ಬೆಂಗಳೂರು : ವಿಧಾನಸಭೆ ಚುಣಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಇಂದು ಬೆಳಗ್ಗೆ 10.30ಕ್ಕೆ ಕೋರ್ಟ್ ದೂರಿನ ಕುರಿತು ವಿಚಾರಣೆ ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ.
ಜಾಮೀನು ಕೋರಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂಡಿಯಾ ಒಕ್ಕೂಟದ ಮೀಟಿಂಗ್ ಇದ್ದು, ಮುಂದಿನ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ. ರಾಹುಲ್ ಗಾಂಧಿ ಪರ ವಕೀಲ ನಿತಿಶ್ ಕುಮಾರ್ ಶೆಟ್ಟಿ ಹೇಳಿದ್ದಾರೆ.
ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲೇಬೇಕು. ವಿಚಾರಣೆಗೆ ಹಾಜರಾಗಿದ್ದರೆ ಬಂಧನದ ವಾರೆಂಟ್ ಜಾರಿ ಅಗುತ್ತದೆ ಎಂದು ಅರ್ಜಿದಾರರ ಪರ ವಕೀಲ ವಿನೋದ್ ಹೇಳಿದ್ದಾರೆ.