Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಬ್ಬಳ್ಳಿಯಲ್ಲಿ ‘RSS’ ಕಚೇರಿ ಮುತ್ತಿಗೆಗೆ ಯತ್ನ : 30ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

18/10/2025 12:31 PM

ಪಾಕಿಸ್ತಾನದಲ್ಲಿ ನೆಲೆಸಿರುವ ಎಲ್ಲಾ ಆಫ್ಘನ್ನರು ತಾಯ್ನಾಡಿಗೆ ಮರಳಬೇಕು: ಸಚಿವ ಖವಾಜಾ ಆಸಿಫ್

18/10/2025 12:30 PM

ರೈಲುಗಳಲ್ಲಿ ತೊಳೆಯಬಹುದಾದ ಸಂಗನೇರಿ ಮುದ್ರಿತ ಕಂಬಳಿ ಕವರ್ ಗಳನ್ನು ಬಿಡುಗಡೆ ಮಾಡಿದ ಭಾರತೀಯ ರೈಲ್ವೆ !

18/10/2025 12:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ಧರಾಮಯ್ಯ 1 ವರ್ಷದ ಸಾಧನೆ ಶೂನ್ಯ, ರಾಜ್ಯಪಾಲರು ಸರ್ಕಾರ ವಜಾಗೊಳಿಸಬೇಕು: ಆರ್ ಅಶೋಕ್ ಆಗ್ರಹ
KARNATAKA

ಸಿದ್ಧರಾಮಯ್ಯ 1 ವರ್ಷದ ಸಾಧನೆ ಶೂನ್ಯ, ರಾಜ್ಯಪಾಲರು ಸರ್ಕಾರ ವಜಾಗೊಳಿಸಬೇಕು: ಆರ್ ಅಶೋಕ್ ಆಗ್ರಹ

By kannadanewsnow0920/05/2024 4:44 PM

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು.

ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್‌ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್‌ ಚಾಲೀಸ ಕೇಳಿದರೆ, ಜೈ ಶ್ರೀರಾಮ್‌ ಎಂದರೆ ಹಲ್ಲೆಯಾಗುತ್ತದೆ ಎಂದು ದೂರಿದರು.

ಒಂದು ವರ್ಷದಲ್ಲಿ ಮಗು ಅಂಬೆಗಾಲಿಡುತ್ತದೆ. ಆದರೆ ಸರ್ಕಾರ ಇನ್ನೂ ಟೇಕಾಫ್‌ ಆಗಿಲ್ಲ. ರಸ್ತೆ, ನೀರಾವರಿ, ಸೇತುವೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಶಾಲೆ ಕಟ್ಟಡ ದುರಸ್ತಿಗೂ ಹಣವಿಲ್ಲ. ಬಸ್‌ ಚಾಲಕರಿಗೆ, ಆಂಬ್ಯುಲೆನ್ಸ್‌ ಚಾಲಕರಿಗೆ ಸಂಬಳವಿಲ್ಲ, ರೈತರಿಗೆ ಹಾಲಿನ ಪ್ರೋತ್ಸಾಹಧನ ಸಿಕ್ಕಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ವೆಂಟಿಲೇಟರ್‌ನಲ್ಲಿದೆ. ಸಿಎಂ ಸಿದ್ದರಾಮಯ್ಯನವರು 15 ಬಜೆಟ್‌ ಮಂಡಿಸಿ ಒಂದೂವರೆ ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ ಎಂದು ದೂರಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ. 20 ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ್ದಾರೆ. ಹೀಗೆ ಓದುವುದನ್ನೂ ಉಚಿತ ಮಾಡಿ ಓದದೆಯೇ ಪಾಸು ಮಾಡುವ ಯೋಜನೆ ತಂದಿದ್ದಾರೆ. ಹಾಗಾದರೆ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲವೇ? ಸಿಇಟಿ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ. ಈ ಸರ್ಕಾರ ಶಿಕ್ಷಣ ಇಲಾಖೆಗೆ ಅನುದಾನ ಕಡಿಮೆ ಮಾಡಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಮಣಿವಣ್ಣನ್‌ ಎಂಬ ಅಧಿಕಾರಿ ಕುವೆಂಪು ವಾಣಿಯನ್ನು ತಿದ್ದುವಂತಹ ಸ್ಥಿತಿ ಇದೆ ಎಂದರು.

ಲೂಟಿ ಸರ್ಕಾರ

ಒಂದು ವರ್ಷದಲ್ಲಿ ಈ ಸರ್ಕಾರ ಚೆನ್ನಾಗಿ ಲೂಟಿ ಮಾಡಿದೆ. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇವೆಂದು ಹೇಳಿ ನೀರಿನ ಸಮಸ್ಯೆ ತಂದು ಬ್ಯಾಡ್‌ ಬೆಂಗಳೂರು ಮಾಡಿದ್ದಾರೆ. 16 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುರಂಗ ರಸ್ತೆ ಮಾಡುತ್ತೇವೆಂದು ಕಮಿಶನ್‌ ಹೊಡೆಯಲು ಯೋಜನೆ ರೂಪಿಸಿದ್ದಾರೆ. ಯಾವುದೇ ಡೆವಲಪರ್‌ ಬಂದರೂ ಚದರ ಅಡಿಗೆ 100 ರೂ. ಕಾಂಗ್ರೆಸ್‌ ಟ್ಯಾಕ್ಸ್‌ ಎಂಬ ಕಮಿಶನ್‌ ಕೊಡಬೇಕಾಗುತ್ತದೆ. ಈ ಕಮಿಶನ್‌ ಸಾಗಿಸಲು ಸುರಂಗ ನಿರ್ಮಿಸಲು ಯೋಜನೆ ಮಾಡಿದ್ದಾರೆ. ಇಂತಹ ಸರ್ಕಾರ ಇದ್ದರೂ ಒಂದೇ, ಹೋದರೂ ಒಂದೇ ಎಂದರು.

ಕಾಂಗ್ರೆಸ್‌ ಶಾಸಕರೇ ಸರ್ಕಾರ ಬೀಳಿಸುತ್ತಾರೆ

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್‌ ಶುರುವಾಗಿದೆ ಎಂದರು.

‘ಪ್ರಜ್ವಲ್ ಕೇಸ್’ನಿಂದ ಮನನೊಂದು ‘ದೇವೇಗೌಡ’ರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದರು:HDK

‘ಸ್ಮೋಕ್ ಪಾನ್’ ಪ್ರಿಯರೇ ಎಚ್ಚರ ; ಪಾನ್ ತಿಂದು 12 ವರ್ಷದ ಬಾಲಕಿ ಹೊಟ್ಟೆಯಲ್ಲಿ ರಂಧ್ರ, ಶಸ್ತ್ರಚಿಕಿತ್ಸ

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯಲ್ಲಿ ‘RSS’ ಕಚೇರಿ ಮುತ್ತಿಗೆಗೆ ಯತ್ನ : 30ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

18/10/2025 12:31 PM1 Min Read

ವರ್ಷ ಪೂರ್ತಿ ಭತ್ತ, ರಾಗಿ ಖರೀದಿ ಕೇಂದ್ರ ತೆರೆಯಿರಿ : ಮಂಡ್ಯ ಜಿಲ್ಲಾಡಳಿತಕ್ಕೆ ರೈತ ಸಂಘ ಆಗ್ರಹ

18/10/2025 11:43 AM2 Mins Read

‘KSRTC’ಗೆ ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿಗಳು ಸಿಕ್ಕಿರುವ ಕುರಿತು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

18/10/2025 11:40 AM2 Mins Read
Recent News

ಹುಬ್ಬಳ್ಳಿಯಲ್ಲಿ ‘RSS’ ಕಚೇರಿ ಮುತ್ತಿಗೆಗೆ ಯತ್ನ : 30ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

18/10/2025 12:31 PM

ಪಾಕಿಸ್ತಾನದಲ್ಲಿ ನೆಲೆಸಿರುವ ಎಲ್ಲಾ ಆಫ್ಘನ್ನರು ತಾಯ್ನಾಡಿಗೆ ಮರಳಬೇಕು: ಸಚಿವ ಖವಾಜಾ ಆಸಿಫ್

18/10/2025 12:30 PM

ರೈಲುಗಳಲ್ಲಿ ತೊಳೆಯಬಹುದಾದ ಸಂಗನೇರಿ ಮುದ್ರಿತ ಕಂಬಳಿ ಕವರ್ ಗಳನ್ನು ಬಿಡುಗಡೆ ಮಾಡಿದ ಭಾರತೀಯ ರೈಲ್ವೆ !

18/10/2025 12:07 PM

ವರ್ಷ ಪೂರ್ತಿ ಭತ್ತ, ರಾಗಿ ಖರೀದಿ ಕೇಂದ್ರ ತೆರೆಯಿರಿ : ಮಂಡ್ಯ ಜಿಲ್ಲಾಡಳಿತಕ್ಕೆ ರೈತ ಸಂಘ ಆಗ್ರಹ

18/10/2025 11:43 AM
State News
KARNATAKA

ಹುಬ್ಬಳ್ಳಿಯಲ್ಲಿ ‘RSS’ ಕಚೇರಿ ಮುತ್ತಿಗೆಗೆ ಯತ್ನ : 30ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

By kannadanewsnow0518/10/2025 12:31 PM KARNATAKA 1 Min Read

ಹುಬ್ಬಳ್ಳಿ : ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರಿದ ಬೆನ್ನಲ್ಲೇ, ಇದೀಗ ಹುಬ್ಬಳ್ಳಿಯಲ್ಲಿ ಆರೆಸ್ಸೆಸ್…

ವರ್ಷ ಪೂರ್ತಿ ಭತ್ತ, ರಾಗಿ ಖರೀದಿ ಕೇಂದ್ರ ತೆರೆಯಿರಿ : ಮಂಡ್ಯ ಜಿಲ್ಲಾಡಳಿತಕ್ಕೆ ರೈತ ಸಂಘ ಆಗ್ರಹ

18/10/2025 11:43 AM

‘KSRTC’ಗೆ ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿಗಳು ಸಿಕ್ಕಿರುವ ಕುರಿತು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

18/10/2025 11:40 AM

GOOD NEWS : ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 422 ಪಿಜಿ ಸೀಟ್ ಹೆಚ್ಚಳ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿಕೆ

18/10/2025 11:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.