Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ನೋಡು ನೋಡ್ತಿದ್ದಂತೆ ಮಹಿಳೆಯನ್ನ ನದಿಗೆ ಎಳೆದೊಯ್ದ ಮೊಸಳೆ ; ಆಘಾತಕಾರಿ ವಿಡಿಯೋ ವೈರಲ್

07/10/2025 2:57 PM

BIG BREAKING: ಅ.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ಧರಾಮಯ್ಯ ಘೋಷಣೆ

07/10/2025 2:55 PM

BREAKING: ಅ.18ರವರೆಗೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ

07/10/2025 2:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್ ವೀಡಿಯೋ ಕೇಸ್: ‘H.D ಕುಮಾರಸ್ವಾಮಿ’ಗೆ ಈ ಸವಾಲು ಹಾಕಿದ ‘ಸಚಿವ ಕೃಷ್ಣಭೈರೇಗೌಡ’
KARNATAKA

ಪ್ರಜ್ವಲ್ ವೀಡಿಯೋ ಕೇಸ್: ‘H.D ಕುಮಾರಸ್ವಾಮಿ’ಗೆ ಈ ಸವಾಲು ಹಾಕಿದ ‘ಸಚಿವ ಕೃಷ್ಣಭೈರೇಗೌಡ’

By kannadanewsnow0908/05/2024 6:25 PM

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು ಕಾಂಗ್ರೆಸ್ ನ ಸಚಿವದ್ವಯರು ಸುದ್ದಿಗೋಷ್ಠಿ ನಡೆಸಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲೂ ಸಚಿವ ಕೃಷ್ಣಭೈರೇಗೌಡ ಅವರು, ಹೆಚ್.ಡಿ ಕುಮಾರಸ್ವಾಮಿಗೆ ನೇರವಾಗಿ ಸವಾಲೊಂದನ್ನು ಹಾಕಿದ್ದಾರೆ. ಆ ಬಗ್ಗೆ ಮುಂದೆ ಓದಿ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದರು.

ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು ಎಂದು ಎಚ್ಚರಿಸಿದರು.

ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ ಮಾನ, ಮನೆ, ಮಾಂಗಲ್ಯ ದೋಚಿದ್ದು ಅಪರಾಧ ಅಲ್ಲ, ಇದರ ವಿರುದ್ದ ಮಾತನಾಡಿದ್ದು ಅಪರಾಧವಾಗಿದೆ. ಮೂಲ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಸಂತ್ರಸ್ಥರ ಮಾನ ಹರಣವಾಗಿದೆ ಜೊತೆಗೆ ನ್ಯಾಯ ಹರಣ ಮಾಡಲಾಗುತ್ತಿದೆ ಎಂದರು.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲು ಹಾಕಿದ ಸಚಿವ ಕೃಷ್ಣಭೈರೇಗೌಡ

ಅಶ್ಲೀಲ ವೀಡಿಯೋ ಕೇಸ್: ಮಾನ, ಮನೆ, ಮಾಂಗಲ್ಯ ದೋಚಿದ್ದು ಅಪರಾಧವಲ್ಲ, ಇದರ ವಿರುದ್ಧ ಮಾತಾಡಿದ್ದು ಅಪರಾದವೇ? ಎಂದು ಪ್ರಶ್ನಿಸಿದರು.

ಮಹಿಳೆಯರ ಮಾನದ ಬಗ್ಗೆ ಮಾತನಾಡಬೇಕಾಗಿತ್ತು, ಆದರೆ ಬೇರೆಯದೆ ವಿಚಾರ ಚರ್ಚೆ ಆಗುತ್ತಿದೆ. ಪ್ರಕೃಣದ ಆರೋಪಿಯ ಬಳಿ ಕೆಲಸ ಮಾಡುತ್ತಿದ್ದವನು ಬಿಜೆಪಿ ನಾಯಕನಿಗೆ ಕೊಟ್ಟರು, ಆತನಿಗೆ ಸಾಕ್ಷಿ ಕೊಟ್ಟು ಒಂದು ವರ್ಷದ ಮೇಲಾಗಿದೆ. ಇದನ್ನು ತೆಗೆದುಕೊಂಡವನು ವಕೀಲ ನ್ಯಾಯದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವವನು ಏಕೆ ಇದನ್ನು ಮೊದಲೇ ಪೊಲೀಸರ ಗಮನಕ್ಕೆ ತರಲಿಲ್ಲ. ಆತ ಕೊಟ್ಟಿದಿದ್ದರೇ ಬೀದಿಯಲ್ಲಿ ಯಾರ ಮಾನವೂ ಹರಾಜಾಗುತ್ತಿರಲಿಲ್ಲ. ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಮುಖ್ಯನ್ಯಾಯಮೂರ್ತಿಗಳಿಗೆ ನೀಡಬಹುದಿತ್ತು. ಅಪರಾಧವನ್ನು ಮುಚ್ಚಿಟ್ಟಿರುವುದು ಕೂಡ ಅಷ್ಟೇ ಅಪರಾಧ ಎಂದರು.

ಇಂತಹ ಬ್ಲಾಕ್ ಮೇಲ್ ಮಾಡುವ ವ್ಯಕ್ತಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಚರ್ಚೆಮಾಡಿದವರು ಹಾಸನಾಂಭ ದೇವಸ್ಥಾನಕ್ಕೆ ಬಂದು ದೇವರ ಮೇಲೆ ಕೈಯಿಟ್ಟು ಚರ್ಚೆ ಮಾಡಲಿ. ಟಿಕೆಟ್ ತಪ್ಪಿಸಲು ಇದನ್ನು ಬಳಸಿಕೊಂಡರು. ನೂರಾರು ಮಹಿಳೆಯರ ಮಾನ ಹರಣ ಆಗಿರುವುದೇ ಇವರಿಂದ ಎಂದು ಗುಡುಗಿದರು.

ಬಿಜೆಪಿಯವರು ಇವರ ಬಳಿ ಇರುವ ಅಷ್ಟು ಮತಗಳನ್ನು ಹಾಕಿಸಿಕೊಂಡು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಶಿ, ಮೋದಿ ಅವರ ಹೇಳಿಕೆಗಳು ಇದೇ ರೀತಿ ಇವೆ. ಜೆಡಿಎಸ್ ವಿರುದ್ದ ಮಾತನಾಡಲು ಆಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ಮಾತನಾಡುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ನಡೆಸು ಎಂದು ಕಾಂಗ್ರೆಸ್ ಹೇಳಿತ್ತೇ?. ಅರವತ್ತು ವರ್ಷದ ಮಹಿಳೆಯನ್ನು ಅಪಹರಣ ಮಾಡಲು ಕಾಂಗ್ರೆಸ್ ಹೇಳಿತ್ತೇ? ಅಪಹರಣ ಮಾಡಿದ್ದೂ ಸುಳ್ಳು ಎಂದು ಹೇಳುತ್ತಾರೆ ಇವರು ಎಂದು ವಾಗ್ಧಾಳಿ ನಡೆಸಿದರು.

ಇವರುಗಳು ಏನೂ ಮಾಡಿದರೂ ನಡೆಯುತ್ತದೆ. ಕಾನೂನಿಗಿಂತ, ಸಂವಿಧಾನಕ್ಕಿಂತ ಮೇಲೆ ಎಂದುಕೊಂಡಿದ್ದಾರೆ. ಅವರ ಕುಟುಂಬದಲ್ಲಿಒಬ್ಬರಾದರೂ ಈ ಘಟನೆಯನ್ನು ಖಂಡಿಸಿಲ್ಲ. ಎಲ್ಲೂ ಇರುವ ಅವನನ್ನು ಕರೆಸಿ ಕಸ್ಟಡಿಗೆ ಒಳಗಾಗು ಎಂದು ಹೇಳಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಅಶ್ಲೀಲ ವೀಡಿಯೋ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಹೆಸರು ಎಳೆದು ತರಬೇಡಿ- ಸಚಿವ ರಾಮಲಿಂಗಾರೆಡ್ಡಿ

ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿ

Share. Facebook Twitter LinkedIn WhatsApp Email

Related Posts

BIG BREAKING: ಅ.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ಧರಾಮಯ್ಯ ಘೋಷಣೆ

07/10/2025 2:55 PM1 Min Read

BREAKING: ಅ.18ರವರೆಗೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ

07/10/2025 2:49 PM2 Mins Read

BREAKING: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತಷ್ಟು ಸಂಕಷ್ಟ: ಶೋ ಸ್ಥಗಿತಗೊಳಿಸಲು ಪ್ರತಿಭಟನೆ

07/10/2025 2:13 PM1 Min Read
Recent News

SHOCKING : ನೋಡು ನೋಡ್ತಿದ್ದಂತೆ ಮಹಿಳೆಯನ್ನ ನದಿಗೆ ಎಳೆದೊಯ್ದ ಮೊಸಳೆ ; ಆಘಾತಕಾರಿ ವಿಡಿಯೋ ವೈರಲ್

07/10/2025 2:57 PM

BIG BREAKING: ಅ.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ಧರಾಮಯ್ಯ ಘೋಷಣೆ

07/10/2025 2:55 PM

BREAKING: ಅ.18ರವರೆಗೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ

07/10/2025 2:49 PM

BREAKING : ‘ಕೋಲ್ಡ್ರಿಫ್ ತಯಾರಕ ಕಂಪನಿ’ಗೆ ಸರ್ಕಾರದಿಂದ ಶೋಕಾಸ್ ನೋಟಿಸ್, ಔಷಧದ ‘ಫಾರ್ಮುಲಾ’ ಒದಗಿಸಲು ಸೂಚನೆ

07/10/2025 2:30 PM
State News
KARNATAKA

BIG BREAKING: ಅ.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0907/10/2025 2:55 PM KARNATAKA 1 Min Read

ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ…

BREAKING: ಅ.18ರವರೆಗೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ

07/10/2025 2:49 PM

BREAKING: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತಷ್ಟು ಸಂಕಷ್ಟ: ಶೋ ಸ್ಥಗಿತಗೊಳಿಸಲು ಪ್ರತಿಭಟನೆ

07/10/2025 2:13 PM

ಕುರುಬ ಸಮುದಾಯವನ್ನು ‘ST’ಗೆ ಸೇರ್ಪಡೆ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?

07/10/2025 1:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.