ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಹಿನ್ಡಡೆ ಸಾಧಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆಯ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಕಾಂಗ್ರೆಸ್ 155,626 ಮತ ಪಡೆದ್ರೆ, ಬಿಜೆಪಿ ಅಭ್ಯರ್ಥಿ 1,33,122 ಮತ ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮನ್ಸೂಲ್ ಅಲಿ ಖಾನ್ 22,504 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ 92,840 ಮತಗಳನ್ನು ಪಡೆದುಕೊಂಡಿದ್ದರೆ, ಸೌಮ್ಯ ರೆಡ್ಡಿ 38,914 ಮತಗಳನ್ನು ಪಡೆದಿದ್ದಾರೆ.
ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.