ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿಯಲ್ಲಿ ಉದ್ಘಾಟಿಸಿದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಎಎನ್ಐಗೆ ನೀಡಿದ ಸಂದರ್ಶನದಲ್ಲಿ, ಇದು ಮುಂಬೈನ ಸಾರಿಗೆ ಜಾಲಕ್ಕೆ ಗೇಮ್ ಚೇಂಜರ್ ಆಗಿದೆ ಎಂದು ಅವರು ಹೇಳಿದರು. ಪ್ರಧಾನಿಯನ್ನು ಶ್ಲಾಘಿಸಿದ ಅವರು ‘ಭಾರತ ಎಲ್ಲಿಯೂ ನಿಲ್ಲುವುದಿಲ್ಲ’ ಎಂದು ಹೇಳಿದರು.
ಅಟಲ್ ಸೇತು ಬಗ್ಗೆ ಮಾತನಾಡಿದ ರಶ್ಮಿಕಾ, “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಇದು ನನಗೆ ಹೆಮ್ಮೆ ತಂದಿದೆ ಅಂಥ ಹೇಳಿದರು.