ಬಾಗಲಕೋಟೆ : ಲೋಕಸಭಾ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿಡಿ ಬಿಡಬಹುದು ಎಂಬ ರಾಜೂಗೌಡ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜುಗೌಡ ಒಬ್ಬ ಮೆಂಟಲ್ ಕೇಸ್ ಎಂದು ತಿರುಗೇಟು ನೀಡಿದರು.
ಬಾಗಲಕೋಟೆಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಯತೀಂದ್ರ ಅವರ ಯಾವುದಾದರೂ ಸಿಡಿ ಹೊರ ಬಂದರು ಬರಬಹುದು ಎಂದು ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಜುಗೌಡ ಹೇಳಿಕೆಯನ್ನು ನೀಡಿದರು ಇದಕ್ಕೆ ತಿಳಿಸಿದರು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಯನ್ನು ನೀಡಿದ್ದು, ಪ್ರಕರಣದ ತನಿಖೆಗೆ ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ.ಬಿಜೆಪಿಯವರು ಈಗ ಯಾಕೆ ಯಾರು ಮಾತನಾಡುತ್ತಿಲ್ಲ? ಸಿಟಿ ರವಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸದಾನಂದ ಗೌಡ, ಆರ್ ಅಶೋಕ್ ಎಲ್ಲಿ ಹೋದರು? ಎಂದರು.
ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆ ಎಂದು ಅವರೆಲ್ಲ ಹೇಳುತ್ತಾರೆ.ಈಗ ಮಹಿಳೆಯರಿಗೆ ಅನ್ಯಾಯ ಆಗಿದೆ ಈಗ ಯಾಕೆ ಮಾತನಾಡಿಲ್ಲ? ಸಂತ್ರಸ್ತ ಮಹಿಳೆಯರಿಗೆ ಧೈರ್ಯ ಹೇಳುವ ಕೆಲಸ ಮಾಡಲಿ ಎಂದು ಬಾಗಲಕೋಟೆಯಲ್ಲಿ ಡಿ ಸಂ ಡಿಕೆ ಶಿವಕುಮಾರ್ ತಿಳಿಸಿದರು.