Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಹುಲ್ ಗಾಂಧಿಗೆ ಬಿಜೆಪಿ ಸವಾಲು

09/08/2025 10:06 PM

BREAKING : ಬಾಹ್ಯಾಕಾಶದಲ್ಲಿ 5 ತಿಂಗಳು ನಾಲ್ವರು ಗಗನಯಾತ್ರಿಗಳ ಹೊತ್ತ ‘ನಾಸಾದ ಕ್ರೂ-10 ಮಿಷನ್’ ಪೆಸಿಫಿಕ್’ನಲ್ಲಿ ಯಶಸ್ವಿ ಲ್ಯಾಂಡಿಂಗ್

09/08/2025 9:40 PM

BREAKING: ಮತ್ತೆ ರಷ್ಯಾದಲ್ಲಿ 6.0 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Russia

09/08/2025 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ ಆರೋಗ್ಯ ಸೇವೆಗಳು ಸಾರ್ವಜನಿಕರಿಗೆ ತಲುಪಲು ಮಾಧ್ಯಮಗಳ ಸಹಕಾರ ಅಗತ್ಯ: ಡಾ.ಬಸರೆಡ್ಡಿ
Uncategorized

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ ಆರೋಗ್ಯ ಸೇವೆಗಳು ಸಾರ್ವಜನಿಕರಿಗೆ ತಲುಪಲು ಮಾಧ್ಯಮಗಳ ಸಹಕಾರ ಅಗತ್ಯ: ಡಾ.ಬಸರೆಡ್ಡಿ

By kannadanewsnow0717/03/2024 4:00 AM

ಬಳ್ಳಾರಿ: ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಳ್ಳಲಾಗುವ ಕಾರ್ಯಕ್ರಮಗಳು, ಸೌಲಭ್ಯಗಳು ಮತ್ತು ಆರೋಗ್ಯ ಜಾಗೃತಿ ಸಂದೇಶಗಳ ಕುರಿತು ಸಾರ್ವಜನಿಕರಿಗೆ ತಲುಪಿಸಲು ಮಾಧ್ಯಮಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಗರದ ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ ಹಾಲ್‍ನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಪರಿಚಯ ಮತ್ತು ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ, ತುರ್ತು ಸಂದರ್ಭಗಳಲ್ಲಿಯೂ ಜಿಲ್ಲಾ ಆರೋಗ್ಯ ಇಲಾಖೆಯು ಉತ್ತಮ ಸೇವೆ ನೀಡುತ್ತಿದೆ. ಲಸಿಕಾ ಕಾರ್ಯಕ್ರಮಗಳೂ ಅತ್ಯುತ್ತಮ ರೀತಿಯಲ್ಲಿ ಒದಗಿಸಲಾಗುತ್ತಿದ್ದು, ಮಾರಕ ರೋಗಗಳನ್ನು ತಡೆಗಟ್ಟಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಹೆರಿಗೆ ಪ್ರಕರಣಗಳು ಜಿಲ್ಲಾ ಆಸ್ಪತ್ರೆ ಮತ್ತು ವಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚು ಆಗುತ್ತಿರುವುದರಿಂದ, ಶಿಶು ಮತ್ತು ತಾಯಿ ಮರಣವನ್ನು ನಿಯಂತ್ರಿಸಲು ಸಹಕಾರಿಯಾಗುತ್ತಿದೆ ಎಂದು ತಿಳಿಸಿದರು.

ಕಡುಬಡವರಿಗೆ ಗುಣ ಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿ ದೊರಕಿಸಿ ಹೆಚ್ಚಿನ ಚಿಕಿತ್ಸೆಗೆ ದೂರದೂರಿಗೆ ರೋಗಿಗಳನ್ನು ಕಳುಹಿಸುವುದನ್ನು ತಪ್ಪಿಸಲು ಇತ್ತೀಚೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಟೆಲಿಐಸಿಯು ಹಬ್ ಆರಂಭಿಸಲಾಗಿದೆ ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಯಾವುದೇ ಆರೋಗ್ಯ ಸೇವೆಗಳು, ಸೌಲಭ್ಯಗಳು ಹಾಗೂ ಇತರೆ ಕುಂದು ಕೊರತೆಗಳು ಕಂಡು ಬಂದಲ್ಲಿ ಸಂಬಂಧಿಸಿದ ವಿಭಾಗದ ಅಧಿಕಾರಿಗಳಿಗೆ ಸಂಪರ್ಕಿಸಬಹುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಸಲಹೆ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು 27 ಆರೋಗ್ಯ ಕಾರ್ಯಕ್ರಮಗಳ ವಿಭಾಗಗಳಿವೆ. ಒಂದೊಂದು ಕಾರ್ಯಕ್ರಮ ಕುರಿತು ವಿಶೇಷ ವರದಿ ಮಾಡಲು ಅಗತ್ಯ ಮಾಹಿತಿ ಒದಗಿಸಲಾಗುವುದು. ವರದಿಯು ಸಕಾರಾತ್ಮಕವಾಗಿರಲಿ ಅಥವಾ ನಕಾರಾತ್ಮಕವಾಗಿರಲಿ ಅವುಗಳನ್ನು ಪರಿಗಣಿಸಿ, ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಕಾರ್ಯಕ್ರಮಗಳ ಕುರಿತು ಪರಿಣಾಮಕಾರಿಯಾಗಿ ಅನುμÁ್ಟನ ಮಾಡಲಾಗುವುದು ಎಂದರು.

ಜಿಲ್ಲೆ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಆರೋಗ್ಯ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಾಧ್ಯಮ ಪ್ರತಿನಿಧಿಗಳು ಹೆಚ್ಚಿನ ರೀತಿಯಲ್ಲಿ ಪ್ರಚಾರ ನೀಡಬೇಕು ಎಂದು ಕೋರಿದರು.

ತಾಯಿ-ಶಿಶು ಮರಣ ತಪ್ಪಿಸಲು ಗಂಡಾಂತರ ಗರ್ಭಿಣಿಯರ ನಿಗಾವಹಿಸಲು ಗ್ರಾಮ ಮಟ್ಟದಲ್ಲಿಯೂ ವೈದ್ಯರನ್ನೊಳಗೊಂಡಂತೆ ಮೊಬೈಲ್ ಮೂಲಕ ವ್ಯಾಟ್ಸ್‍ಆಪ್ ಗ್ರೂಪ್ ರಚಿಸಲಾಗಿದೆ. ಈ ಮೂಲಕ ಆಯಾ ಗ್ರಾಮಗಳ ಗರ್ಭಿಣಿಯರ ಸ್ಥಿತಿ-ಗತಿ ಚಲನ-ವಲನಗಳ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನೊಳಗೊಂಡಂತಹ ಕಿರುಹೊತ್ತಿಗೆ ಮತ್ತು ವಿಶ್ವ ಗ್ಲಾಕೋಮಾ ಸಪ್ತಾಹ ಭಿತ್ತಿಪತ್ರ ಬಿಡುಗಡೆಗೊಳಿಸಿದರು.ಕಾರ್ಯಾಗಾರದಲ್ಲಿ ಗ್ಲಾಕೋಮಾ, ಮಾನಸಿಕ ಆರೋಗ್ಯ, ಕ್ಷಯರೋಗ ನಿರ್ಮೂಲನೆ, ಹೆಚ್‍ಐವಿ ಸೇರಿದಂತೆ ಇತರೆ ಕಾರ್ಯಕ್ರಮಗಳ ಕುರಿತು ಸಂಬಂಧಿಸಿದ ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುμÁ್ಠನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಜಿಲ್ಲಾ ಆಸ್ಪತ್ರೆಯ ಶುಶುಷ್ರಣಾಧಿಕಾರಿ ಡಾ.ವಿಮಲಾಕ್ಷಿ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು, ಜಿಲ್ಲಾ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಇನ್ನಿತರರು ಉಪಸ್ಥಿತರಿದ್ದರು.

Workshop for media persons on National Health Programmes Health services need media cooperation to reach the public: Dr. Basareddy ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ ಆರೋಗ್ಯ ಸೇವೆಗಳು ಸಾರ್ವಜನಿಕರಿಗೆ ತಲುಪಲು ಮಾಧ್ಯಮಗಳ ಸಹಕಾರ ಅಗತ್ಯ: ಡಾ.ಬಸರೆಡ್ಡಿ
Share. Facebook Twitter LinkedIn WhatsApp Email

Related Posts

Shocking News: ‘ಗರ್ಭಾಶ’ಯದ ಬದಲು ಮಹಿಳೆಯ ‘ಲಿವರ್‌’ನಲ್ಲಿ ಬೆಳೆದ ಭ್ರೂಣ

09/08/2025 12:00 PM1 Min Read

ಮತಗಳ್ಳತನ: ಅಕ್ರಮ ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ

08/08/2025 8:47 PM4 Mins Read

BREAKING : ‘ಹೊಸ ಪಠ್ಯಪುಸ್ತಕ’ದಲ್ಲಿ ಇತಿಹಾಸ ನಕ್ಷೆಯ ವಿವಾದ ; ‘NCERT’ಯಿಂದ ತಜ್ಞರ ಸಮಿತಿ’ ರಚನೆ

07/08/2025 7:42 PM2 Mins Read
Recent News

ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಹುಲ್ ಗಾಂಧಿಗೆ ಬಿಜೆಪಿ ಸವಾಲು

09/08/2025 10:06 PM

BREAKING : ಬಾಹ್ಯಾಕಾಶದಲ್ಲಿ 5 ತಿಂಗಳು ನಾಲ್ವರು ಗಗನಯಾತ್ರಿಗಳ ಹೊತ್ತ ‘ನಾಸಾದ ಕ್ರೂ-10 ಮಿಷನ್’ ಪೆಸಿಫಿಕ್’ನಲ್ಲಿ ಯಶಸ್ವಿ ಲ್ಯಾಂಡಿಂಗ್

09/08/2025 9:40 PM

BREAKING: ಮತ್ತೆ ರಷ್ಯಾದಲ್ಲಿ 6.0 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Russia

09/08/2025 9:23 PM

BREAKING: ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನಿದೆ: ಲೋಕಸಭೆಯಲ್ಲೇ ಸರ್ಕಾರ ಮಾಹಿತಿ

09/08/2025 9:20 PM
State News
KARNATAKA

ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡಬೇಡಿ: ಫ್ಯಾನ್ಸ್‌ಗೆ ‘ನಟ ಅನಿರುದ್ಧ್’ ಮನವಿ

By kannadanewsnow0909/08/2025 9:07 PM KARNATAKA 1 Min Read

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಸಮಾಧಿ ಸ್ಥಳ ನೆಲಸಮ ಮಾಡಿರೋದು ವಿವಾಧಕ್ಕೆ, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ನಟ…

Rain In Karnataka: ಇಂದಿನಿಂದ ಆಗಸ್ಟ್.13ರವರೆಗೆ ಭಾರಿ ಮಳೆ: ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

09/08/2025 8:38 PM

ಬೆಂಗಳೂರಿನ ‘ಲಾಲ್ ಬಾಗ್ ಪ್ಲವರ್ ಶೋ’ಗೆ ಭರ್ಜರಿ ರೆಸ್ಪಾನ್ಸ್: ನಿನ್ನೆ ಒಂದೇ ದಿನ 32,16,720 ಮಂದಿ ಭೇಟಿ

09/08/2025 8:33 PM

ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್ ಸಂಚಾರ’ ಆರಂಭ

09/08/2025 7:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.