ಬೆಂಗಳೂರು: ಬಿಜೆಪಿ ಪಕ್ಷದ ಶಾಸಕರು ರಾಜ್ಯದಲ್ಲಿ ಸಮಾಜ ಘಾತುಕರ ಪರ ನಿಂತು ರಾಜಕಾರಣ ಮಾಡುತ್ತಿದ್ದಾರೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿಯ ಯುವಮೋರ್ಚಾ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡರೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅಕ್ರಮ ಲೂಟಿಕೋರರ ಪರ ನಿಂತು ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ ತೋರಿದ್ದಾರೆ ಎಂದಿದ್ದಾರೆ.
ಪೊಲೀಸರ ಮೇಲಿನ ಶಾಸಕ ಹರೀಶ್ ಪೂಂಜಾ ಅವರ ಈ ಗೂಂಡಾ ವರ್ತನೆ ಅಕ್ಷಮ್ಯ. ಸ್ವತಃ ಬಿಜೆಪಿ ಶಾಸಕರೇ ಮುಂದೆ ನಿಂತು ಸರ್ಕಾರಿ ಅಧಿಕಾರಿಗಳಿಗೆ ಕಾನೂನಾತ್ಮಕವಾಗಿ ಕೆಲಸ ಮಾಡಲು ಅಡ್ಡಿಪಡಿಸುವ ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಕೆಂಡಾಮಂಡಲವಾಗಿದ್ದಾರೆ.
ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ. ಸಮಾಜದ ಕಾನೂನು ಸುವ್ಯವಸ್ಥೆ ಬಗ್ಗೆ ಕಾಳಜಿ ಇಲ್ಲ. ಶಾಸಕರಾಗಿ ಪೊಲೀಸರ ಕಾರ್ಯಕ್ಕೆ ಅಡ್ಡಿ ಪಡಿಸಿ ಈ ರೀತಿ ಗೂಂಡಾಗಿರಿ ತೋರಿರುವುದು ಎಷ್ಟು ಸರಿ.. ಸಮಾಜ ಘಾತುಕರ ಪರ ನಿಂತು ಬಿಜೆಪಿ ಶಾಸಕರು ರಾಜಕಾರಣ ಮಾಡುತ್ತಿರುವುದು ಈ ಪ್ರಕರಣದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ತಿಳಿಸಿದ್ದಾರೆ.
ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿಯ ಯುವಮೋರ್ಚಾ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡರೆ ಬೆಳ್ತಂಗಡಿಯ ಬಿಜೆಪಿ ಶಾಸಕ @HPoonja ಅಕ್ರಮ ಲೂಟಿಕೋರರ ಪರ ನಿಂತು ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ ತೋರಿದ್ದಾರೆ.
ಪೊಲೀಸರ ಮೇಲಿನ ಶಾಸಕ ಹರೀಶ್ ಪೂಂಜಾ ಅವರ ಈ… pic.twitter.com/khBSusA0Ue
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 19, 2024
PM Modi: ‘ತೃಣಮೂಲ’ ಸುಳ್ಳುಗಳನ್ನು ಹರಡುತ್ತಿದೆ: ಮಮತಾ ಬ್ಯಾನರ್ಜಿ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ
ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು: JDS ಗಂಭೀರ ಆರೋಪ