Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಫೋಸಿಸ್‌ ಕಂಪನಿಯು ಆಂಧ್ರಕ್ಕೆ ಹೋದರೆ ಕರ್ನಾಟಕ ಸರ್ಕಾರದ ಗತಿ ಏನು?: HDK ಪ್ರಶ್ನೆ

19/10/2025 6:09 PM

ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್ ಶಾರನ್ನು ಟೀಕಿಸುವುದು ನಿರರ್ಥಕ: HDK

19/10/2025 6:03 PM

BREAKING: ಮಂಡ್ಯದಲ್ಲಿ ‘KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

19/10/2025 5:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
KARNATAKA

ಬೆಂಗಳೂರಲ್ಲಿ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

By kannadanewsnow0917/05/2024 8:15 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಮಳೆ ಮುಂಜಾಗ್ರತಾ ಕ್ರಮ, ರಸ್ತೆ ಗುಂಡಿ ಮುಚ್ಚುವುದು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ವೀಡಿಯೋ ಸಂವಾದದ ಮೂಲಕ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ರಸ್ತೆ ಗುಂಡಿಗಳನ್ನು ಗುರುತಿಸಿ ತ್ವರಿತಗತಿಯಲ್ಲಿ ಮುಚ್ಚಬೇಕೆಂದು ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ 8 ವಲಯಗಳ ವಲಯ ಆಯುಕ್ತರು ರಸ್ತೆ ಗುಂಡಿಗಳು ಬಿದ್ದಿರುವದನ್ನು ಪರಿಶೀಲಿಸಿ ಕೂಡಲೆ ರಸ್ತೆಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಸರಿಯಾಗಿ ಡಾಂಬರು ಮಿಶ್ರಣ ವ್ಯವಸ್ಥೆ ಮಾಡುವ ಏಜೆನ್ಸಿಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಡಾಂಬರು ಅವಶ್ಯಕತೆಯಿದೆ ಎಂಬುದನ್ನು ಏಜೆನ್ಸಿಗಳಿಗೆ ತಿಳಿಸಿ ಅವಶ್ಯಕ ಡಾಂಬರು ಪಡೆದು ಕೂಡಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಬೇಕೆಂದು ತಿಳಿಸಿದರು.

ನಗರದಲ್ಲಿ ಈಗಾಗಲೇ ಮಳೆಯಾಗುತ್ತಿರುವ ಹಿನ್ನೆಲೆ ಡಾಂಬರು ಏಜೆನ್ಸಿಗಳಿಂದ ಹಾಟ್ ಮಿಕ್ಸ್ ಹಾಗೂ ಕೋಲ್ಡ್ ಮಿಕ್ಸ್ ಪಡೆದು ಹಗಲು – ರಾತ್ರಿ ರಸ್ತೆಗುಂಡಿಗಳನ್ನು ಮುಚ್ಚಬೇಕು. ಪಾಲಿಕೆಯ ಹಾಟ್ ಮಿಕ್ಸ್ ಪ್ಲಾಂಟ್ ನಿಂದ ಡಾಂಬರು ಪಡೆದು ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಮಾಡಬೇಕು. ದೋಷಮುಕ್ತ ಅವಧಿಯಲ್ಲಿರುವ(ಡಿಎಲ್‌ಪಿ) ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರಿಂದಲೇ ರಸ್ತೆಗುಂಡಿಗಳನ್ನು ಮುಚ್ಚಿಸಬೇಕೆಂದು ಸೂಚನೆ ನೀಡಿದರು.

ರಸ್ತೆ ಕತ್ತರಿಸದಂತೆ ಕ್ರಮವಹಿಸಿ:

ಮಳೆಗಾಲದ ಹಿನ್ನೆಲೆ ರಸ್ತೆಗಳನ್ನು ಕತ್ತಿರಿಸಿದರೆ ಸಾಕಷ್ಟು ಸಮಸ್ಯೆಯಾಗಲಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದೇ ಸಂಸ್ಥೆಗಳು ರಸ್ತೆ ಕತ್ತಿರಿಸದಂತೆ ಸೂಕ್ತ ಕ್ರಮವಹಿಸಬೇಕು. ಎಲ್ಲಿಯೂ ಅನಧಿಕೃತವಾಗಿ ಕತ್ತರಿಸದಂತೆ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜಕಾಲುವೆಗಳಲ್ಲಿ ಸ್ವಚ್ಛತೆ ಕಾಪಾಡಿ:

ನಗರದಲ್ಲಿ ಬರುವ ಪ್ರಥಮ, ದ್ವಿತೀಯ ರಾಜಕಾಲುವೆಗಳಲ್ಲಿ ಸಕ್ರಿಯವಾಗಿ ಹೂಳೆತ್ತುವ ಮೂಲಕ ಸ್ವಚ್ಛತೆ ಕಾಪಾಡಿ ಎಲ್ಲಿಯೂ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ರಾಜಕಾಲುವೆಯಿಂದ ತೆಗೆದ ಹೂಳನ್ನು ಅಲ್ಲಿಯೇ ಬಿಡದೆ ಕೂಡಲೆ ತೆರವುಗೊಳಿಸಬೇಕೆಂದು ಸೂಚಿಸಿದರು. ಜೊತೆಗೆ ರಾಜಕಾಲುವೆ ಒತ್ತುವರಿಗಳನ್ನು ತೆರವುಗೊಳಿಸಲು ಸೂಚನೆ ನೀಡಿದರು.

ಬ್ಲಾಕ್ ಸ್ಪಾಟ್ಸ್ ಗಳನ್ನು ತೆರವುಗೊಳಿಸಿ:

ನಗರದ ರಸ್ತೆ ಬದಿಗಳಲ್ಲಿ ಸಾಕಷ್ಟು ಕಡೆ ಕಸ ಸುರಿಯುವ ಸ್ಥಳ(ಬ್ಲಾಕ್ ಸ್ಪಾಟ್)ಗಳಿದ್ದು, ಘನತ್ಯಾಜ್ಯ ವಿಭಾಗವು ಕೂಡಲೆ ಎಲ್ಲಾ ಕಡೆ ಕಸ ಸುರಿಯುವ ಸ್ಥಳಗಲ್ಲಿ ಸ್ವಚ್ಛತೆ ಮಾಡಿ ಅಲ್ಲಿ ಮತ್ತೆ ಕಸ ಹಾಕದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ನಿಯಂತ್ರಣ ಕೊಠಡಿಗಳು ಸರಿಯಾಗಿ ಮೇಲುಸ್ತವಾರಿ ವಹಿಸಿ ಕಾರ್ಯನಿರ್ವಹಿಸಬೇಕು:

ಪಾಲಿಕೆಯ ನಿಯಂತ್ರನ ಕೊಠಡಿಗಳು ಸರಿಯಾಗಿ ಮೇಲುಸ್ತವಾರಿ ವಹಿಸಿ ಕಾರ್ಯನಿರ್ವಹಿಸಬೇಕು. ಮಳೆ ಬೀಳುವ ಸಮಯದಲ್ಲಿ ನಾಗರೀಕರಿಂದ ಪಾಲಿಕೆ ನಿಯಂತ್ರಣ ಕೊಠಡಿಗಳಿಗೆ ಸಾಕಷ್ಟು ದೂರುಗಳು ಬರಲಿದ್ದು, ಬರುವಂತಹ ದೂರುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ಪೀಡಿತ ಪ್ರದೇಶಗಳ ಬಳಿ ನಿಗಾವಹಿಸಿ:

ನಗರದಲ್ಲಿ 198 ಪ್ರವಾಹ ಪೀಡಿದ ಪ್ರದೇಶಗಳ ಪೈಕಿ ಈಗಾಗಲೇ 124 ಕಡೆ ಯಾವುದೇ ಸಮಸ್ಯೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಳಿದ 74 ಸ್ಥಳಗಳ ಪೈಕಿ 24 ಕಡೆಯೂ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಲಾಗಿದ್ದು, ಉಳಿದ 50 ಸ್ಥಳಗಳಲ್ಲಿ ಯಾವುದೇ ತೊಂದರೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್ ರವರು ಸಭೆಯಲ್ಲಿ ಮಾಹಿತಿ ನೀಡಿದರು.

ಈ ವೇಳೆ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ವಿಪತ್ತು ನಿರ್ವಹಣಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.

BREAKING: SSLC ಅನುತ್ತೀರ್ಣ ವಿದ್ಯಾರ್ಥಿಗಳ ‘ವಿಶೇಷ ಪರಿಹಾರ ಬೋಧನೆ ತರಗತಿ’ ಮುಂದೂಡಿಕೆ: ಶಾಲಾ ಶಿಕ್ಷಣ ಇಲಾಖೆ ಆದೇಶ

Good News: ರಾಜ್ಯ ಸರ್ಕಾರದಿಂದ ‘ಕ್ಯಾನ್ಸರ್​​ ಪೀಡಿತ’ರಿಗೆ ಗುಡ್ ನ್ಯೂಸ್: ಈಗ ‘ಯಶಸ್ವಿನಿ ಯೋಜನೆ’ಯಡಿ ಸಿಗಲಿದೆ ಚಿಕಿತ್ಸೆ

Share. Facebook Twitter LinkedIn WhatsApp Email

Related Posts

ಇನ್ಫೋಸಿಸ್‌ ಕಂಪನಿಯು ಆಂಧ್ರಕ್ಕೆ ಹೋದರೆ ಕರ್ನಾಟಕ ಸರ್ಕಾರದ ಗತಿ ಏನು?: HDK ಪ್ರಶ್ನೆ

19/10/2025 6:09 PM2 Mins Read

ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್ ಶಾರನ್ನು ಟೀಕಿಸುವುದು ನಿರರ್ಥಕ: HDK

19/10/2025 6:03 PM2 Mins Read

BREAKING: ಮಂಡ್ಯದಲ್ಲಿ ‘KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

19/10/2025 5:49 PM1 Min Read
Recent News

ಇನ್ಫೋಸಿಸ್‌ ಕಂಪನಿಯು ಆಂಧ್ರಕ್ಕೆ ಹೋದರೆ ಕರ್ನಾಟಕ ಸರ್ಕಾರದ ಗತಿ ಏನು?: HDK ಪ್ರಶ್ನೆ

19/10/2025 6:09 PM

ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್ ಶಾರನ್ನು ಟೀಕಿಸುವುದು ನಿರರ್ಥಕ: HDK

19/10/2025 6:03 PM

BREAKING: ಮಂಡ್ಯದಲ್ಲಿ ‘KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

19/10/2025 5:49 PM

ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ

19/10/2025 5:43 PM
State News
KARNATAKA

ಇನ್ಫೋಸಿಸ್‌ ಕಂಪನಿಯು ಆಂಧ್ರಕ್ಕೆ ಹೋದರೆ ಕರ್ನಾಟಕ ಸರ್ಕಾರದ ಗತಿ ಏನು?: HDK ಪ್ರಶ್ನೆ

By kannadanewsnow0919/10/2025 6:09 PM KARNATAKA 2 Mins Read

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಪಾಕಿಸ್ತಾನಕ್ಕೆ ಜೈ ಹಾಕುವವರನ್ನು ಬೆಂಬಲಿಸುತ್ತದೆ. ಭಾರತ್‌ ಮಾತಾ ಕೀ ಜೈ ಎನ್ನುವವರನ್ನು ವಿರೋಧಿಸುತ್ತದೆ ಎಂದು ಪ್ರತಿಪಕ್ಷ ನಾಯಕ…

ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್ ಶಾರನ್ನು ಟೀಕಿಸುವುದು ನಿರರ್ಥಕ: HDK

19/10/2025 6:03 PM

BREAKING: ಮಂಡ್ಯದಲ್ಲಿ ‘KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

19/10/2025 5:49 PM

ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ

19/10/2025 5:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.