ಬೆಂಗಳೂರು : ಲೌಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಜ್ಯೋತಿಷಿ ಮೊರೆ ಹೋಗಿದ್ದು, ಈ ತಿಂಗಳೂ ಭಾರತಕ್ಕೆ ಬರುವುದು ಅನುಮಾನ ಎನ್ನಲಾಗಿದೆ.
ಸದ್ಯ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಈ ತಿಂಗಳೂ ಭಾರತಕ್ಕೆ ಬರುವುದು ಅನುಮಾನ ಎನ್ನಲಾಗಿದ್ದು, ಜೂನ್1 ಅಥವಾ ಜೂನ್ 4 ರ ಬಳಿಕ ಭಾರತಕ್ಕೆ ಬರುವ ಸಾಧ್ಯತೆ ಇದೆ. ಪ್ರಜ್ವಲ್ ರೇವಣ್ಣ ಸದ್ಯ ಜ್ಯೋತಿಷಿ ಮೊರೆ ಹೋಗಿದ್ದು, ಸದ್ಯಕ್ಕೆ ಗುರುಬಲ ಇಲ್ಲ. ಹೀಗಾಗಿ ಮುಂದಿನ ತಿಂಗಳು ಭಾರತಕ್ಕೆ ಬರುವಂತೆ ಜ್ಯೋತಿಷಿ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಚುನಾವಣೆ ಬಳಿಕ ಭಾರತಕ್ಕೆ ಬರುವ ಸಾಧ್ಯತೆ ಇದೆ.
ಜೂನ್ ೧ ಕ್ಕೆ ೭ ನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಮತದಾನದ ಬಳಿಕವೇ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.