ಹಾಸನ : ಮಹಿಳೆ ಅಪಹರಣ ಪ್ರಕಣಕ್ಕೆ ಸಂಬಂಧಿಸಂತೆ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಭವಾನಿ ರೇವಣ್ಣ ವಿಚಾರಣೆಗಾಗಿ ಅವರ ನಿವಾಸಕ್ಕೆ ತೆರಳಿದ್ದಾರೆ.
ಅಪಹರಣ ಪ್ರಕರಣದಲ್ಲಿ ಎಸ್ ಐಟಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗದೇ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ಭವಾನಿ ರೇವಣ್ಣಗೆ ಹಿನ್ನಡೆಯಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ ಮನೆಗೆ ಎಸ್ಐಟಿ ಇನ್ಸ್ ಪೆಕ್ಟರ್ ಶ್ರೀಧರ್ ನೇತೃತ್ವದ ತಂಡ ಹಾಸನದ ಹೊಳೆನರಸೀಪುರದ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಮಹಿಳೆಯ ಕಿಡ್ನಾಪ್ ಕೇಸ್ ನಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಯಾವುದೇ ಕ್ಷಣದಲ್ಲೂ ಭವಾನಿ ರೇವಣ್ಣರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ. ವಿಚಾರಣೆಗೆಗಾಗಿ ಹೊಳೆನರಸೀಪುರಕ್ಕೆ ಆಗಮಿಸುವುದಾಗಿ ಎಸ್ ಐಟಿ ಹೇಳಿದ್ದು, ಒಂದು ವೇಳೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾದ್ರೆ ಬಂಧಿಸುವ ಸಾಧ್ಯತೆ ಇದೆ.
ಭವಾನಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಅವರನ್ನು ಎಸ್ಐಟಿ ಅಧಿಕಾರಿಗಳು ಶೀಘ್ರವೇ ಬಂಧಿಸೋ ಸಾಧ್ಯತೆ ಇದೆ. ಈ ಮೂಲಕ ಪುತ್ರ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಅಮ್ಮ ಭವಾನಿ ರೇವಣ್ಣಗೂ ಕೋರ್ಟ್ ಬಿಗ್ ಶಾಕ್ ನೀಡಿದೆ.