Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ

01/09/2025 10:18 PM

‘ಜನರನ್ನು ಮೋಸಗೊಳಿಸಲು ಗೊತ್ತಿದವನು ಅತ್ಯುತ್ತಮ ನಾಯಕನಾಗ್ಬೋದು’ : ಸಚಿವ ಗಡ್ಕರಿ

01/09/2025 10:14 PM

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `SSLC’ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ‘ವಿಶೇಷ ಪರಿಹಾರ ಬೋಧನೆ’ ತರಗತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ
KARNATAKA

`SSLC’ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ‘ವಿಶೇಷ ಪರಿಹಾರ ಬೋಧನೆ’ ತರಗತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5716/05/2024 5:51 AM

ಬೆಂಗಳೂರು : 2024ರಎಸ್. ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಿನಾಂಕ: 07.06.2024 ರಿಂದ ನಡೆಯುವ ಎಸ್. ಎಸ್.ಎಲ್.ಸಿ.ಪರೀಕ್ಷೆ-2 ರಲ್ಲಿ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಕುರಿತು ಉಲ್ಲೇಖದಂತೆ ದಿನಾಂಕ: 13.05.2024 ರಂದು ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ತಿಳಿಸಿದಂತೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಎಸ್. ಎಸ್.ಎಲ್.ಸಿ.ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ನಡೆಸುವುದು.

ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ.

1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಸ್. ಎಸ್.ಎಲ್.ಸಿ. ಪರೀಕ್ಷೆ-2 ತೆಗೆದುಕೊಳ್ಳಲು ಕಡ್ಡಾಯವಾಗಿ ನೊಂದಾಯಿಸಲು ಕ್ರಮವಹಿಸುವುದು.

2. ಸರ್ಕಾರಿ/ಅನುದಾನಿತ ಶಾಲೆಯಲ್ಲಿ ಆಯಾ ಶಾಲೆಗಳಲ್ಲಿ ಯಾವುದೇ ಒಂದು ವಿಷಯದಲ್ಲಿ ಕನಿಷ್ಠ 10 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಲ್ಲಿ ಅದೇ ಶಾಲೆಯಲ್ಲಿ ಅದೇ ಶಾಲೆಯ ವಿಷಯ ಭೋಧಕ ಶಿಕ್ಷಕರಿಂದ ವಿಶೇಷ ತರಗತಿಗಳನ್ನು ನಡೆಸುವುದು. ಒಂದು ವೇಳೆ ಆಯಾ ಶಾಲೆಗಳಲ್ಲಿ ವಿಷಯವಾರು ಅನುತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 10 ಕ್ಕಿಂತ ಕಡಿಮೆ ಇದ್ದಲ್ಲಿ ಸಮೀಪದ ಶಾಲೆಗೆ ಟ್ಯಾಗ್ ಮಾಡುವುದು. ಕೇಂದ್ರಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗುರುತಿಸುವುದು.

3. ಕೇಂದ್ರಗಳಿರುವ ಶಾಲೆಗಳ ಮುಖ್ಯ ಶಿಕ್ಷಕರು ಅರ್ಹ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳ ವೇಳಾಪಟ್ಟಿಯನ್ನು ಸಿದ್ಧಪಡಿಸುವುದು.

4. ಕೇಂದ್ರಗಳಾಗಿ ಗುರುತಿಸುವ ಶಾಲೆಗಳ ಮುಖ್ಯ ಶಿಕ್ಷಕರು ವಿಶೇಷ ತರಗತಿಗಳನ್ನು ನಡೆಸಲು ಎಲ್ಲಾ ಅಗತ್ಯ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದು.

5. ಹಾಜರಾಗುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಊಟದ ವ್ಯವಸ್ಥೆಯನ್ನು ಮುಖ್ಯ ಶಿಕ್ಷಕರು ಮಾಡುವುದು. ಈ ಕುರಿತು ನಿರ್ದೇಶಕರು, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್, ಇವರು ನೀಡುವ ನಿರ್ದೇಶನಗಳಂತೆ ಕ್ರಮವಹಿಸುವುದು.

6. ದಿನಾಂಕ: 15.05.2024 ರಿಂದ ದಿನಾಂಕ: 05.06.2024ರವರೆಗೆ ರಜಾ ದಿನಗಳನ್ನೂ ಒಳಗೊಂಡಂತೆ ವಿಶೇಷ ತರಗತಿಗಳನ್ನು ನಡೆಸಿ ಪ್ರಕ್ರಿಯೆ ಪೂರ್ಣಗೊಳಿಸುವುದು.

7. ಗುರುತಿಸಿದ ಕೇಂದ್ರಗಳಲ್ಲಿ ಬೋಧನೆಗೆ ಪ್ರತಿ ಕೇಂದ್ರಕ್ಕೆ ಒಂದು ವಿಷಯಕ್ಕೆ ಒಬ್ಬರು ಶಿಕ್ಷಕರಂತೆ ಸದರಿ ಕೇಂದ್ರಕ್ಕೆ ಜೋಡಿಸಿದ ಶಾಲೆಗಳ ವಿಷಯ ಶಿಕ್ಷಕರನ್ನು ಬಳಿಸಿಕೊಳ್ಳುವುದು. ಒಂದು ವೇಳೆ ಗುರುತಿಸಿದ ಕೇಂದ್ರದಲ್ಲಿ ವಿಷಯ ಶಿಕ್ಷಕರ ಕೊರತೆ ಆದರೆ ಸಮೀಪದ ಇತರೆ ಸರ್ಕಾರಿ/ಅನುದಾನಿತ ಶಾಲೆಯ ಅನುದಾನಿತ ಶಿಕ್ಷಕರನ್ನು ನಿಯೋಜನೆಗೊಳಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸುವುದು. ಒಂದು ವೇಳೆ ಆಯಾ ತಾಲ್ಲೂಕಿನಲ್ಲಿ ಯಾವುದೇ ಸರ್ಕಾರಿ ಅನುದಾನಿತ ಶಾಲಾ ವಿಷಯ ಶಿಕ್ಷಕರು ಲಭ್ಯವಾಗದೆ ಇರುವ ಸಂಧರ್ಭದಲ್ಲಿ ಅತಿಥಿ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳುವುದು.

8. ವಿಶೇಷ ಪರಿಹಾರ ಬೋಧನಾ ತರಗತಿಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ರಲ್ಲಿ ಯಶಸ್ವಿಯಾಗಲು ಸಾಧ್ಯವಾಗುವಂತೆ ಆಯಾ ಜಿಲ್ಲೆಯ ವಿಷಯ ಶಿಕ್ಷಕರು ನಿರ್ಮಿಸಿರುವ “ಪಾಸಿಂಗ್ ಪ್ಯಾಕೇಜ್ ಬಳಸಿಕೊಂಡು ಸದರಿ ವಿದ್ಯಾರ್ಥಿಗಳು ಉತ್ತೀರ್ಣರಾಗಲು ತಯಾರಿಗೊಳಿಸುವಲ್ಲಿ ಆಧ್ಯತೆ ನೀಡುವುದು ಹಾಗೂ ಕಲ್ಬುರ್ಗಿ ವಿಭಾಗದ ವಿಷಯ ಶಿಕ್ಷಕರು ನಿರ್ಮಿಸಿರುವ ಕಲಿಕಾ ಸೆರೆ ಪುಸ್ತಕಗಳನ್ನೂ ಸಹ ಬಳಸಿಕೊಳ್ಳಬಹುದು. ಪ್ರತಿ ದಿನ ವಿದ್ಯಾರ್ಥಿಗಳಿಗೆ ಬೋಧನೆಯ ಜೊತೆಗೆ ಅವರ ಬರವಣಿಗೆ ರೂಢಿ ಮಾಡಿಸುವುದು, ವಿದ್ಯಾರ್ಥಿಗಳ ಬರವಣಿಗೆ ಕಾರ್ಯವನ್ನು ಶಿಕ್ಷಕರು ಆ ದಿನವೇ ಪರಿಶೀಲಿಸಿ ಅವರಿಗೆ ಹಿಮ್ಮಾಹಿತಿ ಮತ್ತು ಪರಿಹಾರ ನೀಡಿ ಅಂಧವಾದ ಬರವಣಿಗೆ ರೂಢಿ ಮಾಡಿಸುವುದು.

9. 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1 ರಲ್ಲಿ c. c+, ಶ್ರೇಣಿ ಪಡೆದ ವಿದ್ಯಾರ್ಥಿಗಳು ಅವರ ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆ-2ನ್ನು ಬರೆಯಲು ನೊಂದಾಯಿಸಲು ಕ್ರಮವಹಿಸುವುದು ಹಾಗೂ ವಿಶೇಷ ಪರಿಹಾರ ಬೋಧನೆ ತರಗತಿಗೆ ಹಾಜರಾಗಲು ಅವರಿಗೂ ಅವಕಾಶ ಕಲ್ಪಿಸುವುದು.

10. ಆಯಾ ಶಾಲೆಯ ವಿಶೇಷ ತರಗತಿಗಳ ವೇಳಾ ಪಟ್ಟಿಯನ್ನು ಅಯಾ ಜಿಲ್ಲೆಗಳಲ್ಲಿ ಪ್ರಚಲಿತವಿರುವ ಶಾಲಾ ಸಮಯಕ್ಕೆ ಅನುಗುಣವಾಗಿ ವೇಳಾಪಟ್ಟಿಯನ್ನು ತಯಾರಿಸುವುದು.

11. ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಕೇಂದ್ರದ ಮುಖ್ಯ ಶಿಕ್ಷಕರು ಹಾಗೂ ವಿಷಯ ಶಿಕ್ಷಕರು ಧನಾತ್ಮಕವಾಗಿ ಪ್ರೇರೇಪಿಸಿ ಅವರು ವಿಶೇಷ ತರಗತಿಗಳಿಗೆ ಹಾಜರಾಗಲು ಹಾಗೂ ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ಕ್ರಮವಹಿಸುವುದು.

12. ಕೇಂದ್ರಗಳನ್ನು ಗುರುತಿಸಿರುವ ಬಗ್ಗೆ ನಮೂನೆ-1 ಮತ್ತು 2 ರಲ್ಲಿ ಮಾಹಿತಿ ನೀಡುವುದು. ಹಾಗೂ ವಿದ್ಯಾರ್ಥಿಗಳ ದಾಖಲಾತಿ/ಹಾಜರಾತಿ ಮಾಹಿತಿಯನ್ನು ನಮೂನೆ-3 ರಲ್ಲಿ ದಿನನಿತ್ಯದ ಕ್ರೋಢೀಕೃತ ಮಾಹಿತಿಯನ್ನು ಉಪನಿರ್ದೇಶಕರು ಪ್ರತಿದಿನ 3.00 ಗಂಟೆ ಒಳಗೆ ಕೇಂದ್ರ ಕಛೇರಿ ಮೇಲ್ est4cpibng@gmail.com ಗೆ ಸಹಿ ಮಾಡಿದ ಪ್ರತಿಯೊಂದಿಗೆ ಕಳುಹಿಸಲು ತಿಳಿಸಿದೆ.

13. ಸರ್ಕಾರಿ ಹಾಗೂ ಅನುದಾನಿತ ಶಾಲಾ ಅನುದಾನಿತ ಶಿಕ್ಷಕರು ವಿಶೇಷ ಪರಿಹಾರ ಬೋಧನಾ ತರಗತಿಗಳಿಗೆ ಹಾಜರಾಗಿ ಬೇಸಿಗೆ ರಜಾ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೆ.ಸಿ.ಎಸ್.ಆರ್. ನಿಯಮಾವಳಿ ಪ್ರಕಾರ ಗಳಿಕೆ ರಜೆಯನ್ನು ಮಂಜೂರು ಮಾಡುವುದು.

14. ಸರ್ಕಾರಿ/ಅನುದಾನಿತ ಶಾಲೆಯ ವಿದ್ಯಾರ್ಥಿಗಳು ಯಾವುದೇ ವಿದ್ಯಾರ್ಥಿ ನಿಲಯಗಳಲ್ಲಿ 10ನೇ ತರಗತಿ ಅಭ್ಯಾಸ ಮಾಡಿದ್ದು ಅನುತ್ತೀರ್ಣರಾಗಿದ್ದಲ್ಲಿ ಹಾಗೂ ಈ ವಿದ್ಯಾರ್ಥಿಗಳು ಪ್ರಸ್ತುತ ತಮ್ಮ ಸ್ವಂತ ಸ್ಥಳದಲ್ಲಿ ವಾಸವಾಗಿದ್ದಲ್ಲಿ ಸ್ವಂತ ಸ್ಥಳದ ಸಮೀಪದಲ್ಲಿರುವ ಕೇಂದ್ರದಲ್ಲಿ ಈ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರು ಕ್ರಮವಹಿಸುವುದು.

15. ತಾಲ್ಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಅವರ ತಂಡದವರು ಸದರಿ ಕಾರ್ಯಕ್ರಮದ ಸಂಪೂರ್ಣ ಮೇಲುಸ್ತುವಾರಿ ನಿರ್ವಹಿಸುವುದು.
16. ಜಿಲ್ಲಾ ಹಂತದಲ್ಲಿ ಎಸ್. ಎಸ್.ಎಲ್.ಸಿ. ನೋಡಲ್ ಅಧಿಕಾರಿಗಳು ಡಯಟ್ ಉಪನ್ಯಾಸಕರು ಹಾಗೂ

ವಿಷಯ ಪರಿವೀಕ್ಷಕರುಗಳನ್ನು ತಾಲ್ಲೂಕುವಾರು ನೋಡಲ್ ಅಧಿಕಾರಿಯಾಗಿ ನಿಯುಕ್ತಿಗೊಳಿಸುವುದು.

17. ಉಪನಿರ್ದೇಶಕರು ಹಾಗೂ ಡಯಟ್ ಪ್ರಾಂಶುಪಾಲರು ಜಿಲ್ಲಾ ಹಂತದಲ್ಲಿ ಇಡೀ ಕಾರ್ಯಕ್ರಮದ ಸಂಪೂರ್ಣ ಮೇಲುಸ್ತುವಾರಿ ಮಾಡುವುದು.

18. ಜಿಲ್ಲಾ ನೋಡಲ್ ಅಧಿಕಾರಿಗಳು ತಮಗೆ ನಿಯೋಜಿಸಲ್ಪಟ್ಟಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಹಾರ ಬೋಧನಾ ಚಟುವಟಿಕೆಗಳನ್ನು ಅವಲೋಕಿಸಿ ಸಮಗ್ರ ವರದಿ ನೀಡುವುದು.

ವಿಶೇಷ ಸೂಚನೆ:- ಅನುದಾನ ರಹಿತ ಶಾಲೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ. ಫಲಿತಾಂಶ ಸುಧಾರಣೆಗೆ ವಿದ್ಯಾರ್ಥಿಗಳನ್ನು ನೊಂದಾಯಿಸಿ ಆಯಾ ಅನುದಾನ ರಹಿತ ಶಾಲೆಗಳಲ್ಲಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ನಡೆಸಲು ಆಡಳಿತ ಮಂಡಳಿಯೇ ಕ್ರಮವಹಿಸುವುದು.

`SSLC' ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ‘ವಿಶೇಷ ಪರಿಹಾರ ಬೋಧನೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ 'Special remedial teaching' for students who failed in SSLC exam-1: Education Department
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ

01/09/2025 10:18 PM2 Mins Read

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM1 Min Read

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM1 Min Read
Recent News

ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ

01/09/2025 10:18 PM

‘ಜನರನ್ನು ಮೋಸಗೊಳಿಸಲು ಗೊತ್ತಿದವನು ಅತ್ಯುತ್ತಮ ನಾಯಕನಾಗ್ಬೋದು’ : ಸಚಿವ ಗಡ್ಕರಿ

01/09/2025 10:14 PM

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM
State News
KARNATAKA

ಸಾಗರದಲ್ಲಿ ಬೀದಿ ನಾಯಿ ಹಾವಳಿ: ನಾಳೆ ನಿಯಂತ್ರಣಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಜಮೀಲ್ ಪ್ರತಿಭಟನೆ

By kannadanewsnow0901/09/2025 10:18 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರದ ನಗರದಲ್ಲಿ ದಿನೇ ದಿನೇ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಂದು ಮೂರು ವರ್ಷದ ಬಾಲಕನ ಮೇಲೆ…

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM

ಸಿಇಟಿ: ಛಾಯ್ಸ್ ಆಯ್ಕೆ, ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ-KEA

01/09/2025 8:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.