Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 53,000 ಹುದ್ದೆಗಳ ನೇಮಕಾತಿ : ‘SSC (GD) ಕಾನ್ಸ್ಟೇಬಲ್’ ಫಲಿತಾಂಶ ಪ್ರಕಟ |SSC (GD) Constable Result declared

18/06/2025 10:50 AM

SHOCKING : ಮದುವೆಯಾಗಲು ಬೆಂಗಳೂರಿನಿಂದ ಗೋವಾಗೆ ಹೋದ ಲವರ್ಸ್ : ಯುವತಿ ಕತ್ತು ಸೀಳಿ ಕೊಂದ ಯುವಕ.!

18/06/2025 10:34 AM

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಅಪರಾಧ ದೃಶ್ಯವನ್ನು ಮರುಸೃಷ್ಟಿಸಿದ ಪೊಲೀಸರು

18/06/2025 10:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ : ಸಿಎಂ ಸಿದ್ದರಾಮಯ್ಯ 
Uncategorized

ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ : ಸಿಎಂ ಸಿದ್ದರಾಮಯ್ಯ 

By kannadanewsnow0718/03/2024 1:55 PM

ಬೆಂಗಳೂರು:ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ ಅಂತ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಹೀಗಿದೆ.  

ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?

ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು? – ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನೆ

ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ ಪ್ರಿಂಟ್‌ ಮಾಡುವ ಮೆಷಿನ್‌ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು.

ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?

2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು?

ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳ ಕಳೆದಿದೆ. ರೂ.18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ?

ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ ನಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ಈ ವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ‌ ರೈತರನ್ನು ಕೈಬಿಟ್ಟಿತ್ತು.

ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು?

ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗೆನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರಿತ್ಯ, ಪೊಲೀಸ್‌ ದೌರ್ಜನ್ಯಗಳಿಗೆ ಬಲಿಯಾದರು.

ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ?

Will your conscience allow you to vote for Yediyurappa's son who killed innocent farmers: Siddaramaiah
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

BREAKING : 53,000 ಹುದ್ದೆಗಳ ನೇಮಕಾತಿ : ‘SSC (GD) ಕಾನ್ಸ್ಟೇಬಲ್’ ಫಲಿತಾಂಶ ಪ್ರಕಟ |SSC (GD) Constable Result declared

18/06/2025 10:50 AM

SHOCKING : ಮದುವೆಯಾಗಲು ಬೆಂಗಳೂರಿನಿಂದ ಗೋವಾಗೆ ಹೋದ ಲವರ್ಸ್ : ಯುವತಿ ಕತ್ತು ಸೀಳಿ ಕೊಂದ ಯುವಕ.!

18/06/2025 10:34 AM

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಅಪರಾಧ ದೃಶ್ಯವನ್ನು ಮರುಸೃಷ್ಟಿಸಿದ ಪೊಲೀಸರು

18/06/2025 10:31 AM

BIG NEWS : ‘ಇರಾನ್’ ನಲ್ಲಿ ನೆಲೆಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮ : ಡಾ. ಆರತಿ ಕೃಷ್ಣ

18/06/2025 10:16 AM
State News
KARNATAKA

SHOCKING : ಮದುವೆಯಾಗಲು ಬೆಂಗಳೂರಿನಿಂದ ಗೋವಾಗೆ ಹೋದ ಲವರ್ಸ್ : ಯುವತಿ ಕತ್ತು ಸೀಳಿ ಕೊಂದ ಯುವಕ.!

By kannadanewsnow5718/06/2025 10:34 AM KARNATAKA 1 Min Read

ದಕ್ಷಿಣ ಗೋವಾದ ಪೊಲೀಸರು ಪ್ರತಾಪ್ ನಗರದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾದ ತನ್ನ ಗೆಳತಿಯ ಕೊಲೆ ಆರೋಪದ ಮೇಲೆ 22…

BIG NEWS : ‘ಇರಾನ್’ ನಲ್ಲಿ ನೆಲೆಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮ : ಡಾ. ಆರತಿ ಕೃಷ್ಣ

18/06/2025 10:16 AM

BREAKING : ಕುಟುಂಬ ಸಮೇತ ಕೇರಳದ ಕೊಟ್ಟಿಯೂರು ಶಿವನ ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ.!

18/06/2025 10:03 AM

Rain alert Karnataka : ರಾಜ್ಯದಲ್ಲಿ ಜೂ. 23 ರವರೆಗೆ ಭಾರಿ ಮಳೆ : ಈ ಜಿಲ್ಲೆಗಳಿಗೆ `ರೆಡ್, ಆರೆಂಜ್ ಅಲರ್ಟ್’ ಘೋಷಣೆ.!

18/06/2025 9:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.