ್ಗೆ ದಿನ ನಿತ್ಯ ಮಾಹಿತಿ ನೀಡಲಿದ್ದಾವೆ. ಆ ಮಾಹಿತಿಯನ್ನು ಆಧರಿಸಿ ಅಕ್ರಮ ಹಣ ವರ್ಗಾವಣೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತದೆ. ಏರ್ಪೋರ್ಟ್, ರೈಲು ನಿಲ್ದಾಣ, ಬಸ್ ನಿಲ್ದಾಣ, ರಸ್ತೆ ಮಾರ್ಗದಲ್ಲಿ ಹಣ ಸಾಗಾಟದ ಬಗ್ಗೆ ಹದ್ದಿನ ಕಣ್ಣಿಡಲಾಗುತ್ತದೆ ಎಂದರು.

ಸಾಮಾಜಿಕ ಜಾಲತಾಣಗಳ ಬಗ್ಗೆಯೂ ಚುನಾವಣಾ ಆಯೋಗವು ಹದ್ದಿನ ಕಣ್ಣಿರಿಸಲಾಗಿದೆ. ರಾಜಕೀಯ ಪಕ್ಷಗಳು ಸೋಷಿಯಲ್ ಮೀಡಿಯಾವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಳ್ಳೋದಕ್ಕೆ ಸೂಚಿಸಲಾಗಿದೆ. ಫೇಕ್ ನ್ಯೂಸ್ ಗಳ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಒಂದು ವೇಳೆ ಮಿಸ್ ಲೀಡಿಂಗ್ ಮಾಹಿತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದೇ ಆದ್ರೇ ಐಟಿ ಕಾಯ್ದೆ ಸೆಕ್ಷನ್ 79(3) (ಬಿ) ಅಡಿಯಲ್ಲಿ ಆ ಪೋಸ್ಟ್ ಗಳನ್ನು ಟೇಕ್ ಡೌನ್ ಮಾಡಲಾಗುತ್ತದೆ. ಇದಕ್ಕಾಗಿ ಅಧಿಕಾರಿಗಳನ್ನು ಕೂಡ ನೇಮಕ ಮಾಡಲಾಗುತ್ತಿದೆ ಎಂದರು.

ರಾಜಕೀಯ ನಾಯಕರು ಚುನಾವಣಾ ಪ್ರಚಾರದ ವೇಳೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡುವಂತಿಲ್ಲ. ಸ್ಟಾರ್ ಕ್ಯಾಂಪೇನರುಗಳಿಗೆ ಚುನಾವಣಾ ಪ್ರಚಾರವನ್ನು ಹೇಗೆ ನಡೆಸಬೇಕು ಎನ್ನುವ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಮತದಾರರನ್ನು ಪ್ರಚೋದಿಸುವಂತಿಲ್ಲ. ದ್ವೇಷ ಭಾಷಣಕ್ಕೆ ಕಡಿವಾಣ ಹಾಕಲಾಗುತ್ತಿದೆ. ರಾಜಕೀಯ ಪಕ್ಷಗಳ ಚುನಾವಣಾ ಜಾಹೀರಾತುಗಳ ಬಗ್ಗೆಯೂ ಕಣ್ಗಾವಲು ಇರಿಸಲಾಗಿದೆ. 2100 ವೀಕ್ಷಕರನ್ನು ನೇಮಕ ಮಾಡಲಾಗುತ್ತಿದೆ ಎಂದರು.

ಕರ್ನಾಟಕದ ಸುರಪುರ ವಿಧಾನಸಭಾ ಚುನಾವಣೆ ನಡೆಸಲಾಗುತ್ತಿದೆ. ಇದಲ್ಲದೇ ಬಿಹಾರ್, ಗುಜರಾತ್, ಹರಿಯಾಣ, ಜಾರ್ಖಂಡ್, ಮಹಾರಾಷ್ಟ್ರ, ತಿಪುರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ತೆಲಂಗಾಣ, ಹಿಮಾಚಲ ಪ್ರದೇಶ, ರಾಜಸ್ಥಾನ ವಿಧಾನಸಭಾಗೆ ಚುನಾವಣೆ ನಡೆಸಲಾಗುತ್ತಿದೆ ಎಂದರು.

543 ಲೋಕಸಭಾ ಕ್ಷೇತ್ರಗಳಿಗೆ 16 ಜೂನ್ 2024ರಂದು ಅವಧಿ ಮುಕ್ತಾಯಗೊಳ್ಳಲಿದೆ. 7 ಹಂತಗಳಲ್ಲಿ ಕಳೆದ ಬಾರಿ ಲೋಕಸಭಾ ಚುನಾವಣೆ ನಡೆದಂತೆ ಚುನಾವಣೆ ನಡೆಯಲಿದೆ ಎಂದರು.

7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಮೊದಲ ಹಂತಕ್ಕೆ ಏಪ್ರಿಲ್.19 ಮತದಾನ ನಡೆದ್ರೇ, ಏಪ್ರಿಲ್ 26ರಂದು 2ನೇ ಹಂತಕ್ಕೆ, 3ನೇ ಹಂತಕ್ಕೆ ಮೇ.7ರಂದು, 4ನೇ ಹಂತಕ್ಕೆ ಮೇ.13ರಂದು, 5ನೇ ಹಂತಕ್ಕೆ ಮೇ.20ರಂದು, 6ನೇ ಹಂತಕ್ಕೆ 25 ಮೇ ಹಾಗೂ 7ನೇ ಹಂತದ ಲೋಕಸಭಾ ಚುನಾವಣೆಗೆ ಜೂನ್.1ರಂದು ಮತದಾನ ನಡೆಯಲಿದೆ. ಆ ಬಳಿಕ ಒಂದು ಹಂತದಲ್ಲಿ ಜೂನ್.4ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ ರೈತರೇ ಗಮನಿಸಿ : ʻಕೃಷಿ ಭಾಗ್ಯʼ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಲೋಕಸಭಾ ಚುನಾವಣೆ 2024: ಸ್ಟಾರ್ ಕ್ಯಾಂಪೇನರ್ ಈ ನಿಯಮಗಳ ಪಾಲನೆ ಕಡ್ಡಾಯ- ಚುನಾವಣಾ ಆಯೋಗ Lok Sabha Elections 2024: Star campaigners must follow these rules says Election Commission
Share. Facebook Twitter LinkedIn WhatsApp Email

Related Posts

BREAKING : ಪಂಜಾಬ್ ನಲ್ಲಿ ಘೋರ ಘಟನೆ : ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು, 6 ಜನರ ಸ್ಥಿತಿ ಗಂಭೀರ | spurious liquor

13/05/2025 9:24 AM1 Min Read

BIG NEWS : Indigo, Air India ಪ್ರಯಾಣಿಕರೇ ಗಮನಿಸಿ : ಇಂದು ಈ ನಗರಗಳಿಗೆ ವಿಮಾನ ಸೇವೆ ರದ್ದು | Indigo Air India Flight Cancel

13/05/2025 9:14 AM1 Min Read

BREAKING: ಅಮೃತಸರದಲ್ಲಿ ಮದ್ಯ ಸೇವಿಸಿ 12 ಮಂದಿ ಸಾವು, ಐವರ ಸ್ಥಿತಿ ಗಂಭೀರ

13/05/2025 9:11 AM1 Min Read
Recent News

BIG NEWS : ಪತ್ರಿಕಾಗೋಷ್ಠಿಯಲ್ಲಿ ಇಂಗ್ಲಿಷ್ ಮಾತನಾಡಲು ಪರದಾಡಿದ ಪಾಕ್ ವಾಯುಪಡೆ ಅಧಿಕಾರಿ : ವಿಡಿಯೋ ವೈರಲ್ | WATCH VIDEO

13/05/2025 9:35 AM

BREAKING : ಪಂಜಾಬ್ ನಲ್ಲಿ ಘೋರ ಘಟನೆ : ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು, 6 ಜನರ ಸ್ಥಿತಿ ಗಂಭೀರ | spurious liquor

13/05/2025 9:24 AM

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

13/05/2025 9:18 AM

BIG NEWS : Indigo, Air India ಪ್ರಯಾಣಿಕರೇ ಗಮನಿಸಿ : ಇಂದು ಈ ನಗರಗಳಿಗೆ ವಿಮಾನ ಸೇವೆ ರದ್ದು | Indigo Air India Flight Cancel

13/05/2025 9:14 AM
State News
KARNATAKA

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

By kannadanewsnow5713/05/2025 9:18 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮೇ.16ರಂದು ಬೆಳಿಗ್ಗೆ 10 ರಿಂದ 2 ರವರೆಗೆ…

BIG NEWS : ರಾಜ್ಯದಲ್ಲಿ ‘ಬೋರ್ ವೆಲ್’ ಕೊರೆಸುವ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಈ ರೂಲ್ಸ್ ಪಾಲನೆ ಕಡ್ಡಾಯ.!

13/05/2025 9:05 AM

BIG NEWS: ರಾಜ್ಯದಲ್ಲಿ 2025- 26 ನೇ ಶೈಕ್ಷಣಿಕ ಸಾಲಿನಿಂದಲೇ `SEP’ ಜಾರಿ : ಸಚಿವ ಡಾ. ಎಂ.ಸಿ. ಸುಧಾಕರ್

13/05/2025 8:54 AM

BREAKING : ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ವೈರಲ್ : ಬೆಂಗಳೂರಿನಲ್ಲಿ ಆರೋಪಿ ಅರೆಸ್ಟ್

13/05/2025 8:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.