Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫ್ರಿಡ್ಜ್’ನಲ್ಲಿ ತುಂಡು ‘ನಿಂಬೆಹಣ್ಣು’ ಇಟ್ಟರೆ ಏನಾಗುತ್ತೆ ಗೊತ್ತಾ? ಪ್ರಯೋಜನ ತಿಳಿದ್ರೆ, ನೀವೇ ಶಾಕ್ ಆಗ್ತೀರಿ!

23/08/2025 10:00 PM

Alert : ವಾಟ್ಸಾಪ್’ನಲ್ಲಿ ಬಂದ ‘ಆಮಂತ್ರಣ ಪತ್ರಿಕೆ’ ತೆರೆದು ನೋಡುವ ಮುನ್ನ ಎಚ್ಚರ ; 1,90,000 ರೂ. ಕಳೆದುಕೊಂಡ ಸರ್ಕಾರಿ ಉದ್ಯೋಗಿ

23/08/2025 9:48 PM

‘BCCI’ ಮಹತ್ವದ ನಿರ್ಧಾರ ; ದೇಶೀಯ ಕ್ರಿಕೆಟ್ ಸ್ವರೂಪ ಬದಲಾವಣೆ, ಈಗ ಪಂದ್ಯಗಳು ಹೀಗಿರುತ್ತವೆ.!

23/08/2025 9:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಶೇ 43% ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ
KARNATAKA

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಶೇ 43% ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ

By kannadanewsnow0919/04/2024 3:46 PM

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43 ರಷ್ಟು ಹೆಚ್ಚಳವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರಾಜ್ಯ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೂಂಡಾ ರಾಜ್ಯ ವಾಗಿದೆ. ಪೊಲೀಸರು ಆರೋಪಿಗಳನ್ನು ಹಿಡಿದರೂ ಅವರನ್ಮು ರಾಜಕೀಯ ಪ್ರಭಾವ ಬಳಸಿ ಬಿಡುಗಡೆ ಮಾಡಿಸುತ್ತಿದ್ದಾರೆ. ಹಪ್ತಾ ವಸೂಲಿ ಹೆಚ್ಚಾಗಿದೆ. ಪೊಲಿಸ್ ಸ್ಟೇಷನ್ ಗಳು ಸೆಟ್ಲಮೆಂಟ್‌ ಕೇಂದ್ರಗಳಾಗಿವೆ ಎಂದು ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿಯೇ ಒಬ್ಬ ಯುವಕ ಯುವತಿಗೆ ಒಂಬತ್ತು ಬಾರಿಬಿರಿದು ಓಡಿ ಹೋಗುತ್ತಾನೆ ಎಂದರೆ ಅವನ ಹಿಂದೆ ಯಾವ ಶಕ್ತಿ ಇದೆ. ಗೃಹ ಸಚಿವರು ಅದೊಂದು ಪ್ರೇಮ ಪಕ್ರರಣ ಇಷ್ಟು ಹಗುರ ಹೇಳಿಕೆ ಕೊಟ್ಟರೆ ಅಪರಾಧಿಗಳಿಗೆ ಪುಷ್ಟಿ ಬರದೇ ಇನ್ನೇನಾಗುತ್ತದೆ. ಕಾಲೇಜ್ ಕ್ಯಾಂಪಸ್ ನಲ್ಲಿ ಈ ರೀತಿ ಪ್ರಕರಣ ನಡೆಯದೆ ಇನ್ನೇನಾಗುತ್ತದೆ ಎಂದರು.

ಗೃಹ ಸಚಿವರು ಪ್ರೇಮ ಪ್ರಕರಣ ಅಂತಾರೆ. ಹುಬ್ಬಳ್ಳಿ ಕಮಿಷನರ್ ಅವಳು ಲವ್ ನಿರಾಕರಣೆ ಮಾಡಿರೊದಕ್ಕೆ ಅವನು ಕೊಲೆ ಮಾಡಿದ್ದಾನೆ ಎಂದು ಹೇಳಿದ್ದಾರೆ. ಇಷ್ಟೊಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಹಾವೇರಿಯಲ್ಲಿ ಅತ್ಯಾಚಾರ ಪ್ರಕರಣ ನಡೆದರೆ ಅದನ್ನು ಮುಚ್ಚಿಹಾಕುವ ಯತ್ನ ಮಾಡಿದರು. ನಂತರ ಆ ಮಹಿಳೆ ಬಹಿರಂಗವಾಗಿ ಹೇಳಿಕೆ ಕೊಟ್ಟ ಮೇಲೆ ಕೇಸ್ ದಾಖಲಿಸಿಕೊಂಡರು. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತೃಗೊಳಿಸಿದರು. ಸಿಎಂ, ಡಿಜಿಪಿ ಇದ್ದಾಗಲೇ ಈ ರೀತಿ ನಡೆಯುತ್ತಿದೆ ಎಂದರೆ ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂದು ಪ್ರಶ್ನಿಸಿದರು. ಹಾವೇರಿ ಪ್ರಕರಣದಲ್ಲಿ ಸಿಎಂ ಸ್ಥಳಿಯ ಶಾಸಕರಿಗೆ ನೋಡಿಕೊಳ್ಳುವಂತೆ ಸೂಚಿಸುತ್ತಾರೆ. ಅಂದರೆ ಅವರು ಏನೂ ಮಾತನಾಡದಂತೆ ನೋಡಿಕೊಳ್ಳಲು ಹೇಳುತ್ತಾರೆ ಎಂದು ಆರೋಪಿಸಿದರು.

ಬಸವರಾಜ ಬೊಮ್ಮಾಯಿಯವರ ಅವಧಿಯಲ್ಲಿಯೂ ಕೊಲೆ ಪ್ರಕರಣಗಳು ನಡೆದಿದ್ದವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ತಿರುಗೇಟು ನೀಡಿದ ಅವರು, ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ 43% ರಷ್ಡು ಹೆಚ್ಚಳವಾಗಿವೆ. ಡಿಸಿಎಂ ಆದವರು ಈ ರೀತಿಯ ಪ್ರಕರಣಗಳನ್ನು ಸಮರ್ಥನೆ ಮಾಡಿಕೊಳ್ಳುತ್ತೀರಾ. ರಾಜ್ಯದಲ್ಲಿ ಮಾಸ್ ಮಾರ್ಡರ್ ಗಳು ಯಾಕೆ ನಡೆಯುತ್ತಿವೆ ಎನ್ನುವ ಬಗ್ಗೆ ಚಿಂತನೆ ಆಗಬೇಕು. ಹುಬ್ಬಳ್ಳಿ ಯುವತಿ ಕೊಲೆ ಅಪರಾಧ ವಿಭಾಗದ ಡಿಜಿಪಿ ಉಸ್ತುವಾರಿ ವಹಿಸಬೇಕು. ಹುಬ್ಬಳ್ಳಿ ಪ್ರಕರಣದಲ್ಲಿ ಇನ್ನೂ ನಾಲ್ಕು ಜನ ಭಾಗಿಯಾಗಿದ್ದಾರೆ ಎಂದು ಮೃತ ಯುವತಿಯ ತಂದೆನೇ ಮಾಹಿತಿ ಕೊಟ್ಟಿದ್ದಾರೆ. ಪೋಲೀಸರು ಅವರನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ; ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್

BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ

Share. Facebook Twitter LinkedIn WhatsApp Email

Related Posts

BREAKING : ತುಮಕೂರಿನಲ್ಲಿ ಆಸ್ಪತ್ರೆಯಲ್ಲೇ `ಹೃದಯಾಘಾತ’ದಿಂದ ಕರ್ತವ್ಯನಿರತ ನರ್ಸ್ ಸಾವು.!

23/08/2025 8:48 PM1 Min Read

BREAKING: ಶಾಸಕ ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ : ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನ

23/08/2025 8:27 PM1 Min Read

`ಆಯುಷ್ಮಾನ್ ಕಾರ್ಡ್’ : ಯಾವ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು? ಇಲ್ಲಿದೆ ಮಾಹಿತಿ

23/08/2025 8:13 PM2 Mins Read
Recent News

ಫ್ರಿಡ್ಜ್’ನಲ್ಲಿ ತುಂಡು ‘ನಿಂಬೆಹಣ್ಣು’ ಇಟ್ಟರೆ ಏನಾಗುತ್ತೆ ಗೊತ್ತಾ? ಪ್ರಯೋಜನ ತಿಳಿದ್ರೆ, ನೀವೇ ಶಾಕ್ ಆಗ್ತೀರಿ!

23/08/2025 10:00 PM

Alert : ವಾಟ್ಸಾಪ್’ನಲ್ಲಿ ಬಂದ ‘ಆಮಂತ್ರಣ ಪತ್ರಿಕೆ’ ತೆರೆದು ನೋಡುವ ಮುನ್ನ ಎಚ್ಚರ ; 1,90,000 ರೂ. ಕಳೆದುಕೊಂಡ ಸರ್ಕಾರಿ ಉದ್ಯೋಗಿ

23/08/2025 9:48 PM

‘BCCI’ ಮಹತ್ವದ ನಿರ್ಧಾರ ; ದೇಶೀಯ ಕ್ರಿಕೆಟ್ ಸ್ವರೂಪ ಬದಲಾವಣೆ, ಈಗ ಪಂದ್ಯಗಳು ಹೀಗಿರುತ್ತವೆ.!

23/08/2025 9:12 PM

BREAKING : ತುಮಕೂರಿನಲ್ಲಿ ಆಸ್ಪತ್ರೆಯಲ್ಲೇ `ಹೃದಯಾಘಾತ’ದಿಂದ ಕರ್ತವ್ಯನಿರತ ನರ್ಸ್ ಸಾವು.!

23/08/2025 8:48 PM
State News
KARNATAKA

BREAKING : ತುಮಕೂರಿನಲ್ಲಿ ಆಸ್ಪತ್ರೆಯಲ್ಲೇ `ಹೃದಯಾಘಾತ’ದಿಂದ ಕರ್ತವ್ಯನಿರತ ನರ್ಸ್ ಸಾವು.!

By kannadanewsnow5723/08/2025 8:48 PM KARNATAKA 1 Min Read

ತುಮಕೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತುಮಕೂರಿನಲ್ಲಿ ಹೃದಯಾಘಾತದಿಂದ ಕರ್ತವ್ಯನಿರತ ನರ್ಸ್ ಬಲಿಯಾಗಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕುಸಿದುಬಿದ್ದು ನರ್ಸ್…

BREAKING: ಶಾಸಕ ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ : ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನ

23/08/2025 8:27 PM

`ಆಯುಷ್ಮಾನ್ ಕಾರ್ಡ್’ : ಯಾವ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು? ಇಲ್ಲಿದೆ ಮಾಹಿತಿ

23/08/2025 8:13 PM

ರಾಜ್ಯದಲ್ಲಿ ಇನ್ಮುಂದೆ `ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ

23/08/2025 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.