ಬೆಂಗಳೂರು: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ಏರಿದೆ. ಈ ಸಂದರ್ಭದಲ್ಲೇ ರಾಜ್ಯದ ಅನುದಾನ ರಹಿತ ಶಾಲಾ ಕಾಲೇಜುಗಳ ಒಕ್ಕೂಟದಿಂದ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಅವರಿಗೆ ಬೆಂಬಲ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದಿಂದ ಪತ್ರ ಬರೆಯಲಾಗಿದೆ. ರಾಜ್ಯಾಧ್ಯಕ್ಷ ಜಿ.ಸಿ ಶಿವಪ್ಪ ಅವರು ಬರೆದಿರುವಂತ ಪತ್ರದಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಮ್ಮ ಶಾಲೆ & ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಕಾಂಗ್ರೇಸ್ ಸರ್ಕಾರದ ಪರವಾಗಿ ಮತ ಚಲಾಯಿಸುವುದರ ಮುಖಾಂತರ ಜೂನ್ ತಿಂಗಳ 3ನೇ ದಿನಾಂಕ ನಡೆಯುವ ವಿದಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ 6ಸದಸ್ಯರ ಚುನಾವಣೆಗೆ ನಮ್ಮ ಒಕ್ಕೂಟದ ವತಿಯಿಂದ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂಬುದಾಗಿ ಘೋಷಣೆ ಮಾಡಿದ್ದಾರೆ.
ಇನ್ನೂ ಆತ್ಮೀಯರ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಕನ್ನಡವೇ ಆಡಳಿತ ಭಾಷೆ ಸರ್ಕಾರ ಕನ್ನಡದ ನಾಮ ಫಲಕಗಳನ್ನು ಹಾಕುವಂತೆ ಕಾನೂನು ಮಾಡುತ್ತಿದೆ ಸರ್ಕಾರ ಕನ್ನಡ ಭಾಷೆ ಉಳಿವು ಮತ್ತು ಬೆಳವಣಿಗೆ ಅತಿ ಮುಖ್ಯವಾಗಿದೆ ನಮ್ಮ ಖಾಸಗಿ ಕನ್ನಡ ಮಾಧ್ಯಮ ಶಾಲಾಕಾಲೇಜುಗಳು ಸರ್ಕಾರದ ಯಾವುದೇ ಅನುದಾನವಿಲ್ಲದೆ ಸಂಕಷ್ಟದಲ್ಲಿವೆ. ಕನ್ನಡ ಭಾಷೆ ಉಳಿಯುವುದು ಕನ್ನಡ ಶಾಲೆಗಳಿಂದ ಎಂಬುದನ್ನು ತರಬಯಸುತ್ತವೆ ಎಂದು ಹೇಳಿದ್ದಾರೆ.
ಆದ್ದರಿಂದ ಕಾಂಗ್ರೇಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದಂತೆ 2012ಕಿಂತ ಮೊದಲು ಪ್ರಾರಂಬಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಘಟನೆಗಳು ನಿರ್ವಹಣೆಯಲ್ಲಿರುವ ಪಿಯು,ಸಿ,ತನಕದ ಶಿಕ್ಷಣ ಸಂಸ್ಥೆಗಳನ್ನು ಅನುದಾನದ ವ್ಯಾಪ್ತಿಗೆ ತರುವುದು ಹಾಗೂ ಇತರೆ ಸಾಮಾನ್ಯ ವರ್ಗದ ಶಾಲಾ ಕಾಲೇಜುಗಳನ್ನು ಅನುದಾನದ ವ್ಯಾಪ್ತಿಗೆ ತರುವಂತೆ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಎಲ್ಲಾ ಭಾಗ್ಯಗಳನ್ನು ನೀಡಿರುವ ಕಾಂಗ್ರೇಸ್ ಸರ್ಕಾರ ನಮಗೆ ಅನುದಾನ ಭಾಗ್ಯವನ್ನು ನೀಡಿ ರಾಜ್ಯದಾದ್ಯಂತ 28 ವರ್ಷಗಳ ನ್ಯಾಯಯುತ ಬೇಡಿಕೆಯಾದ 1995ರ ನಂತರ ಪ್ರಾರಂಭವಾದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನವನ್ನು ದೊರಕಿಸಿ ಕನ್ನಡ ಭಾಷೆಯ ಉಳಿವಿಗೆ ಒತ್ತುನೀಡಿ, ಅಪಾಯದಲ್ಲಿರುವ ಕನ್ನಡ ಶಾಲಾಶಿಕ್ಷಕರ ಮತ್ತು ಈ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಲಕ್ಷಾಂತರ ಬಡಮಕ್ಕಳ ಬದುಕಿಗೆ ಆಸರೆಯಾಗಬೇಕೆಂದು ಕೋರಿದ್ದಾರೆ.
6.80 ಲಕ್ಷ ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸುವುದಕ್ಕೆ ಮುಂದಾದ ದೂರಸಂಪರ್ಕ ಇಲಾಖೆ
ಪ್ರಜ್ವಲ್ ಪೆನ್ಡ್ರೈವ್ಕೇಸ್: ಎಸ್ಐಟಿ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆ!