Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏನಾದರೂ ನಡೆಯುತ್ತಿದೆಯೇ? : ರೆಡ್ ಫೋರ್ಟ್ ಕಾರು ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದ್ಲು ರೆಡ್ಡಿಟರ್ ಪೋಸ್ಟ್ ವೈರಲ್

11/11/2025 4:58 PM

BREAKING ; 12 ಜನರ ಸಾವಿಗೆ ಕಾರಣವಾದ ಇಸ್ಲಾಮಾಬಾದ್ ದಾಳಿ ಬಳಿಕ ಯುದ್ಧ ಘೋಷಿಸಿದ ಪಾಕಿಸ್ತಾನ

11/11/2025 4:26 PM

BREAKING : ಪಾಕಿಸ್ತಾನದ ವೇಗಿ ‘ನಸೀಮ್ ಶಾ’ ಮನೆಯ ಮೇಲೆ ಗುಂಡಿನ ದಾಳಿ, ಐವರು ಶಂಕಿತರ ಬಂಧನ

11/11/2025 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ನೇತೃತ್ವದ ‘NDA’ಗೆ ಸ್ಪಷ್ಟ ಬಹುಮತ ಬರುವುದಿಲ್ಲ: ಸಿಎಂ ಸಿದ್ಧರಾಮಯ್ಯ ಭವಿಷ್ಯ
KARNATAKA

ಬಿಜೆಪಿ ನೇತೃತ್ವದ ‘NDA’ಗೆ ಸ್ಪಷ್ಟ ಬಹುಮತ ಬರುವುದಿಲ್ಲ: ಸಿಎಂ ಸಿದ್ಧರಾಮಯ್ಯ ಭವಿಷ್ಯ

By kannadanewsnow0901/05/2024 10:06 PM

ಯಾದಗಿರಿ :  ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಏಕೆ ತುಂಬಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಅವರು ಇಂದು ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ಜಿ ಕುಮಾರ ನಾಯ್ಕ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ತುಂಬಲು ಏನು ಅಡ್ಡಿಯಾಗಿತ್ತು? ಅದನ್ನು ತುಂಬಿದ್ದರೆ ಸುಮಾರು 50% ಹಿಂದುಳಿದವರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಕೆಲಸ ದೊರಕುತ್ತಿತ್ತು. ಇನ್ನುಳಿದ 50% ಇತರರಿಗೆ ದೊರಕುತ್ತಿತ್ತು. ಈ ಖಾಲಿ ಹುದ್ದೆಗಳನ್ನು ಏಕೆ ತುಂಬಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು ದುಡ್ಡಿಲ್ಲ ಎನ್ನುವ ಮೋದಿ ಮತ್ತು ಬಿಜೆಪಿ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ದುಡ್ಡಿಲ್ಲದೇ ಹೋಗಿದ್ದರೆ 8 ತಿಂಗಳಲ್ಲಿ 5 ಗ್ಯಾರಂಟಿ ಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿತ್ತೇ? ವೇತನ ದೊರಕಿಲ್ಲ ಎಂದು ಸರ್ಕಾರಿ ನೌಕರರು ಹೇಳಿದ್ದಾರೆಯೇ ? ಎಂದು ಪ್ರಶ್ನಿಸಿದರು.

ಈ ಮೋದಿ ದೇಶದ ಪ್ರಧಾನಿಯಾಗಿ ಮಹಾನ್ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಇವರ ಸುಳ್ಳುಗಳನ್ನು ದೇಶದ ಜನ ಇನ್ನೂ ಎಷ್ಟು ವರ್ಷ ನಂಬಬೇಕು ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿ ಹತಾಶರಾಗಿದ್ದಾರೆ

ನರೇಂದ್ರ ಮೋದಿಯವರಿಗೆ ದೇಶದಲ್ಲಿ ನಡೆದಿರುವ 2 ಹಂತದ ಚುನಾವಣೆಗಳಲ್ಲಿ ಬಿಜೆಪಿ ನೇತೃತ್ವದ ಎನ್.ಡಿ. ಎ ಗೆ ಕಡಿಮೆ ಸ್ಥಾನಗಳು ಬರಲಿದೆ ಎನ್ನುವುದು ನರೇಂದ್ರ ಮೋದಿಯವರಿಗೆ ಸ್ಪಷ್ಟವಾಗಿ ಗೊತ್ತಾಗಿ ಹತಾಶರಾಗಿದ್ದಾರೆ. ಅದಕ್ಕೇ ಕರ್ನಾಟಕಕ್ಕೆ ಬಂದು ಬಾಯಿಗೆ ಬಂದಂತೆ ಮಾತನಾಡುತ್ತಾ, ಕೇವಲ ಸುಳ್ಳುಗಳನ್ನು ಹೇಳಿಕೊಂಡು ತಿರುಗುತ್ತಿದ್ದಾರೆ. ಕರ್ನಾಟಕದ ಖಜಾನೆ ಖಾಲಿಯಾಗಿದ್ದು ಸರ್ಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ ಎಂಬ ಹಸಿ ಹಸಿ ಸುಳ್ಳು ಹೇಳಿದ್ದಾರೆ ಎಂದರು.

ಗ್ಯಾರಂಟಿ ಗಳಿಂದ ಖಜಾನೆ ಖಾಲಿಯಾಗಿಲ್ಲ

ಗ್ಯಾರಂಟಿ ಯೋಜನೆ ಜಾರಿಯಾದ ನಂತರ ಖಜಾನೆ ಖಾಲಿಯಾಗಿಲ್ಲ. ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿಲ್ಲ. ಪ್ರಧಾನಿ ಗ್ಯಾರಂಟಿ ಬಗ್ಗೆ, ಗ್ಯಾರಂಟಿ ಯೋಜನೆಗಳ ಐದೂವರೆ ಕೋಟಿ ಫಲಾನುಭವಿಗಳನ್ನು ಅಪಹಾಸ್ಯ ಮಾಡಿ ಲಘುವಾಗಿ ಮಾತನಾಡಿದ್ದಾರೆ. ಮೊದಲೇ ಲೆಕ್ಕ ಹಾಕಿಯೇ ನಾವು ಘೋಷಣೆಗಳನ್ನು ಮಾಡಿದ್ದೇವೆ. ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗಾಗಿ 56000 ಕೋಟಿ ರೂಪಾಯಿ ವ್ಯಯವಾಗುತ್ತಿದ್ದು. ಈ ಬಾರಿ ಬಜೆಟ್ ನಲ್ಲಿ 52009 ರೂಪಾಯಿಗಳನ್ನು ಮೀಸಲಿರಿಸಿ ನಾವು ನುಡಿದಂತೆ ನಡೆದಿದ್ದೇವೆ. ಮೋದಿ ಭರವಸೆ ನೀಡಿದ್ದರಲ್ಲಿ ಎಷ್ಟನ್ನು ಈಡೇರಿಸಿದ್ದಾರೆ, ಹತ್ತು ವರ್ಷಗಳಲ್ಲಿ ಏನು ಸಾಧನೆ ಮಾಡಿದ್ದಾರೆ ಎಂದು ಜನರ ಮುಂದಿಡಬೇಕೆ ಹೊರತು ಜನರ ಮುಂದೆ ಸುಳ್ಳು ಹೇಳುವುದನ್ನು ಬಿಡಬೇಕು. ಈ ಸುಳ್ಳುಗಳಿಗೆ ಜನ ಬಿಜೆಪಿಗೆ ತಕ್ಕ ಪಾಠವನ್ನು ಚುನಾವಣೆಯಲ್ಲಿ ಕಲಿಸಲಿದ್ದಾರೆ ಎಂದರು.

ನರೇಂದ್ರ ಮೋದಿಯವರ ರಾಜಕೀಯ ಅಂತ್ಯ ಕಾಲವಿದು. 2014 ರಲ್ಲಿ ಅನೇಕ ಭರವಸೆಗಳನ್ನು ನೀಡಿದರು. ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಹೇಳಿದರು, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುಸಾಗಿ ಹೇಳಿ ನಾಮ‌ ಹಾಕಿದರು.

ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ, ಅಗತ್ಯ ವಸ್ತುಗಳ ಬೆಲೆ ಇಳಿಸಿ, ರೂಪಾಯಿ ಬೆಲೆ ಹೆಚ್ಚು ಮಾಡುವುದಾಗಿ ಮಾತು ಕೊಟ್ಟಿದ್ದರು.ಮೋದಿ ಭಾಷಣದ ಅಚ್ಚೇ ದಿನ್ ಭಾರತಕ್ಕೆ ಬರಲೇ ಇಲ್ಲ. ಒಂದೇ ಒಂದು ಭರವಸೆಯನ್ನೂ ಈಡೇರಿಸಿಲ್ಲ ಎಂದರು.

ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ

ಮೋದಿ ಆಡಳಿತದ ಹತ್ತು ವರ್ಷಗಳಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಜಾತಿ , ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ನಡೆದಿದೆ.

ಭಾರತೀಯರನ್ನು ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರ ಹೆಸರಿನಲ್ಲಿ ವಿಭಜಿಸಿ ಬೆಂಕಿ ಹಚ್ಚುವ ಬಿಜೆಪಿ ಕೃತ್ಯದ ವಿರುದ್ಧ, ಸಮಾಜವನ್ನು ಮಾನವೀಯವಾಗಿ ಬೆಸೆಯುವ ಕೆಲಸಕ್ಕೆ ರಾಹುಲ್ ಗಾಂಧಿ ಮುಂದಾದರು. ದೇಶದ ಐಕ್ಯತೆ ಮರು ಸ್ಥಾಪಿಸಲು, ಸಾರ್ವಭೌತ್ವವನ್ನು ಕಾಪಾಡಲು ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಮಣಿಪುರದಿಂದ ಮುಂಬೈವರೆಗೆ ಪಾದಯಾತ್ರೆ ಮಾಡಿದರು. ಸಮಾಜ ಬೆಸೆಯುವ ಕೆಲಸ ಮಾಡಿದರು. ಭಾರತ್ ಜೋಡೋ ಹೆಸರಿನಲ್ಲಿ ದೇಶದ ಜನರನ್ನು ಪ್ರೀತಿ ವಿಶ್ವಾಸದಿಂದ ಒಗ್ಗೂಡಿಸುವ ಪ್ರಯತ್ನ ಮಾಡಿದರು ಎಂದು ಶ್ಲಾಘಿಸಿದರು.

ಬಿಜೆಪಿ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿ ವಿರೋಧಿ

ಮೀಸಲಾತಿ ಪರವಾಗಿರುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್ ಪಕ್ಷ . ಬಿಜೆಪಿಯವರು ಎಲ್ಲ ಕಾಲದಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿಯ ವಿರೋಧವಾಗಿ ಕೆಲಸ ಮಾಡಿದ್ದಾರೆ. ಗ್ರಾಮಪಂಚಾಯತಿ, ನಗರಸಭೆ ಸೇರಿದಂತೆ ವಿವಿಧ ಸ್ತರಗಳಲ್ಲಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿಯವರು ವಿರೋಧಿಸಿದ್ದರು. ಬಿಜೆಪಿಯ ರಾಮ ಜೋಯಿಸ್ ಅವರು ಈ ಮೀಸಲಾತಿ ನೀಡಿಕೆಯನ್ನು ಸಂವಿಧಾನ ಬಾಹಿರ ಎಂದು ನ್ಯಾಯಾಲಯದಲ್ಕೇ ವಾದಿಸಿದ್ದ ಸಂಗತಿಯನ್ನು ಸ್ಮರಿಸಿದರು.

ಮುಸಲ್ಮಾನರಿಗೆ ಮೀಸಲಾತಿಯನ್ನು ಕಳೆದ 30 ವರ್ಷಗಳಿಂದ ನೀಡಲಾಗುತ್ತಿದೆ. ದಲಿತರಿಗೆ, ಹಿಂದುಳಿದವರಿಗೆ ನೀಡಲಾದ ಮೀಸಲಾತಿಯನ್ನು ರದ್ದುಪಡಿಸಿ ಮುಸಲ್ಮಾನರಿಗೆ ಕಾಂಗ್ರೆಸ್ ನೀಡಲಿದೆ ಎಂದು ಮೋದಿ ನಿರಂತರವಾಗಿ ಸುಳ್ಳು ಹೇಳುತ್ತಾ ಓಡಾಡುತ್ತಿದ್ದಾರೆ. ಈ ಸುಳ್ಳನ್ನು ನಂಬಬಾರದು ಎಂದು ಮನವಿ‌ ಮಾಡಿದರು.

ಕಳೆದ ಬಾರಿ ರಾಜ್ಯದಿಂದ ಆಯ್ಕೆಯಾದ 25 ಮಂದಿ ಬಿಜೆಪಿ ಸಂಸದರು ರಾಜ್ಯಕ್ಕಾದ ಅನ್ಯಾಯದ ವಿರುದ್ದ ಒಮ್ಮೆಯೂ ಧ್ವನಿ ಎತ್ತಲಿಲ್ಲ. ಇವರಿಗೆ ಈ ಬಾರಿ ತಕ್ಕ ಪಾಠ ಕಲಿಸಿ ಎಂದು ಕರೆ ನೀಡಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಶಾಸಕ ಚನ್ನಾರೆಡ್ಡಿ, ಸ್ಥಳೀಯ ಕಾಂಗ್ರೆಸ್ ಮುಖಂಡರು, ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

11/11/2025 3:57 PM2 Mins Read

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮ : ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ

11/11/2025 3:42 PM1 Min Read

BIG NEWS : ಬಿಹಾರ್ ಚುನಾವಣೆ ವೇಳೆಯೇ ದೆಹಲಿಯಲ್ಲಿ ಸ್ಪೋಟ : ಕೇಂದ್ರವೇ ತನಿಖೆ ನಡೆಸಲಿ ಎಂದ ಸಿಎಂ ಸಿದ್ದರಾಮಯ್ಯ

11/11/2025 3:18 PM1 Min Read
Recent News

ಏನಾದರೂ ನಡೆಯುತ್ತಿದೆಯೇ? : ರೆಡ್ ಫೋರ್ಟ್ ಕಾರು ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದ್ಲು ರೆಡ್ಡಿಟರ್ ಪೋಸ್ಟ್ ವೈರಲ್

11/11/2025 4:58 PM

BREAKING ; 12 ಜನರ ಸಾವಿಗೆ ಕಾರಣವಾದ ಇಸ್ಲಾಮಾಬಾದ್ ದಾಳಿ ಬಳಿಕ ಯುದ್ಧ ಘೋಷಿಸಿದ ಪಾಕಿಸ್ತಾನ

11/11/2025 4:26 PM

BREAKING : ಪಾಕಿಸ್ತಾನದ ವೇಗಿ ‘ನಸೀಮ್ ಶಾ’ ಮನೆಯ ಮೇಲೆ ಗುಂಡಿನ ದಾಳಿ, ಐವರು ಶಂಕಿತರ ಬಂಧನ

11/11/2025 4:20 PM

BREAKING : 2028ರ ಒಲಿಂಪಿಕ್ಸ್’ನಲ್ಲಿ ಸ್ಪರ್ಧಿಸದಂತೆ ಎಲ್ಲಾ ‘ಟ್ರಾನ್ಸ್ಜೆಂಡರ್ ಕ್ರೀಡಾಪಟು’ಗಳ ನಿಷೇಧಕ್ಕೆ ‘IOC’ ನಿರ್ಧಾರ

11/11/2025 4:03 PM
State News
KARNATAKA

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

By kannadanewsnow0911/11/2025 3:57 PM KARNATAKA 2 Mins Read

ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ…

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮ : ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ

11/11/2025 3:42 PM

BIG NEWS : ಬಿಹಾರ್ ಚುನಾವಣೆ ವೇಳೆಯೇ ದೆಹಲಿಯಲ್ಲಿ ಸ್ಪೋಟ : ಕೇಂದ್ರವೇ ತನಿಖೆ ನಡೆಸಲಿ ಎಂದ ಸಿಎಂ ಸಿದ್ದರಾಮಯ್ಯ

11/11/2025 3:18 PM

BIG NEWS: ‘ರಾಜ್ಯ ಸರ್ಕಾರ’ದ ಆದೇಶಕ್ಕೂ ಡೋಂಟ್ ಕೇರ್: ‘ಸಚಿವರ ಸಭೆ’ಯಲ್ಲೇ ‘ಪ್ಲಾಸ್ಟಿಕ್ ನೀರಿನ ಬಾಟಲ್’ ಬಳಕೆ

11/11/2025 2:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.