ನವದೆಹಲಿ:ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 319 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.ಕಾಂಗ್ರೆಸ್ ಎರಡು ಕ್ಷೇತ್ರದಲ್ಲಿ ಮುನ್ನಡೆ ಇದೆ.ಟಿಎಂಸಿ 15 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಡಿಕೆ ಸುರೇಶ್ ಮುನ್ನಡೆ ಗಳಿಸಿದ್ದಾರೆ.ಇನ್ನೂ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆಯಲ್ಲಿ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಭರ್ಜರಿ ಮುನ್ನಡೆ ಇದೆ.ಅಂಚೆ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ ರಾಜ್ಯದಲ್ಲಿ 21 ಕಡೆ ಮುನ್ನಡೆ ಇದೆ.6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಇದೆ.
ಮಂಡ್ಯದಲ್ಲಿ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಗಳಿಸಿದ್ದಾರೆ.ದೇಶದಲ್ಲಿ ಎನ್ಡಿಎ 323 ಕ್ಷೇತ್ರದಲ್ಲಿ ಮುನ್ನಡೆ ಇದೆ.ಇಂಡಿಯಾ ಕೂಟ 142 ಕಡೆ ಮುನ್ನಡೆ ಗಳಿಸಿದೆ.
ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಆದ ಜಾಗದಲ್ಲಿ ಬಿಜೆಪಿಗೆ ಹಿನ್ನಡೆ ಆಗಿದೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಗಳಿಸಿದ್ದಾರೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಯನಾಡ್ ಮತ್ತು ರಾಯ್ ಬರೇಲಿ ಯಲ್ಲಿ ಮುನ್ನಡೆ ಇದೆ.ಕೊಯಮತ್ತೂರಿನಲ್ಲಿ ಬಿಜೆಪಿಯ ಅಣ್ಣಾಮಲೈಗೆ ಮುನ್ನಡೆ ಇದೆ.