ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಕುರಿತು ಚರ್ಚಿಸಲು ಸಿದ್ಧವಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ನಾಯಕರ ನಡುವಣ ಆರೋಪ ಪ್ರತ್ಯಾರೋಪಗಳು ಬಿರುಸುಗೊಂಡಿವೆ.
ಚಿಕ್ಕಬಳ್ಳಾಪುರ : ಪ್ರಿಯತಮೆ ಕೈ ಕೊಟ್ಟಿದ್ದರಿಂದ ಮನನೊಂದ ಯುವಕ : ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಆರ್ಥಿಕತೆ ಹಾಗೂ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಕುರಿತು ಸತ್ಯ ಹಾಗೂ ವಾಸ್ತವದ ನೆಲೆಯಲ್ಲಿ ಚರ್ಚೆ ನಡೆಸಲು ನಾಗರಿಕ ಸಮಾಜ ನೀಡಿರುವ ಆಹ್ವಾನವನ್ನು ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು, ಕೇಂದ್ರ ಹಣಕಾಸು ಸಚಿವರನ್ನು ಮುಕ್ತ ಚರ್ಚೆಗೆ ಆಹ್ವಾನಿಸಿದ್ದೇವೆ. ಅವರು ಭಾಗವಹಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಏ.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಅಧಿಕಾರಕ್ಕೇರಿದ ಮೊದಲ ದಿನದಿಂದಲೂ ಅಬ್ಬರಿಸುತ್ತಿದ್ದಾರೆ. ಆದರೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಅವರು, ಸಿದ್ದರಾಮಯ್ಯ ಆರೋಪವನ್ನು ಅಲ್ಲಗಳೆಯುತ್ತಾ ಬಂದಿದ್ದಾರೆ.
I have accepted the invite of civil society to debate issues of fiscal federalism and injustices to K’taka with truth and facts. Hon Chief minister, Sri @Siddaramaiah and myself had invited Hon Finance minister for an open debate. I hope she will participate. #GOK pic.twitter.com/EIaxVKqsvh
— Krishna Byre Gowda (@krishnabgowda) April 5, 2024