Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

25/08/2025 8:53 PM

Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!

25/08/2025 8:49 PM

ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ ; 10,277 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ

25/08/2025 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿ.ಎಂ.ಸಿದ್ದರಾಮಯ್ಯ
KARNATAKA

ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿ.ಎಂ.ಸಿದ್ದರಾಮಯ್ಯ

By kannadanewsnow0903/04/2024 6:15 PM

ಮೈಸೂರು : ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ‌ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿದರು.

ನಮಗೆ ಸೈದ್ಧಾಂತಿಕ ಸ್ಪಷ್ಟತೆ ಇದ್ದಾಗ ಮಾತ್ರ ರಾಜಕೀಯ ಶಕ್ತಿ ಬರುತ್ತದೆ. BJP-RSS ಕಡೆ ತಲೆ ಹಾಕಬೇಡಿ. ಶೂದ್ರರಿಗೆ-ದಲಿತರಿಗೆ-ಮಹಿಳೆಯರಿಗೆ RSS ಗರ್ಭಗುಡಿಯೊಳಗೆ ಪ್ರವೇಶವನ್ನೇ ಕೊಡಲ್ಲ. ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು‌ ಈಗ ಮೋದಿಗೂ‌ ತಮಗೂ‌ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದರು.

BJP ಮತ್ತು RSS ಸಾಮಾಜಿಕ ನ್ಯಾಯದ ವಿರೋಧಿ. ಹೀಗಾಗಿ ಮೀಸಲಾತಿಯನ್ನು ಇಷ್ಟ ಪಡುವುದಿಲ್ಲ. ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ. ಅದು ಶೋಷಿತ ಜನ ಸಮುದಾಯಗಳ ಹಕ್ಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇದ್ದೇ ಇರಬೇಕು ಎಂದರು

ಸ್ವಾತಂತ್ರ್ಯ ಪೂರ್ವದಲ್ಲಿ , ಬ್ರಿಟೀಷರಿಗೂ ಮೊದಲು ಓದುವ ಹಕ್ಕು ನಮಗೆ ಅಂದರೆ ಶೂದ್ರರಿಗೆ ಇತ್ತಾ ? ಮಹಿಳೆಯರಿಗೆ ಇತ್ತಾ? ಪತಿ ಮೃತಪಟ್ಟ ತಕ್ಷಣ ಪತ್ನಿ ಕೂಡ ಬೆಂಕಿಗೆ ಆಹುತಿ ಆಗಬೇಕಿತ್ತು. ಇಂಥಾ ಮನುಸ್ಮೃತಿ ಪ್ರೇರಿತ ಅಮಾನವೀಯ ಪದ್ಧತಿ ರದ್ದಾಗಿದ್ದು ನಮ್ಮ ಸಂವಿಧಾನದಿಂದ. ಹೀಗಾಗಿ ಈ ಸಂವಿಧಾನ ಬದಲಾಯಿಸಿ ಮತ್ತೆ ಮನುಸ್ಮೃತಿ ತರಬೇಕು ಎನ್ನುವುದು ಅವರ ಹುನ್ನಾರ. ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಶೂದ್ರರಿಗೆ, ದಲಿತರಿಗೆ ಮತ್ತು ಮಹಿಳೆಯರಿಗೆ ಗರ್ಭಗುಡಿಯೊಳಗೆ ಬಿಟ್ಟುಕೊಳ್ಳಲ್ಲ. ನಂಜೇಗೌಡರು ಅಂತ ಹಿರಿಯ ಬಿಜೆಪಿ ನಾಯಕರು ಮತ್ತು ಈಗಿನ ಬಿಜೆಪಿ ನಾಯಕ ಗೂಳಿಹಟ್ಟಿ ಶೇಖರ್ ಅವರು ಕೂಡ ತಮ್ಮನ್ನು RSS ಗರ್ಭಗುಡಿಯೊಳಗೆ ಬಿಟ್ಟುಕೊಳ್ಳಲ್ಲ ಅಂತ ಬಹಿರಂಗವಾಗಿ ಹೇಳಿದ್ದಾರೆ. ಇದು ಸತ್ಯ. ಹೀಗಾಗಿ ಶೂದ್ರರನ್ನು ಕೇವಲ ಬಳಸಿಕೊಳ್ತಾರೆ ಅಷ್ಟೆ. ಆದ್ದರಿಂದ RSS ಕಡೆ ಶೂದ್ರರು, ದಲಿತರು, ಮಹಿಳೆಯರು ತಲೆ ಕೂಡ ಹಾಕಬಾರದು ಎಂದರು.

ಇಂಥಾ RSS ಜತೆ JDS ಸೇರಿಕೊಂಡಿದೆಯಲ್ಲಾ, ಇದನ್ನು ಟೀಕಿಸಬಾರದಾ? ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನಲ್ಲಿ ಹಣ ಮೀಸಲಿಡುವ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಅಭಿವೃದ್ಧಿ ಹಣದಲ್ಲಿ ಶೇ24.1% ಹಣ ಮೀಸಲಿಡಬೇಕು ಎನ್ನುವ ಕಾನೂನನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಪ್ರಗತಿಪರ ಕಾನೂನನ್ನು ಇಡಿ ದೇಶದಲ್ಲಿ ಬಿಜೆಪಿಯ ಯಾವ ಸರ್ಕಾರವೂ ಜಾರಿ ಮಾಡಿಲ್ಲ. ಮಾಡಿರುವುದು ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ. ಇದನ್ನೆಲ್ಲಾ ಜನ ಸಮುದಾಯ ತಿಳಿದುಕೊಳ್ಳಬೇಕು ಎಂದರು.

ಗುತ್ತಿಗೆಯಲ್ಲಿ ದಲಿತರಿಗೆ ಮೀಸಲಾತಿ ತಂದಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಮಂಡಲ್ ವರದಿಯನ್ನು ವಿರೋಧಿಸಿದ್ದು, ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದು ಇದೇ ಬಿಜೆಪಿ ತಾನೇ? SCP/ TSP ಕಾಯ್ದೆಯನ್ನು ಜಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಹೀಗಾಗಿ ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ, ನಿಮ್ಮ ಬದುಕಿಗೆ ಕೊಳ್ಞಿ ಇಡುವವರ ಜತೆ ಸೇರದೆ, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಿ ಎಂದು ಕರೆ ನೀಡಿದರು.

ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಮತ್ತು ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಸೇರಿ ಹಲವು ನಾಯಕರು, ಕೆಪಿಸಿಸಿಯ ಎಸ್.ಸಿ/ಎಸ್.ಟಿ ವಿಭಾಗದ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

BREAKING : ಬಂಧನ ಪ್ರಶ್ನಿಸಿ ದೆಹಲಿ ಸಿಎಂ ‘ಕೇಜ್ರಿವಾಲ್’ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

‘CTET 2024 ನೋಂದಣಿ’ಗೆ ಕೊನೆ ದಿನಾಂಕ ವಿಸ್ತರಣೆ, ಕನ್ನಡ ಸೇರಿ 20 ಭಾಷೆಗಳಲ್ಲಿ ಪರೀಕ್ಷೆ, ಶೀಘ್ರ ಅರ್ಜಿ ಸಲ್ಲಿಸಿ

ನನ್ನನ್ನು ರಾಷ್ಟ್ರಪತಿ. ಪ್ರಧಾನಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿ.ಎಂ.ಸಿದ್ದರಾಮಯ್ಯ I will be made President. PM. but I will not turn my head towards BJP: Siddaramaiah
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

25/08/2025 8:53 PM1 Min Read

Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!

25/08/2025 8:49 PM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

25/08/2025 8:16 PM1 Min Read
Recent News

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

25/08/2025 8:53 PM

Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!

25/08/2025 8:49 PM

ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ ; 10,277 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ

25/08/2025 8:40 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

25/08/2025 8:16 PM
State News
KARNATAKA

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

By kannadanewsnow0925/08/2025 8:53 PM KARNATAKA 1 Min Read

ಬೆಂಗಳೂರು: ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಭ ಕೋರಿದ್ದಾರೆ. ಇಂದು…

Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!

25/08/2025 8:49 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

25/08/2025 8:16 PM

ಆ.26ರವರೆಗೆ ಸಿಇಟಿ 2ನೇ ಸುತ್ತಿಗೆ ಮುಂಗಡ ಪಾವತಿಗೆ ಅವಧಿ ವಿಸ್ತರಣೆ

25/08/2025 7:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.