Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಓದುವ ಕನ್ನಡಕಕ್ಕೆ ವಿದಾಯ? ದೃಷ್ಟಿಯನ್ನು ಪುನಃಸ್ಥಾಪಿಸುವ ‘ಐ ಡ್ರಾಪ್’ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು

16/09/2025 10:57 AM
Swastha Nari Sashakta Parivar Abhiyan

ದೇಶದ ಮಹಿಳೆಯರಿಗೆ ಗುಡ್‌ನ್ಯೂಸ್‌: ಇಂದು ‘ಸ್ವಸ್ಥ ನಾರಿ’ ಸಶಕ್ತ ಪರಿವಾರ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ…!

16/09/2025 10:54 AM

ಬಿಜೆಪಿ ನಾಯಕನ ಅಶ್ಲೀಲ ವಿಡಿಯೋ ವೈರಲ್ : ಪಕ್ಷದಿಂದ ಉಚ್ಚಾಟನೆ

16/09/2025 10:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇವೇಗೌಡರು CBI ಅನ್ನು ಚೋರ್‌ ಬಚಾವೋ ಸಂಸ್ಥೆ ಎಂದು ಕರೆದಿದ್ದರು : ಸಿಎಂ ಸಿದ್ದರಾಮಯ್ಯ
KARNATAKA

ದೇವೇಗೌಡರು CBI ಅನ್ನು ಚೋರ್‌ ಬಚಾವೋ ಸಂಸ್ಥೆ ಎಂದು ಕರೆದಿದ್ದರು : ಸಿಎಂ ಸಿದ್ದರಾಮಯ್ಯ

By kannadanewsnow0710/05/2024 12:59 PM

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.

ಹಿಂದೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದು ವಿವರಿಸಿದರು.

ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲಗಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ನಂಬಿಕೆ ಇದೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ. ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ನಮ್ಮ ಪೊಲೀಸರ ಮೇಲೆ ನಂಬಿಕೆ ಇಟ್ಟಿರಬೇಕಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಂಬಬೇಕಲ್ಲವೆ ಎಂದು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌ ಆಗಲೀ, ಯಾರೂ ಭಾಗಿಯಾಗಿಲ್ಲ ಎಂದು ಸ್ಪಷ್ಟ ಪಡಿಸಿದ ಮುಖ್ಯಮಂತ್ರಿಗಳು, ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದು ತಿಳಿಸಿದರು.

ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ
ರೇವಣ್ಣ ಅವರ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅವರ ಮೇಲಿನ ಆರೋಪದಲ್ಲಿ ಹುರುಳೇ ಇಲ್ಲದಿದ್ದರೆ ನಿರೀಕ್ಷಣಾ ಜಾಮೀನು ಕೋರಿದ್ದೇಕೆ? ನಿರೀಕ್ಷಣಾ ಜಾಮೀನು ಅರ್ಜಿ ಯಾಕೆ ತಿರಸ್ಕೃತವಾಯಿತು ಎಂದು ಪ್ರಶ್ನಿಸಿದರು.

Deve Gowda called CBI 'Chor Bachao Sanstha': Siddaramaiah
Share. Facebook Twitter LinkedIn WhatsApp Email

Related Posts

ಜಸ್ಟ್ 5 ರೂಪಾಯಿ ಖರ್ಚಿನಿಂದ ಮನೆಯಲ್ಲಿರುವ ಇಲಿ ಓಡಿಸಬಹುದು : ಇಲ್ಲಿದೆ ಟ್ರಿಕ್ಸ್

16/09/2025 10:46 AM2 Mins Read
vidhana soudha

ಇನ್ಮುಂದೆ YouTube ಚಾನಲ್ ಗಳ ಆರಂಭಕ್ಕೆ ಲೈಸೆನ್ಸ್‌ ಕಡ್ಡಾಯ: ರಾಜ್ಯ ಸರ್ಕಾರದಿಂದ ಶೀಘ್ರ ಕಾನೂನು!?

16/09/2025 10:44 AM1 Min Read

ರಾಜ್ಯಾದ್ಯಂತ ಕೌನ್ಸಿಲಿಂಗ್ ಮೂಲಕ 1,571 `PDO’ಗಳ ವರ್ಗಾವಣೆ | PDO transfer

16/09/2025 10:41 AM1 Min Read
Recent News

ಓದುವ ಕನ್ನಡಕಕ್ಕೆ ವಿದಾಯ? ದೃಷ್ಟಿಯನ್ನು ಪುನಃಸ್ಥಾಪಿಸುವ ‘ಐ ಡ್ರಾಪ್’ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು

16/09/2025 10:57 AM
Swastha Nari Sashakta Parivar Abhiyan

ದೇಶದ ಮಹಿಳೆಯರಿಗೆ ಗುಡ್‌ನ್ಯೂಸ್‌: ಇಂದು ‘ಸ್ವಸ್ಥ ನಾರಿ’ ಸಶಕ್ತ ಪರಿವಾರ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ…!

16/09/2025 10:54 AM

ಬಿಜೆಪಿ ನಾಯಕನ ಅಶ್ಲೀಲ ವಿಡಿಯೋ ವೈರಲ್ : ಪಕ್ಷದಿಂದ ಉಚ್ಚಾಟನೆ

16/09/2025 10:53 AM

ಜಸ್ಟ್ 5 ರೂಪಾಯಿ ಖರ್ಚಿನಿಂದ ಮನೆಯಲ್ಲಿರುವ ಇಲಿ ಓಡಿಸಬಹುದು : ಇಲ್ಲಿದೆ ಟ್ರಿಕ್ಸ್

16/09/2025 10:46 AM
State News
KARNATAKA

ಜಸ್ಟ್ 5 ರೂಪಾಯಿ ಖರ್ಚಿನಿಂದ ಮನೆಯಲ್ಲಿರುವ ಇಲಿ ಓಡಿಸಬಹುದು : ಇಲ್ಲಿದೆ ಟ್ರಿಕ್ಸ್

By kannadanewsnow5716/09/2025 10:46 AM KARNATAKA 2 Mins Read

ಮನೆಯ ಮೂಲೆಯನ್ನು 2-3 ವಾರಗಳ ಕಾಲ ಸ್ವಚ್ಛಗೊಳಿಸದಿದ್ದರೆ, ಅಲ್ಲಿ ಇಲಿಗಳ ಭಯ ಕಾಣಿಸಿಕೊಳ್ಳಬಹುದು. ಅವುಗಳನ್ನು ಮನೆಗಳಿಂದ ಓಡಿಸಲು ಇಲ್ಲಿದೆ ಸುಲಭ…

vidhana soudha

ಇನ್ಮುಂದೆ YouTube ಚಾನಲ್ ಗಳ ಆರಂಭಕ್ಕೆ ಲೈಸೆನ್ಸ್‌ ಕಡ್ಡಾಯ: ರಾಜ್ಯ ಸರ್ಕಾರದಿಂದ ಶೀಘ್ರ ಕಾನೂನು!?

16/09/2025 10:44 AM

ರಾಜ್ಯಾದ್ಯಂತ ಕೌನ್ಸಿಲಿಂಗ್ ಮೂಲಕ 1,571 `PDO’ಗಳ ವರ್ಗಾವಣೆ | PDO transfer

16/09/2025 10:41 AM

ಶಿವಮೊಗ್ಗ: ಸಾಗರ ತಾಲ್ಲೂಕು ಪಂಚಾಯ್ತಿ ಇಓ ಗುರುಕೃಷ್ಣ ಶಣೈ ಎತ್ತಂಗಡಿ

16/09/2025 9:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.