ಬೆಂಗಳೂರು : ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸಲು 10 ಗುಂಟೆ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇ ಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.ಈ ಸಂಬಂಧ ವಿ.ಎಸ್.ಎಸ್. ಅಭಿಮಾನ್ ಡಾ. ವಿಷ್ಣುವರ್ಧನ್ ಪುಣ್ಯ ಭೂಮಿ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೋರಡಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಡಾ.ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಒಬ್ಬ ಮೇರು ನಟ. ಅವರ ಅಂತ್ಯಕ್ರಿಯೆ ನಡೆದ ಜಾಗದಲ್ಲಿ ಸ್ಮಾರಕ ಭವನ ನಿರ್ಮಾಣ ಆಗಬೇಕು ಎಂಬುದು ಅರ್ಜಿದಾರರ ಅಭಿಲಾಷೆ. ಸ್ಮಾರಕ ಭವನ ನಿರ್ಮಾಣಕ್ಕೆ ಅಭಿಮಾನ್ ಸ್ಟುಡಿಯೋಗೆ ಮಂ ಜೂರಾದ ಜಾಗದ ಪೈಕಿ ಕೆಂಗೇರಿಯ ಮೈಲಸಂದ್ರ ಗ್ರಾಮದ ಸರ್ವೇ ನಂ. 26, 68ರಲ್ಲಿ 10 ಗುಂಟೆ ಜಾಗವನ್ನು ಕೇಳಿ 2017ರಲ್ಲಿ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.
ಇಂತಹ ವಿಚಾರಗಳ ಬಗ್ಗೆ ಹೈಕೋರ್ಟ್ ವ್ಯವಹರಿಸಲಾಗದು. ಅಗತ್ಯವಿ ದ್ದರೆ ಸರ್ಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾ ರದ ಮೂಲಕ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಬಹುದು. ಅರ್ಜಿದಾರರಿಗೆ ದೊಡ್ಡ ಪ್ರಮಾಣದ ದಂಡ ವಿಧಿಸಬಹುದಾದರೂ ಆ ಕ್ರಮಕ್ಕೆ ಮುಂದಾಗದೆ ತಾಳ್ಮೆಯಿಂದಲೇ ಅರ್ಜಿ ವಜಾಗೊಳಿಲಾಗುತ್ತಿದೆ. ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸಲು ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವುದು ಸೂಕ್ತವಲ್ಲ. ಈ ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯೂ ಅಡಗಿಲ್ಲ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.