Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ vs ಪಾಕ್ ಏಷ್ಯಾಕಪ್ ಪಂದ್ಯಕ್ಕೆ ಸುಪ್ರೀಂಕೋರ್ಟ್ ಅನುಮತಿ!

12/09/2025 6:39 AM

ಮೋಹನ್ ಭಾಗವತ್ ಗೆ ಮೋದಿ ಬರ್ತ್‌ಡೇ ಶುಭಾಶಯಗಳು, RSSಗೆ ಒಲೈಕೆ ಮಾಡುವ ಹತಾಶ ಪ್ರಯತ್ನ ಎಂದ ಕಾಂಗ್ರೆಸ್

12/09/2025 6:34 AM
vidhana soudha

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

12/09/2025 6:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ-2′ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
KARNATAKA

ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ-2′ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

By kannadanewsnow5729/04/2024 5:26 AM

ಬೆಂಗಳೂರು : ರಾಜ್ಯಾದ್ಯಂತ ಏಪ್ರಿಲ್ 29 ರ ಇಂದಿನಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ದಿನಾಂಕ 16.05.2024 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 02.15 ರಿಂದ ಸಂಜೆ 04.30 ರವರೆಗೆ ನಡೆಯಲಿದೆ.

ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ ಅವರು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಸೂಚನೆ ನೀಡಲಾಗಿದೆ.

ಈ ನಿಯಮಗಳ ಪಾಲನೆ ಕಡ್ಡಾಯ

1) ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ

2) ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ

3) ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.

4) ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ

5) ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ.

6) ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ

7) ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್‌ ಆರ್‌ ಟಿಸಿ ಬಸ್‌ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಏಪ್ರಿಲ್ 29 ರ ನಾಳೆಯಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ ಆರ್‌ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಪರೀಕ್ಷಾ ವೇಳಾಪಟ್ಟಿ ಇಲ್ಲಿದೆ
29-04-2024- ಕನ್ನಡ, ಅರೇಬಿಕ್
30-04-2024-ಇತಿಹಾಸ / ಭೌತಶಾಸ್ತ್ರ
02-05-2024-ಇಂಗ್ಲಿಷ್
03-05-2024-ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
04-05-2024-ಭೂಗೋಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹವಿಜ್ಞಾನ, ಮೂಲಗಣಿತ
09-05-2024-ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ
11-05-2024-ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
13-05-2024-ಅರ್ಥಶಾಸ್ತ್ರ
14-05-2024-ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
15-05-2024-ಹಿಂದಿ
16-05-2024-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್, ಫ್ರೆಂಚ್
16-05-2024-ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್‌ನೆಸ್‌ , ಆಟೋಮೊಬೈಲ್, ರೀಟೈಲ್

'II PUC Examination-2' to begin across the state from today: It is mandatory for students to follow this rule ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ-2' ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

12/09/2025 6:32 AM2 Mins Read

ರಾಜ್ಯದಲ್ಲಿ `JCB’ ಚಿಹ್ನೆ ಅಡಿ ಕರ್ನಾಟಕ ಹಿಂದೂ ಪಕ್ಷ ಕಟ್ಟುತ್ತೇನೆ : ಬಸವನಗೌಡ ಪಾಟೀಲ ಯತ್ನಾಳ್ ಘೋಷಣೆ

12/09/2025 6:27 AM1 Min Read

ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಇಂದು ಕೊನೆಯ ದಿನ

12/09/2025 6:20 AM1 Min Read
Recent News

ಭಾರತ vs ಪಾಕ್ ಏಷ್ಯಾಕಪ್ ಪಂದ್ಯಕ್ಕೆ ಸುಪ್ರೀಂಕೋರ್ಟ್ ಅನುಮತಿ!

12/09/2025 6:39 AM

ಮೋಹನ್ ಭಾಗವತ್ ಗೆ ಮೋದಿ ಬರ್ತ್‌ಡೇ ಶುಭಾಶಯಗಳು, RSSಗೆ ಒಲೈಕೆ ಮಾಡುವ ಹತಾಶ ಪ್ರಯತ್ನ ಎಂದ ಕಾಂಗ್ರೆಸ್

12/09/2025 6:34 AM
vidhana soudha

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

12/09/2025 6:32 AM

ರಾಜ್ಯದಲ್ಲಿ `JCB’ ಚಿಹ್ನೆ ಅಡಿ ಕರ್ನಾಟಕ ಹಿಂದೂ ಪಕ್ಷ ಕಟ್ಟುತ್ತೇನೆ : ಬಸವನಗೌಡ ಪಾಟೀಲ ಯತ್ನಾಳ್ ಘೋಷಣೆ

12/09/2025 6:27 AM
State News
vidhana soudha KARNATAKA

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

By kannadanewsnow5712/09/2025 6:32 AM KARNATAKA 2 Mins Read

ಬೆಂಗಳೂರು :ರಾಜ್ಯ ಹಾಗೂ ಜಿಲ್ಲಾಮಟ್ಟದ ಸರ್ಕಾರಿ ಕಾರ್ಯ ಕ್ರಮಗಳಲ್ಲಿ ಶಿಸ್ತು ತರುವ ಸಲುವಾಗಿ ವೇದಿಕೆ ಮೇಲೆ ಆಸೀನರಾಗುವ ಅತಿಥಿಗಳಿಗೆ ರಾಜ್ಯ…

ರಾಜ್ಯದಲ್ಲಿ `JCB’ ಚಿಹ್ನೆ ಅಡಿ ಕರ್ನಾಟಕ ಹಿಂದೂ ಪಕ್ಷ ಕಟ್ಟುತ್ತೇನೆ : ಬಸವನಗೌಡ ಪಾಟೀಲ ಯತ್ನಾಳ್ ಘೋಷಣೆ

12/09/2025 6:27 AM

ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಇಂದು ಕೊನೆಯ ದಿನ

12/09/2025 6:20 AM

ರಾಜ್ಯದಲ್ಲಿ 9 ತಿಂಗಳ ಬಳಿಕ `ನೇರ ನೇಮಕಾತಿ’ ಪುನಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

12/09/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.