Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿ.ಎಂ.ಸಿದ್ದರಾಮಯ್ಯ

03/11/2025 5:38 PM

ಸಾರ್ವಜನಿಕರೇ ಎಚ್ಚರ! ‘ಮಕ್ಕಳ ಮಾರಾಟ’ ಅಪರಾಧ! ಸಿಕ್ಕಿ ಬಿದ್ರೆ 5 ವರ್ಷ ‘ಜೈಲು ಶಿಕ್ಷೆ ಫಿಕ್ಸ್’

03/11/2025 5:34 PM

ALERT : ಈ ‘ಮೆಸೇಜ್’ ಬಂದ್ರೆ ತಕ್ಷಣ ಡಿಲೀಟ್ ಮಾಡಿ, ಇಲ್ಲವೇ ಕ್ಷಣಾರ್ಧದಲ್ಲೇ ನಿಮ್ಮ ಬ್ಯಾಂಕ್ ಖಾತೆ ಖಾಲಿ ಆಗುತ್ತೆ!

03/11/2025 5:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಕ್ತಿ‌ ಯೋಜನೆಯಿಂದ METRO ಕುತ್ತು ಎಂಬ ಪ್ರಧಾನಿ ಹೇಳಿಕೆ ಅವೈಜ್ಞಾನಿಕ : ಸಚಿವ ರಾಮಲಿಂಗಾರೆಡ್ಡಿ
KARNATAKA

ಶಕ್ತಿ‌ ಯೋಜನೆಯಿಂದ METRO ಕುತ್ತು ಎಂಬ ಪ್ರಧಾನಿ ಹೇಳಿಕೆ ಅವೈಜ್ಞಾನಿಕ : ಸಚಿವ ರಾಮಲಿಂಗಾರೆಡ್ಡಿ

By kannadanewsnow5722/05/2024 9:29 AM

ಬೆಂಗಳೂರು:ಶಕ್ತಿ‌ ಯೋಜನೆಯಿಂದ METRO ಕುತ್ತು ಎಂಬ ಪ್ರಧಾನ ಮಂತ್ರಿಗಳಾದ ಮೋದಿಯವರ ಹೇಳಿಕೆ ಅವೈಜ್ಞಾನಿಕ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇತ್ತೀಚೆಗೆ ಸನ್ಮಾನ್ಯ ಪ್ರಧಾನಮಂತ್ರಿಗಳು, ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ‌ ಪ್ರಯಾಣ ನೀಡುವುದು ಸರಿಯಲ್ಲ ಇದರಿಂದ METROಗೆ ಕುತ್ತು ಬರುತ್ತದೆ ಎಂಬುದಾಗಿ ಹೇಳಿಕೆ ನೀಡಿದ್ದರು,

ಶಕ್ತಿ ಯೋಜನೆಯನ್ನು ಜೂನ್ 11, 2023 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಯಿತು,
ಇಂದಿನವರೆಗೆ ಅಂದರೆ ಮೇ 20, 2024 ರವರೆಗೆ ಶಕ್ತಿ ಯೋಜನೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ *67.34* ಕೋಟಿ.

ಕಳೆದ ಒಂದು ವರ್ಷದಲ್ಲಿ ನಮ್ಮ *METRO* ಪ್ರಯಾಣಿಕರ ಸಂಖ್ಯೆ ಶೇ.30 ಏರಿಕೆ ಕಂಡಿದೆ. ಜನವರಿ‌ 2023 ರಲ್ಲಿ ಮೆಟ್ರೋ‌ ಪ್ರಯಾಣಿಕರ ಸಂಖ್ಯೆ *1.65* ಕೋಟಿ,‌ ಆದಾಯ *39.15* ಕೋಟಿಯಾಗಿತ್ತು‌, ಅದೇ ಏಪ್ರಿಲ್ 2024 ರಲ್ಲಿ ಪ್ರಯಾಣಿಕರ ಸಂಖ್ಯೆ *2* ಕೋಟಿಗೆ ಏರಿಕೆಯಾಗಿದ್ದು, ಆದಾಯ ರೂ. *51.71* ಕೋಟಿಗೆ ಏರಿಕೆಯಾಗಿದೆ,

2023 ಕ್ಕೆ ಹೋಲಿಸಿದರೆ 2024 ರಲ್ಲಿ ಒಂದು ತಿಂಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಸರಾಸರಿ *35* ಲಕ್ಷ ಏರಿಕೆ ಮತ್ತು ಆದಾಯದಲ್ಲಿ ರೂ. *1.10* ಕೋಟಿ ಏರಿಕೆ ಕಂಡಿದೆ‌,

ಈ ಮೇಲಿನ ಅಂಕಿಅಂಶಗಳಿಂದ ಶಕ್ತಿ ಯೋಜನೆಯಿಂದ *METRO ಯಾವ ರೀತಿಯಿಂದಲೂ ಧಕ್ಕೆ‌ ಆಗಿಲ್ಲ, ಬದಲಿಗೆ ಮೆಟ್ರೋ ಪ್ರಯಾಣಿಕರ ಸಂಖ್ಯೆ‌ ಮತ್ತು ಆದಾಯದಲ್ಲಿ ಗಣನೀಯ ಹೆಚ್ಚಳವಾಗಿರುವುದು ಕಂಡುಬರುತ್ತದೆ,

ಆದ್ದರಿಂದ ಉಚಿತ ಪ್ರಯಾಣ ಯೋಜನೆಯಿಂದ ಮೆಟ್ರೋಗೆ ಹೇಗೆ ಧಕ್ಕೆಯಾಗಿದೆ ಎಂಬುದನ್ನು ಸನ್ಮಾನ್ಯ ಪ್ರಧಾನಮಂತ್ರಿಗಳು ವಿವರಿಸಬೇಕು,

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಹಾಗೂ ಅತ್ಯಂತ ಯಶಸ್ವಿಯಾಗಿ‌ ಜಾರಿಯಾಗಿರುವ ಶಕ್ತಿ ಯೋಜನೆಯನ್ನು ದೂಷಿಸುವ ಇರಾದೆಯೇ ?
ಅಥವಾ ಮಾಹಿತಿ ಕೊರತೆಯೋ? ತಿಳಿಯದಾಗಿದೆ,

ಶಕ್ತಿ‌ಯೋಜನೆ ನಂತರ ಒಟ್ಟು ಪ್ರಯಾಣಿಕರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಲಪಡಿಸುವ ಹಾಗೂ ಮಹಿಳೆಯರ ಸಬಲೀಕರಣ ಮಹತ್ವದ ಯೋಜನೆಯನ್ನು ಪ್ರಧಾನಮಂತ್ರಿಯಾದವರು ಈ ರೀತಿಯಾಗಿ ಟೀಕಿಸುವುದು ಸಾಧುವಲ್ಲ,

ರಾಜ್ಯದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಬಲಿಷ್ಠವಾಗುತ್ತಿವೆ. ಹೊಸ ಹೊಸ ಬಸ್ಸುಗಳ ಸೇರ್ಪಡೆ , ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ಹಾಗೂ ದೇಶ ವಿದೇಶಗಳ ಮಾಧ್ಯಮಗಳಲ್ಲಿಯೂ,
ಈ‌ ಯೋಜನೆ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ಲಭ್ಯವಾಗಿರುವುದು ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಹಿಡಿದ ಕೈಗನ್ನಡಿಯಾಗಿದೆ‌,

ಒಟ್ಟಾರೆಯಾಗಿ ಶಕ್ತಿ ಯೋಜನೆಯು ಪರಿಣಾಮಕಾರಿಯಾಗಿ ಜಾರಿಯಾಗಿ ಸಫಲತೆಯನ್ನು ಕಂಡಿದೆ,

ಪ್ರಧಾನಮಂತ್ರಿಗಳು ಪೂರ್ವಾಗ್ರಹ ಪೀಡಿತರಾಗಿ ಯೋಜನೆಯನ್ನು ದೂಷಿಸುವುದು ಸಮಂಜಸವಲ್ಲ,

ಕೇವಲ ಬಿಜೆಪಿ ಘೋಷಿಸುವ ಯೋಜನೆಗಳು ಮಾತ್ರ ಒಳ್ಳೆಯದು ಎಂಬ ಭ್ರಮೆ ಜನರಲ್ಲಿ ಮೂಡಿಸುವಲ್ಲಿ ಮೋದಿಯವರು ಪ್ರಯತ್ನಿಸುತ್ತಿದ್ದಾರೆ ಆದರೆ ಜನರಿಗೆ ಎಲ್ಲಾ ಮಾಹಿತಿಯು ತಿಳಿದಿದೆ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು ನಂತರ ಎಲ್ಲಾ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಮರೆತು ಜನರ ಅನುಕೂಲಕ್ಕಾಗಿ ಸರ್ಕಾರಗಳು ಶ್ರಮಿಸಬೇಕು” ಎಂದು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿ.ಎಂ.ಸಿದ್ದರಾಮಯ್ಯ

03/11/2025 5:38 PM1 Min Read

ಸಾರ್ವಜನಿಕರೇ ಎಚ್ಚರ! ‘ಮಕ್ಕಳ ಮಾರಾಟ’ ಅಪರಾಧ! ಸಿಕ್ಕಿ ಬಿದ್ರೆ 5 ವರ್ಷ ‘ಜೈಲು ಶಿಕ್ಷೆ ಫಿಕ್ಸ್’

03/11/2025 5:34 PM1 Min Read

BREAKING: ನಟ ದರ್ಶನ್, ಪವಿತ್ರಾಗೌಡ ಮತ್ತು ಇತರರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ; ನ.10ರಂದು ವಿಚಾರಣೆ ದಿನಾಂಕ ನಿಗದಿ

03/11/2025 5:28 PM1 Min Read
Recent News

ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿ.ಎಂ.ಸಿದ್ದರಾಮಯ್ಯ

03/11/2025 5:38 PM

ಸಾರ್ವಜನಿಕರೇ ಎಚ್ಚರ! ‘ಮಕ್ಕಳ ಮಾರಾಟ’ ಅಪರಾಧ! ಸಿಕ್ಕಿ ಬಿದ್ರೆ 5 ವರ್ಷ ‘ಜೈಲು ಶಿಕ್ಷೆ ಫಿಕ್ಸ್’

03/11/2025 5:34 PM

ALERT : ಈ ‘ಮೆಸೇಜ್’ ಬಂದ್ರೆ ತಕ್ಷಣ ಡಿಲೀಟ್ ಮಾಡಿ, ಇಲ್ಲವೇ ಕ್ಷಣಾರ್ಧದಲ್ಲೇ ನಿಮ್ಮ ಬ್ಯಾಂಕ್ ಖಾತೆ ಖಾಲಿ ಆಗುತ್ತೆ!

03/11/2025 5:34 PM

BREAKING: ನಟ ದರ್ಶನ್, ಪವಿತ್ರಾಗೌಡ ಮತ್ತು ಇತರರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ; ನ.10ರಂದು ವಿಚಾರಣೆ ದಿನಾಂಕ ನಿಗದಿ

03/11/2025 5:28 PM
State News
KARNATAKA

ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿ.ಎಂ.ಸಿದ್ದರಾಮಯ್ಯ

By kannadanewsnow0903/11/2025 5:38 PM KARNATAKA 1 Min Read

ಮೈಸೂರು: ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ಸಾರ್ವಜನಿಕರೇ ಎಚ್ಚರ! ‘ಮಕ್ಕಳ ಮಾರಾಟ’ ಅಪರಾಧ! ಸಿಕ್ಕಿ ಬಿದ್ರೆ 5 ವರ್ಷ ‘ಜೈಲು ಶಿಕ್ಷೆ ಫಿಕ್ಸ್’

03/11/2025 5:34 PM

BREAKING: ನಟ ದರ್ಶನ್, ಪವಿತ್ರಾಗೌಡ ಮತ್ತು ಇತರರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ; ನ.10ರಂದು ವಿಚಾರಣೆ ದಿನಾಂಕ ನಿಗದಿ

03/11/2025 5:28 PM

BREAKING: ರೇಣುಕಾಸ್ವಾಮಿ ಕೊಲೆ ಕೇಸ್: ತಮ್ಮ ವಿರುದ್ಧ ಆರೋಪ ನಿರಾಕರಿಸಿದ ನಟ ದರ್ಶನ್ ಅಂಡ್ ಗ್ಯಾಂಗ್

03/11/2025 5:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.