Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಸಿಹಿ ಸುದ್ದಿ : ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ : ಸಚಿವ ಶಿವಾನಂದ್ ಪಾಟೀಲ್

17/05/2025 5:44 PM

ಪಾಕ್‌, ಉಗ್ರರ ಮೇಲೆ ಹದ್ದಿನ ಕಣ್ಣು: ನಾಳೆ ‘ISRO’ದಿಂದ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ! | ISRO PSLV-C61 mission

17/05/2025 5:43 PM

BIG NEWS : ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಕೆಕೆಆರ್ ಪಂದ್ಯ ಆರಂಭ : ಭದ್ರತೆಗೆ 1000 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ

17/05/2025 5:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ ನಂತ್ರ ‘ಕಾಂಗ್ರೆಸ್ ಸರ್ಕಾರ’ ಪತನ ಅನ್ನೋದು ವಿಪಕ್ಷಗಳ ಭ್ರಮೆ- ಸಿಎಂ ಸಿದ್ಧರಾಮಯ್ಯ
KARNATAKA

ಲೋಕಸಭಾ ಚುನಾವಣೆ ನಂತ್ರ ‘ಕಾಂಗ್ರೆಸ್ ಸರ್ಕಾರ’ ಪತನ ಅನ್ನೋದು ವಿಪಕ್ಷಗಳ ಭ್ರಮೆ- ಸಿಎಂ ಸಿದ್ಧರಾಮಯ್ಯ

By kannadanewsnow0917/04/2024 7:17 PM

ಕೋಲಾರ: ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಚೊಕ್ಕoಡಹಳ್ಳಿ ಗೇಟ್ ಮಾಲೂರು ತಾಲ್ಲೂಕು, ಕೋಲಾರ ಜಿಲ್ಲೆ ಇಲ್ಲಿ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ಕೆವಿ ಗೌತಮ್ ಇವರ ಪರ ಮತಯಾಚನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲು ವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ. ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಸೋಲುತ್ತದೆ ಎನ್ನುವ ಭಯದಿಂದ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಜೆಡಿಎಸ್ ಕೂಡ ಕೋಲಾರ, ಮಂಡ್ಯ ಹಾಗೂ ಹಾಸನ ಸೇರಿ ಮೂರು ಸ್ಥಾನಗಳನ್ನು ಮಾತ್ರ ಸ್ಪರ್ಧಿಸುತ್ತಿದೆ. ಉಳಿದ ಕಡೆ 25 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಕೋಲಾರದ ಜನ ಕಾಂಗ್ರೆಸ್ ಗೆ ಬೆಂಬಲಿಸುತ್ತದೆ ಎಂದು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿರುವುದನ್ನು ನೋಡಿ ತಿಳಿಯುತ್ತದೆ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಗೆಲ್ಲು ತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಕಾಂಗ್ರೆಸ್ ಕೂಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದೆ.

ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೇವೆ . ಬಿಜೆಪಿ 2018 ರಲ್ಲಿ 600 ಭರವಸೆ ನೀಡಿ 60 ಭರವಸೆ ಕೂಡ ಈಡೇರಿಸಿಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಕರ್ನಾಟಕದ ಜನತೆಗೆ ಬಿಜೆಪಿ ದ್ರೋಹ ಬಗೆದಿದೆ.

ಮೇ 20 ರಂದು ಅಧಿಕಾರಕ್ಕೆ ಬನಾ ಕೂಡಲೇ ಗ್ಯಾರಂಟಿಗಳ ಅನುಷ್ಠಾನಕ್ಕೆ ತೀರ್ಮಾನ ಮಾಡಲಾಯಿತು. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮಿ ಯೌಜೆನ್ಯದಿ 1.17 ಕೋಟಿ ಗೃಹಿಣಿಯರಿಗೆ ತಿಂಗಳಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ. ಹಾಗೂ ಯುವನಿಧಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಕರ್ನಾಟಕ ಹಸಿವು ಮುಕ್ತವಾಗಲು ಅನ್ನ ಭಾಗ್ಯ ಯೋಜನೆ ಜಾರಿಗೆ ತಂದೆವು. ಕೇಂದ್ರ ಸರ್ಕಾರ ಕುಯುಕ್ತಿಯಿಂದಾಗಿ ಅಕ್ಕಿ ತಪ್ಪಿದರೂ, ಅಕ್ಕಿ ದೊರೆಯುವವರೆಗೆ 170 ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದರು.

ಬಿಜೆಪಿ ಭರವಸೆಯನ್ನು ಈಡೇರಿಸಿಲ್ಲ

5 ಗ್ಯಾರಂಟಿ ಜೊತೆಗೆ 82 ಭರವಸೆ ಈಡೇರಿಸುವ ಪ್ರಯತ್ನವನ್ನು ಮಾಡಿದ್ದೇವೆ. ನರೇಂದ್ರ ಮೋದಿ ಯಾವರು ಪ್ರಧಾನಿಯಾಗಿ 10 ವರ್ಷಗಳಾದರೂ ಯಾವ ಭರವಸೆಯನ್ನು ಈಡೇರಿಸಿಲ್ಲ. ವಿದೇಶದಿಂದ ಕಪ್ಪು ಹಣ ತಂದು ಪ್ರತಿ ಕುಟುಂಬಕ್ಕೆ 15 ಲಕ್ಷ ರೂಪಾಯಿಗಳನ್ನು ಹಾಕುವುದಾಗಿ ಹೇಳಿದ್ದರು. ಇದನ್ನು ಹೇಳಿ 10 ವರ್ಷಗಳಾಯ್ತು. ಒಂದು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷಿಸುವುದಾಗಿ ಹೇಳಿದ್ದರು. ನಿರುದ್ಯೋಗ ಸಮಸ್ಯೆ ಬೃಹದಾಕಾರವಾಗಿ ಬೆಳೆದಿದೆ ಜೊತೆಗೆ ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರು. ಆದರೆ ಹಾಗೆ ಆಗಿಲ್ಲ. ಅಚ್ಚೇ ದಿನ್ ಬರಲಿಲ್ಲ. ಜನ ಬೆಲೆಯೇರಿಕೆಯಿಂದ ತತ್ತರಿಸಿದ್ದ ಸಂದರ್ಭದಲ್ಲಿ 5 ಗ್ಯಾರಂಟಿ ಗಳನ್ನು ಕೊಟ್ಟಿದ್ದೇವೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿ ಗಳನ್ನು ಜಾರಿ ಮಾಡಲಿದೆ.

ಈ ಬಾರಿ ಕೋಲಾರದ ಜನತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಬೇಕೆಂದು ಮನವಿ ಮಾಡಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪಕ್ಷದ ಮುಖಂಡರು ಉಪ್ಥಿತರಿದ್ದರು.

GOOD NEWS: ಇಪಿಎಫ್ ಹಿಂಪಡೆಯುವ ನಿಯಮಗಳಲ್ಲಿ ಬದಲಾವಣೆ, ಈಗ ಮೂರು ದಿನಗಳಲ್ಲಿ ಸಿಗಲಿದೆ ಒಂದು ಲಕ್ಷ ಹಣ!

BREAKING : ಪಶ್ಚಿಮ ಬಂಗಾಳ ರಾಜ್ಯಪಾಲರ ‘ಕೂಚ್ ಬೆಹಾರ್’ ಭೇಟಿಗೆ ‘ಚುನಾವಣಾ ಆಯೋಗ’ ತಡೆ

Share. Facebook Twitter LinkedIn WhatsApp Email

Related Posts

ರೈತರಿಗೆ ಸಿಹಿ ಸುದ್ದಿ : ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ : ಸಚಿವ ಶಿವಾನಂದ್ ಪಾಟೀಲ್

17/05/2025 5:44 PM1 Min Read

BIG NEWS : ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಕೆಕೆಆರ್ ಪಂದ್ಯ ಆರಂಭ : ಭದ್ರತೆಗೆ 1000 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ

17/05/2025 5:21 PM1 Min Read

ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ: MLA ಗೋಪಾಲಕೃಷ್ಣ ಬೇಳೂರು

17/05/2025 5:10 PM1 Min Read
Recent News

ರೈತರಿಗೆ ಸಿಹಿ ಸುದ್ದಿ : ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ : ಸಚಿವ ಶಿವಾನಂದ್ ಪಾಟೀಲ್

17/05/2025 5:44 PM

ಪಾಕ್‌, ಉಗ್ರರ ಮೇಲೆ ಹದ್ದಿನ ಕಣ್ಣು: ನಾಳೆ ‘ISRO’ದಿಂದ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ! | ISRO PSLV-C61 mission

17/05/2025 5:43 PM

BIG NEWS : ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಕೆಕೆಆರ್ ಪಂದ್ಯ ಆರಂಭ : ಭದ್ರತೆಗೆ 1000 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ

17/05/2025 5:21 PM

ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ: MLA ಗೋಪಾಲಕೃಷ್ಣ ಬೇಳೂರು

17/05/2025 5:10 PM
State News
KARNATAKA

ರೈತರಿಗೆ ಸಿಹಿ ಸುದ್ದಿ : ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ : ಸಚಿವ ಶಿವಾನಂದ್ ಪಾಟೀಲ್

By kannadanewsnow0517/05/2025 5:44 PM KARNATAKA 1 Min Read

ಕಲಬುರ್ಗಿ : ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು…

BIG NEWS : ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಕೆಕೆಆರ್ ಪಂದ್ಯ ಆರಂಭ : ಭದ್ರತೆಗೆ 1000 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ

17/05/2025 5:21 PM

ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ: MLA ಗೋಪಾಲಕೃಷ್ಣ ಬೇಳೂರು

17/05/2025 5:10 PM

BREAKING : ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ : ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸೇರಿ ಇಬ್ಬರು ದುರ್ಮರಣ!

17/05/2025 5:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.