Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನೆಯಲ್ಲಿ ಬೆಲ್ಲದ ಶುದ್ಧತೆ ಪರಿಶೀಲಿಸುವುದು ಹೇಗೆ.? : ‘FSSAI’ ತಿಳಿಸಿದ ಸುಲಭ ಸಲಹೆ ಅನುಸರಿಸಿ!

07/03/2026 3:09 PM

‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah

07/03/2026 3:01 PM

GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

07/03/2026 2:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ಶೇ.4ರಷ್ಟು ಮುಸ್ಲಿಂ ಮೀಸಲಾತಿ : CM ಸಿದ್ದರಾಮಯ್ಯ ಸಮರ್ಥನೆ
KARNATAKA

ಕರ್ನಾಟಕದಲ್ಲಿ ಶೇ.4ರಷ್ಟು ಮುಸ್ಲಿಂ ಮೀಸಲಾತಿ : CM ಸಿದ್ದರಾಮಯ್ಯ ಸಮರ್ಥನೆ

By kannadanewsnow5725/04/2024 11:58 AM

ಬೆಂಗಳೂರು : ಹಿಂದುಳಿದ ವರ್ಗಗಳಿಂದ ಮುಸ್ಲಿಮರಿಗೆ ಮೀಸಲಾತಿಯನ್ನು ಕಾಂಗ್ರೆಸ್ ವರ್ಗಾಯಿಸಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಅಡಿಯಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ಅವರು ಸಮರ್ಥಿಸಿಕೊಂಡರು. ಇದು ಅಜ್ಞಾನದಿಂದ ಹುಟ್ಟಿಕೊಂಡಿದೆ ಆದರೆ ಸೋಲಿನ ಭಯದಿಂದ ಹುಟ್ಟಿದ ಅವರ ಹತಾಶೆಯನ್ನು ಸೂಚಿಸುತ್ತದೆ. ನಮ್ಮ ದೇಶದ ಇತಿಹಾಸದಲ್ಲಿ ಯಾವುದೇ ನಾಯಕ ಪ್ರಧಾನಿ ಕಚೇರಿಯನ್ನು ಇಷ್ಟು ಕೀಳು ಮಟ್ಟಕ್ಕೆ ಇಳಿಸಿಲ್ಲ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ Narendra Modi ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ.

ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದೋ ಈ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು.

ಹಿಂದುಳಿದ ಜಾತಿ ಮತ್ತು ಎಸ್ ಸಿ / ಎಸ್ ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು.

ಸಂವಿಧಾನದತ್ತವಾದ ಮೀಸಲಾತಿಯನ್ನು ಮನಬಂದಂತೆ ಬದಲಾವಣೆ ಮಾಡಲು ಸಾಧ್ಯ ಇಲ್ಲ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಆಧಾರದಲ್ಲಿ ಮಾತ್ರ ಮೀಸಲಾತಿಯ ಪರಿಷ್ಕರಣೆ ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಯೂ ಇಲ್ಲ. ಇದಕ್ಕಾಗಿ ಸಂಸತ್‌ನ ಉಭಯ ಸದನಗಳ ಒಪ್ಪಿಗೆಯೊಂದಿಗೆ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಇಂತಹದ್ದೊಂದು ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತವೇ ಸರಿ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಲಾಗಿರುವುದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ Bharatiya Janata Party (BJP) ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವಾಗಲಿ ಇಲ್ಲಿಯ ವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಕೂಡಾ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ.

ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಧರ್ಮದ ಆಧಾರದಲ್ಲಿ ಮತವಿಭಜನೆಯ ಏಕೈಕ ದುರುದ್ದೇಶದಿಂದ ಬಸವರಾಜ ಬೊಮ್ಮಾಯಿ ಸರ್ಕಾರ ಮೀಸಲಾತಿಯನ್ನು ಅಡ್ಡಾದಿಡ್ಡಿಯಾಗಿ ಪರಿಷ್ಕರಿಸಲು ಹೊರಟು ಸುಪ್ರೀಂ ಕೋರ್ಟಿನಿಂದ ಛೀಮಾರಿಗೆ ಗುರಿಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮರೆತಂತೆ ಕಾಣುತ್ತಿದೆ. ಮುಸ್ಲಿಮರಿಗೆ ಇದ್ದ ಶೇಕಡಾ ನಾಲ್ಕರ ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿರುವ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮುಂದಿನ ಆದೇಶದ ವರೆಗೆ ಪರಿಷ್ಕೃತ ಮೀಸಲಾತಿಯನ್ನು ಜಾರಿಗೊಳಿಸಬಾರದೆಂದು ಆದೇಶ ನೀಡಿದೆ. ಇಂತಹದ್ದೊಂದು ಪ್ರಮುಖ ಮಾಹಿತಿ ಕೂಡಾ ಪ್ರಧಾನಮಂತ್ರಿಯವರ ಗಮನದಲ್ಲಿ ಇಲ್ಲದೆ ಇರುವುದು ವಿಷಾದನೀಯ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಹದಿನೈದರಿಂದ ಹದಿನೇಳಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮೂರರಿಂದ ಐದಕ್ಕೆ ಹೆಚ್ಚಿಸುವುದಾಗಿ ಹಿಂದಿನ BJP Karnataka ಸರ್ಕಾರ ಘೋಷಿಸಿತ್ತು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೂ ಪತ್ರ ಬರೆದಿರುವುದಾಗಿಯೂ ತಿಳಿಸಿತ್ತು. ಆದರೆ ಇಂತಹ ಯಾವ ಪತ್ರ ಕೂಡಾ ರಾಜ್ಯದ ಬಿಜೆಪಿ ಸರ್ಕಾರದಿಂದ ತಮಗೆ ಬಂದಿಲ್ಲ. ಆ ರೀತಿಯ ಮೀಸಲಾತಿ ಏರಿಕೆಯ ಪ್ರಸ್ತಾವ ತಮ್ಮ ಪರಿಶೀಲನೆಯಲ್ಲಿ ಇಲ್ಲ ಎಂದು 2023ರ ಮಾರ್ಚ್ 14ರಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ನಾರಾಯಣ ಸ್ವಾಮಿ ಅವರೇ ಲೋಕಸಭೆಗೆ ತಿಳಿಸಿದ್ದರು. ಸರ್ಕಾರದ ಈ ನಿರ್ಧಾರ ಪ್ರಧಾನಿ ನರೇಂದ್ರಮೋದಿ ಅವರ ಗಮನಕ್ಕೆ ಬಂದಿರಲಿಲ್ಲವೇ?

ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದರೂ ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ವಿಫಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿಯವರು ಸ್ವಯಂ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಇವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ.

ಮುಸ್ಲಿಂ ಮೀಸಲಾತಿಯನ್ನು ವಿರೋಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬಗ್ಗೆ ಮೋದಿಯವರ ಆಪ್ತಮಿತ್ರ ಮತ್ತು ಬಿಜೆಪಿಯ ಹೊಸ ಸಂಗಾತಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ.

ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಿದ್ದೇ ನಾನು ಎಂದು ಕೊಚ್ಚಿಕೊಳ್ಳುತ್ತಿದ್ದ ದೇವೇಗೌಡರು ಈಗಲೂ ತಮ್ಮ ನಿಲುವಿಗೆ ಬದ್ಧರಾಗಿದ್ದಾರಾ? ಇಲ್ಲವೇ ನರೇಂದ್ರ ಮೋದಿಯವರಿಗೆ ಶರಣಾಗಿ ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿಕೊಳ್ಳುತ್ತರಾ? ಎಂಬುದನ್ನು ಅವರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಹೇಳಿದ್ದಾರೆ.

Karnataka CM Siddaramaiah defends 4% Muslim reservation for backward classes ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಗೆ ಶೇ.4ರಷ್ಟು ಮುಸ್ಲಿಂ ಮೀಸಲಾತಿ: ಸಿದ್ದರಾಮಯ್ಯ ಸಮರ್ಥನೆ
Share. Facebook Twitter LinkedIn WhatsApp Email

Related Posts

‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah

07/03/2026 3:01 PM1 Min Read

GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

07/03/2026 2:51 PM1 Min Read

ಬೆಳಗಾವಿಯಲ್ಲಿ ಅಂತಾರಾಜ್ಯ ಕಳ್ಳರ ಗ್ಯಾಂಗ್ ಅರೆಸ್ಟ್: 95 ಲಕ್ಷ ಮೌಲ್ಯದ 21 ವಾಹನ ಜಪ್ತಿ

07/03/2026 2:33 PM2 Mins Read
Recent News

ಮನೆಯಲ್ಲಿ ಬೆಲ್ಲದ ಶುದ್ಧತೆ ಪರಿಶೀಲಿಸುವುದು ಹೇಗೆ.? : ‘FSSAI’ ತಿಳಿಸಿದ ಸುಲಭ ಸಲಹೆ ಅನುಸರಿಸಿ!

07/03/2026 3:09 PM

‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah

07/03/2026 3:01 PM

GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

07/03/2026 2:51 PM

Government Scheme : ನಿಮ್ಮ ಹಣ ಡಬಲ್ ಮಾಡುವ ಈ ಯೋಜನೆಯ ಬಗ್ಗೆ ನಿಮ್ಗೆ ಗೊತ್ತಾ.?

07/03/2026 2:47 PM
State News
KARNATAKA

‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah

By kannadanewsnow0907/03/2026 3:01 PM KARNATAKA 1 Min Read

ಮೈಸೂರು: ಸತತ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿ ಸಿಎಂ ಸಿದ್ಧರಾಮಯ್ಯ ದಾಖಲೆ ಬರೆದಿದ್ದಾರೆ. ಇದರ ಬೆನ್ನಲ್ಲೇ ಅವರು ಮುಖ್ಯಮಂತ್ರಿ…

GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

07/03/2026 2:51 PM

ಬೆಳಗಾವಿಯಲ್ಲಿ ಅಂತಾರಾಜ್ಯ ಕಳ್ಳರ ಗ್ಯಾಂಗ್ ಅರೆಸ್ಟ್: 95 ಲಕ್ಷ ಮೌಲ್ಯದ 21 ವಾಹನ ಜಪ್ತಿ

07/03/2026 2:33 PM

BREAKING : ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ

07/03/2026 2:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.