ಮಂಡ್ಯ : ಇತ್ತೀಚಿಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ವಿ ಸೋಮಣ್ಣ ಅವರ ಪರವಾಗಿ ಪ್ರಚಾರದ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಅವರ ಹೇಳಿಕೆಗೆ ಊಟ ಹೊಡೆದಿದ್ದು ನನ್ನ ಹೇಳಿಕೆಯನ್ನು ತಿರುಚಿಲಾಗಿದೆ ಎಂದು ತಿಳಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನ್ನ ವಿರುದ್ಧ ಮಹಿಳೆಯರನ್ನು ಎತ್ತಿ ಕಟ್ಟಲು ಮುಂದಾಗಿದ್ದಾರೆ. ತುಮಕೂರಿನಲ್ಲಿ ನೀಡಿದ್ದ ನನ್ನ ಹೇಳಿಕೆ ತಿರುಚಿದ್ದಾರೆ.ಕೆರೆಗೂಡು ಗ್ರಾಮದಲ್ಲಿ ತಾಯಂದಿರು ಆರತಿ ಬೆಳಗಿ ಕಳುಹಿಸಿದ್ದಾರೆ.ನನಗೆ ದೊಡ್ಡ ಶಕ್ತಿ ತುಂಬುವುದು ಮಂಡ್ಯ ಜಿಲ್ಲಾ ಜನತೆ ನಿನ್ನೆಯಿಂದ ಮಂಡ್ಯ ಕ್ಷೇತ್ರದಲ್ಲಿ ನಾನು ಪ್ರಚಾರವನ್ನು ಆರಂಭಿಸಿದ್ದೇನೆ ಎಂದರು.
ನನ್ನ ಸೋಲು ಗೆಲುವು ಡಿಸಿಎಂ ಡಿಕೆ ಶಿವಕುಮಾರ್ ಕೈಯಲ್ಲಿ ಇಲ್ಲ ಎಂದು ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಅವರ ಪಕ್ಷದ ವಿಚಾರ.ಡಿಸಿಎಂ ಡಿಕೆ ಶಿವಕುಮಾರ್ ಅವರ ವೋಟ್ ಮಂಡ್ಯದಲ್ಲಿ ಇಲ್ಲ ಡಿಕೆ ಶಕ್ತಿ ನನ್ನ ಶಕ್ತಿ ಮುಖ್ಯ ಅಲ್ಲ ಮತದಾರರ ನಿರ್ಣಯ ಅಂತಿಮ ಎಂದು ಹೇಳಿದರು.
ಎಚ್ ಡಿ ಕುಮಾರಸ್ವಾಮಿ ಮಂಡ್ಯದ ಆಸ್ತಿ ಎಂಬ ಭಾವನೆ ಜನರಲ್ಲಿ ಇದೆ.ನಮ್ಮ ಆಸ್ತಿಯನ್ನು ಉಳಿಸಿಕೊಳ್ಳಬೇಕೆಂಬ ಭಾವನೆ ಜನರಿಗೆ ಇದೆ. ಮಂಡ್ಯ ಜಿಲ್ಲೆಯ ಜನರ ಪ್ರೀತಿ ವಿಶ್ವಾಸಕ್ಕೆ ಬೆಲೆ ಕಟ್ಟಲು ಆಗುವುದಿಲ್ಲ.ಬೇರೆ ಪಕ್ಷಗಳ ಸರ್ಟಿಫಿಕೇಟ್ ನನಗೆ ಅವಶ್ಯಕತೆ ಇಲ್ಲ ಎಂದು ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.