ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅದೇ ಪೆನ್ ಡ್ರೈವ್ ವೈರಲ್ ಮಾಡಿದಂತ ಆರೋಪಿಗಳಾದಂತ ಚೇತನ್, ಲಿಖಿತ್ ಹೆಸರಿನ ಇಬ್ಬರು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಪೆನ್ ಡ್ರೈವ್ ಹಂಚಿಕೆ ಆರೋಪ ಎದುರಿಸುತ್ತಿರೋ ನವೀನ್ ಗೌಡ ಎಂಬಾತ ನನಗೆ ದಾರಿಯಲ್ಲಿ ಸಿಕ್ಕಿದ್ದಂತ ಪೆನ್ ಡ್ರೈವ್ ಅನ್ನು ಎ ಮಂಜುಗೆ ಕೊಟ್ಟಿದ್ದೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಕುರಿತಂತೆ ಫೆಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವಂತ ನವೀನ್ ಗೌಡ, ಏಪ್ರಿಲ್ 20ರಂದು ನನಗೆ ರಸ್ತೆಯಲ್ಲಿ ಸಿಕ್ಕಿದ್ದಂತ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕರಾದಂತ ಎ ಮಂಜು ಅವರಿಗೆ ಏಪ್ರಿಲ್.21ರಂದು ನೀಡಿದ್ದೇನೆ. ಏಪ್ರಿಲ್.21ರಂದು ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ ಎಂದಿದ್ದಾರೆ.
ಇನ್ನೂ ಮುಂದುವರೆದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದ ಹಾಗೆ ವೀಡಿಯೋ ವೈರಲ್ ಹಿಂದೆ ಇರುವ ಮಹಾ ನಾಯಕ ಅರಕಲಗೂಡು ಶಾಸಕರೇ ಆಗಿರಬಹುದು ಎಂಬುದಾಗಿ ತಿಳಿಸಿದ್ದಾರೆ.
ಜೆಡಿಎಸ್ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಆದರೆ ಯಾರಿಂದಲೂ ಅದು ಸಾಧ್ಯವಿಲ್ಲ : ಶಾಸಕ ಎ.ಮಂಜು ಹೇಳಿಕೆ