Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

Viral Video: ವೈರಲ್ ರೀಲ್‌ಗಾಗಿ ಯುವಕನ ಹುಚ್ಚಾಟ್ಟ: ರೈಲು ಹಳಿಗಳ ಮೇಲೆ ಮಲಗಿದ ಹುಡುಗ; ವಿಡಿಯೋ ವೈರಲ್

06/07/2025 6:20 PM

ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿಯೇ, ಧರೆಗುರುಳಿದ ಬೃಹತ್ ಗಾತ್ರದ ಮರ : ಎಲೆಕ್ಟ್ರಿಕ್ ಕಾರು ಸಂಪೂರ್ಣ ಜಖಂ!

06/07/2025 6:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಿಂಗಲ್ ಡಿಜಿಟ್ ದಾಟುವುದಿಲ್ಲ- ಸಚಿವ ದಿನೇಶ್ ಗುಂಡೂರಾವ್
KARNATAKA

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಿಂಗಲ್ ಡಿಜಿಟ್ ದಾಟುವುದಿಲ್ಲ- ಸಚಿವ ದಿನೇಶ್ ಗುಂಡೂರಾವ್

By kannadanewsnow0905/05/2024 3:37 PM

ಹುಬ್ಬಳ್ಳಿ: ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಂತಹ ಸಂಸದರು ನಮ್ಮ ರಾಜ್ಯಕ್ಕೆ ಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಿಂದ ಆಯ್ಕೆಯಾಗಿದ್ದ ಬಹುತೇಕ ಬಿಜೆಪಿ ಸಂಸದರು ಕರ್ನಾಟಕವನ್ನ ಮರೆತಿದ್ದಾರೆ. ಅದರಲ್ಲೂ ಪ್ರಲ್ಹಾದ್ ಜೋಶಿಯವರು ಕೇಂದ್ರದಲ್ಲಿ ಸಚಿವರಾದ ಮೇಲೆ ಸಂಪೂರ್ಣವಾಗಿ ಕರ್ನಾಟಕವನ್ನ ಮರೆತಿದ್ದಾರೆ. ರಾಜ್ಯದ ಪರ ಕೇಂದ್ರ ಸರ್ಕಾರದಲ್ಲಿ ಧ್ವನಿ ಎತ್ತಿ ಕರ್ನಾಟಕಕ್ಕೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಇವರಿಗೆ ರಾಜಕೀಯ ಅಧಿಕಾರಕ್ಕೆ ಮಾತ್ರ ಕರ್ನಾಟಕ ಬೇಕು. ಗೆದ್ದಮೇಲೆ ಕೇಂದ್ರದಲ್ಲಿ ಮನಬಂದಂತೆ ವರ್ತಿಸುವ ಅಹಂ ನಲ್ಲಿ ಪ್ರಲ್ಹಾದ್ ಜೋಶಿಯವರಿದ್ದಾರೆ. ಕರ್ನಾಟಕಕ್ಕೆ ಜೋಶಿಯವರ ಕೊಡುಗೆ ಏನು. ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಒಂದು ಬಾರಿಯಾದರು ಕೇಂದ್ರ ಸರ್ಕಾರದಲ್ಲಿ ಧ್ವನಿ ಎತ್ತಿದ್ದಾರೆಯೇ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು‌. ಕೇಂದ್ರಕ್ಕೆ ಹೋದಮೇಲೆ ಅಹಂಕಾರದಲ್ಲಿ ಮೇರೆಯುವ ಬಿಜೆಪಿ ಸಂಸದರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನ ತಕ್ಕ ಪಾಠ ಕಲಿಸಲು ನಿಶ್ಚಯಿಸಿದ್ದಾರೆ ಎಂದರು.

ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಸಿಂಗಲ್ ಡಿಜಿಟ್ ದಾಟುವುದಿಲ್ಲ. ಕಾಂಗ್ರೆಸ್ ಗೆ ನಿರೀಕ್ಷೆ ಮೀರಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗ್ತಿದೆ. ಇದು ಸತ್ಯ ಹಾಗೂ ಸುಳ್ಳಿನ ನಡುವಿನ ಹೋರಾಟದ ಚುನಾವಣೆಯಾಗಿದೆ. ಪ್ರಧಾನಿ ಮೋದಿಯವರು ಚುನಾವಣೆಯಲ್ಲಿ ಸುಳ್ಳಿನ ಆಶ್ರಯ ಪಡೆದಿದ್ದಾರೆ. 10 ವರ್ಷದಲ್ಲಿ ತಾವು ಮಾಡಿದ ಕೆಲಸ ಕಾರ್ಯಗಳ ಬಗ್ಗೆ ಚುನಾವಣೆಯಲ್ಲಿ ಚರ್ಚೆ ಮಾಡಲಿಲ್ಲ. ಬದಲಿಗೆ ಸಮಾಜದಲ್ಲಿ ದ್ವೇಷ ಬಿತ್ತುವಂತಹ, ಸಮಾಜವನ್ನ ಒಡೆಯುವಂತಹ ಮಾತುಗಳನ್ನ ಆಡಿದ್ದಾರೆ. ಜನರಿಗೆ ಇವರ ಮೋಸದ ಮಾತುಗಳ ಅರಿವಾಗಿದೆ. ಬಡವರು, ಮಹಿಳೆಯರು, ಮಧ್ಯಮ ವರ್ಗದ ಪರ ಗ್ಯಾರಂಟಿ ಯೋಜನೆಗಳನ್ನ ನೀಡಿರುವ ಕಾಂಗ್ರೆಸ್ ಗೆ ಜನರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಲಿದೆ ಎಂದರು.

ದೇಶದ ಆರ್ಥಿಕ ಪರಸ್ಥಿತಿ ಬಗ್ಗೆ ಬಿಜೆಪಿ ಮಾತಾಡಬಹದು ಅಂದುಕೊಂಡಿದ್ದೇವು. ಸುಳ್ಳಿನ ಆಧಾರದ ಮೇಲೆ ದೇಶ ವಿಭಜನೆ ಮಾಡೋದು ಬಿಜೆಪಿ ಪ್ರಚಾರವಾಗಿದೆ. ಬಿಜೆಪಿ ಯಾವಾಗಲೂ ಮೀಸಲಾತಿ ವಿರೋಧಿ ಪಕ್ಷ. ಮಂಡಲ ಆಯೋಗ ರಚನೆಯಾದಾಗ ಅದರ ವಿರುದ್ದ ಇದ್ದವರು ಬಿಜೆಪಿ. RSS ಮತ್ತು ಬಿಜೆಪಿಯ ಆಂತರಿಕ ಅಜೇಂಡಾ ಸಂವಿಧಾನದ ವಿರೋಧಿಸುವುದು ಆಗಿದೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಬಿಜೆಪಿ ದೇಶದಲ್ಲಿ ಕೆಟ್ಟ ವಾತಾವರಣ ನಿರ್ಮಾಣ ಮಾಡಿದೆ. ಅವರು ಮಾಡದೆ ಒಂದು ಹೇಳೋದೆ ಒಂದು. ನೇಹಾ ಹತ್ಯೆ ಪ್ರಕರಣವನ್ನ ರಾಜಕೀಯಕ್ಕೆ ಬಳಸಿಕೊಂಡ್ರು. ಇವರು ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಕೊಟ್ಟಿದ್ದೀರಾ.? ಆರೋಪಿ ಬ್ರಿಜ್ ಭೂಷಣ್ ಅವರಿಗೆ ಬಿಜೆಪಿ ಸರ್ಕಾರ ಸಹಾಯ ಮಾಡಿದೆ. ಮಣಿಪುರ ಘಟನೆ ಬಗ್ಗೆ ಮೋದಿ ಮಾತನಾಡಲಿಲ್ಲ.

ಬಿಜೆಪಿ ಜನರ ವಿಶ್ವಾಸ ಗಳಿಸಿದ್ದರೆ ಕಾಶ್ಮೀರದಲ್ಲಿ ಏಕೆ ಅಭ್ಯರ್ಥಿಗಳನ್ನ ನಿಲ್ಲಿಸಲಿಲ್ಲ‌. ಬಿಜೆಪಿಯ ಸುಳ್ಳಿನ ಬಣ್ಣ ಬಯಲಾಗುತ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತೆ. ಉತ್ತರ ಕರ್ನಾಟಕ ಭಾಗದ ಅನೇಕ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೆವೆ. ಅಹಂಕಾರದಲ್ಲಿ ಪ್ರಹ್ಲಾದ ಜೋಶಿ ಇದ್ದರು, ಕರ್ನಾಟಕಕ್ಕೆ ಏನ್ ಮಾಡಿದ್ರಿ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇರುವ ಕಾಂಗ್ರೆಸ್ ಪಕ್ಷಕ್ಕೆ ನೀವು ವೋಟ್ ಹಾಕಬೇಕು. ಸುಳ್ಳುಗಳನ್ನ ನಿತ್ಯ ಹೇಳುವ ಬಿಜೆಪಿಯನ್ನ ಮನೆಗೆ ಕಳುಹಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಜನರಿಗೆ ಮನವಿ ಮಾಡಿದರು.

BREAKING: ದುಬೈನಿಂದ ಬೆಂಗಳೂರಿನತ್ತ ಸಂಸದ ಪ್ರಜ್ವಲ್ ರೇವಣ್ಣ ಆಗಮನ: ಇಂದೇ ಅರೆಸ್ಟ್ ಸಾಧ್ಯತೆ

‘ವುಹಾನ್’ ಲ್ಯಾಬ್ನಿಂದ ಕೋವಿಡ್ ಸೋರಿಕೆಯಾಗುವ ಸಾಧ್ಯತೆ ಹೆಚ್ಚು: ಯುಕೆಗೆ ಅಮೆರಿಕ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM1 Min Read

ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿಯೇ, ಧರೆಗುರುಳಿದ ಬೃಹತ್ ಗಾತ್ರದ ಮರ : ಎಲೆಕ್ಟ್ರಿಕ್ ಕಾರು ಸಂಪೂರ್ಣ ಜಖಂ!

06/07/2025 6:19 PM1 Min Read

D K ಶಿವಕುಮಾರ್ ಅವರ ಭಕ್ತಿ, ಶ್ರದ್ಧೆ ವರ್ಣಿಸಲು ಅಸಾಧ್ಯ: ರಂಭಾಪುರಿ ಶ್ರೀ

06/07/2025 6:13 PM3 Mins Read
Recent News

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

Viral Video: ವೈರಲ್ ರೀಲ್‌ಗಾಗಿ ಯುವಕನ ಹುಚ್ಚಾಟ್ಟ: ರೈಲು ಹಳಿಗಳ ಮೇಲೆ ಮಲಗಿದ ಹುಡುಗ; ವಿಡಿಯೋ ವೈರಲ್

06/07/2025 6:20 PM

ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿಯೇ, ಧರೆಗುರುಳಿದ ಬೃಹತ್ ಗಾತ್ರದ ಮರ : ಎಲೆಕ್ಟ್ರಿಕ್ ಕಾರು ಸಂಪೂರ್ಣ ಜಖಂ!

06/07/2025 6:19 PM

D K ಶಿವಕುಮಾರ್ ಅವರ ಭಕ್ತಿ, ಶ್ರದ್ಧೆ ವರ್ಣಿಸಲು ಅಸಾಧ್ಯ: ರಂಭಾಪುರಿ ಶ್ರೀ

06/07/2025 6:13 PM
State News
KARNATAKA

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

By kannadanewsnow0506/07/2025 6:26 PM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಘೋರವಾದ ಘಟನೆ ನಡೆದಿದ್ದು, ಕಾಡುಕೋಣೆ ದಾಳಿಗೆ 52 ವರ್ಷದ ವ್ಯಕ್ತಿ ಒಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ…

ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿಯೇ, ಧರೆಗುರುಳಿದ ಬೃಹತ್ ಗಾತ್ರದ ಮರ : ಎಲೆಕ್ಟ್ರಿಕ್ ಕಾರು ಸಂಪೂರ್ಣ ಜಖಂ!

06/07/2025 6:19 PM

D K ಶಿವಕುಮಾರ್ ಅವರ ಭಕ್ತಿ, ಶ್ರದ್ಧೆ ವರ್ಣಿಸಲು ಅಸಾಧ್ಯ: ರಂಭಾಪುರಿ ಶ್ರೀ

06/07/2025 6:13 PM

7-7-25 ನಾಳೆ, 777 ಅತ್ಯಂತ ಶಕ್ತಿಶಾಲಿ ಕಾಸ್ಮಿಕ್ ದಿನವಾಗಿದೆ.

06/07/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.